![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 11, 2020, 11:15 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್ನಿಂದ ಮೊದಲ ಸಾವು ಸಂಭವಿಸಿದೆ.
ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದ 58 ವರ್ಷದ ವ್ಯಕ್ತಿ ಶ್ವಾಸಕೋಶದ ಸೋಂಕಿನ ಕಾರಣ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಾಗಿದ್ದು ಶನಿವಾರ ಮೃತಪಟ್ಟಿದ್ದಾರೆ.
ಈ ವ್ಯಕ್ತಿ ಮೃತಪಟ್ಟ ಬಳಿಕ ಲಭ್ಯವಾದ ಅವರ ಗಂಟಲು ದ್ರವ ಮಾದರಿ ಪರೀಕ್ಷೆಯ ಫಲಿತಾಂಶದಲ್ಲಿ ಪಾಸಿಟಿವ್ ಬಂದಿದೆ.
ಉಸಿರಾಟದ ತೊಂದರೆ ಕಾರಣದಿಂದ ಈ ವ್ಯಕ್ತಿ ಜು.8ರಂದು ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ತೊಂದರೆಯಿದ್ದ ಕಾರಣ ಅಂದೇ ಅವರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಆರ್ಟಿ-ಪಿಸಿಆರ್ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ಪರೀಕ್ಷೆಯ ಫಲಿತಾಂಶ ಬರುವ ಮುನ್ನವೇ ಶನಿವಾರ ಬೆಳಿಗ್ಗೆ 9.30ರಲ್ಲಿ ಮೃತಪಟ್ಟರು.
ಹೀಗಾಗಿ ಮರಣೋತ್ತರವಾಗಿ ಮತ್ತೊಮ್ಮೆ ಗಂಟಲು ದ್ರವ ಮಾದರಿಯನ್ನು ಟ್ರೂನಾಟ್ (ಶೀಘ್ರ ವರದಿ ದೊರಕುವ ವಿಧಾನದ )ಪರೀಕ್ಷೆಗೆ ಒಳಪಡಿಸಲಾಯಿತು. ಇದರಲ್ಲಿ ಆ ವ್ಯಕ್ತಿಗೆ ಕೋವಿಡ್-19 ದೃಢಪಟ್ಟಿತು. ಆದರೂ ಶನಿವಾರ ರಾತ್ರಿಯವರೆಗೂ ಆರ್ಟಿ-ಪಿಸಿಆರ್ ವರದಿ ನಿರೀಕ್ಷಿಸಲಾಗಿತ್ತು. ಶನಿವಾರ ರಾತ್ರಿ 10.30ರಲ್ಲಿ ಆ ವರದಿ ಲಭ್ಯವಾಗಿ, ಅದರಲ್ಲೂ ಕೋವಿಡ್ 19 ದೃಢಪಟ್ಟಿತು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ತಿಳಿಸಿದ್ದಾರೆ.
ಈ ವ್ಯಕ್ತಿಯ ಶವ ಸಂಸ್ಕಾರವನ್ನು ಕೋವಿಡ್ ಮೃತದೇಹ ವಿಲೇವಾರಿ ಮಾರ್ಗಸೂಚಿಯ ಅನುಸಾರ ನಗರದ ಎಡಬೆಟ್ಟದ ಸಮೀಪ ಶನಿವಾರ ರಾತ್ರಿ ನಡೆಸಲಾಯಿತು. ಈ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯ ವಾರ್ಡ್ ಅನ್ನು ಸ್ಯಾನಿಟೈಸ್ ಮಾಡಿ, ಸೀಲ್ಡೌನ್ ಮಾಡಲಾಗಿದೆ.
ಈ ವ್ಯಕ್ತಿಗೆ ಚಿಕಿತ್ಸೆ ನೀಡಿದ ಆಸ್ಪತ್ರೆಯ ವೈದ್ಯರು, ವೈದ್ಯೇತರ ಸಿಬ್ಬಂದಿ, ಸಂಬಂಧಿಕರು ಹಾಗೂ ಆತನನ್ನು ಸಂಪರ್ಕಿಸ್ದಿ ಎಲ್ಲರನ್ನೂ ಕಡ್ಡಾಯ ಗೃಹ ಕ್ವಾರಂಟೀನ್ನಲ್ಲಿ ಇರಿಸಲಾಗಿದ್ದು, ಅವರೆಲ್ಲರ ಕೋವಿಡ್ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ವ್ಯಕ್ತಿಗೆ ಕೋವಿಡ್ ಸೋಂಕು ಹೇಗೆ ತಗುಲಿರಬಹುದೆಂಬ ಬಗ್ಗೆ ಇನ್ನೂ ಖಚಿತವಾಗಿಲ್ಲ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು
Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು
Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ
Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ
You seem to have an Ad Blocker on.
To continue reading, please turn it off or whitelist Udayavani.