ಚಾಮರಾಜನಗರ: ಗೆದ್ದ ಅಭ್ಯರ್ಥಿ ಸೋತರು, ಸೋತ ಅಭ್ಯರ್ಥಿ ಗೆದ್ದರು!


Team Udayavani, Dec 30, 2020, 10:57 PM IST

Untitled-2

ಸಾಂದರ್ಭಿಕ ಚಿತ್ರ

ಚಾಮರಾಜನಗರ: ಕೆಲವೊಮ್ಮೆ ಅದೃಷ್ಟವಿಲ್ಲದಿದ್ದರೆ ಎಲ್ಲ ಪ್ರಯತ್ನ ವ್ಯರ್ಥ ಎಂಬ ಮಾತಿದೆ. ಅದಕ್ಕೆ ಇಲ್ಲಿದೆ ಒಂದು ನಿದರ್ಶನ. ತಾಲೂಕಿನ ಅರಕಲವಾಡಿ ಗ್ರಾ.ಪಂ.ನಲ್ಲಿ ಅಭ್ಯರ್ಥಿಯೊಬ್ಬರು ಗೆದ್ದರೂ, ಮೀಸಲು ಸ್ಥಾನದ ಮಹಿಳಾ ಅಭ್ಯರ್ಥಿಯೊಂದಿಗೆ ಲಾಟರಿ ಮೂಲಕ ನಡೆದ ಪೈಪೋಟಿಯಲ್ಲಿ ಸೋತ ಘಟನೆ ನಡೆಯಿತು.

ಅರಕಲವಾಡಿ ಗ್ರಾಮದ ಒಂದನೇ ಬ್ಲಾಕ್‌ನಲ್ಲಿ ಸಾಮಾನ್ಯ ಹಾಗೂ ಸಾಮಾನ್ಯ ಮಹಿಳೆ ಮೀಸಲು ಸ್ಥಾನಗಳಿವೆ. ಸಾಮಾನ್ಯ ಸ್ಥಾನದಲ್ಲಿ ಕಾಂಗ್ರೆಸ್ ಬೆಂಬಲಿತ ಮಹದೇವಸ್ವಾಮಿ (ಮಂಜುನಾಥ್) ಹಾಗೂ ಬಿಜೆಪಿ ಬೆಂಬಲಿತ ಬಿ. ಕುಮಾರ್ ಸ್ಪರ್ಧಿಸಿದ್ದರು.

ಸಾಮಾನ್ಯ ಮಹಿಳಾ ಮೀಸಲು ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ದಾಕ್ಷಾಯಿಣಿ ಹಾಗೂ ಕಾಂಗ್ರೆಸ್ ಬೆಂಬಲಿತ ರೂಪಾ ಸ್ಪರ್ಧಿಸಿದ್ದರು.

ಸಾಮಾನ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಬಿ. ಕುಮಾರ್ 368 ಮತಗಳನ್ನು ಗಳಿಸಿ ಗೆದ್ದರು. ಸೋತ ಮಹದೇವಸ್ವಾಮಿ 366 ಮತ ಪಡೆದರು.ಕೇವಲ 2 ಮತಗಳ ಅಂತರದಿಂದ ಕುಮಾರ್ ಗೆದ್ದಿದ್ದರು. ಅವರ ಗೆಲುವಿನ ಹರ್ಷ ಹೆಚ್ಚು ಕಾಲ ಉಳಿಯಲಿಲ್ಲ.

ಅತ್ತ, ಸಾಮಾನ್ಯ ಮಹಿಳಾ ಮೀಸಲು ಸ್ಥಾನದಲ್ಲಿ ದಾಕ್ಷಾಯಿಣಿ 384 ಮತ ಪಡೆದು ರೂಪಾ ವಿರುದ್ಧ ಜಯಗಳಿಸಿದ್ದರು. ಸೋತ ರೂಪಾ 368 ಮತಗಳನ್ನು ಪಡೆದಿದ್ದರು.

ಮೀಸಲಾತಿ ನಿಯಮದಂತೆ ಮೀಸಲು ಸ್ಥಾನದಿಂದ ಸೋತವರು ಸಾಮಾನ್ಯ ಸ್ಥಾನದ ಅಭ್ಯರ್ಥಿಗಳಾಗಿ ಪರಿವರ್ತನೆಯಾಗುತ್ತಾರೆ. ಸೋತವರು ಪಡೆದ ಮತ ಸಾಮಾನ್ಯ ಕ್ಷೇತ್ರದ ಗೆದ್ದ ಅಭ್ಯರ್ಥಿ ಪಡೆದ ಮತಕ್ಕಿಂತ ಹೆಚ್ಚಿದ್ದರೆ, ಮೀಸಲಿನಿಂದ ಬಂದ ಅಭ್ಯರ್ಥಿ ಜಯಗಳಿಸುತ್ತಾರೆ. ಇಲ್ಲಿ ಈ ನಿಯಮ ಅನ್ವಯಿಸಿದಾಗ ಬಿ. ಕುಮಾರ್ ಹಾಗೂ ರೂಪಾ ಅವರಿಗೆ ತಲಾ 368 ಮತಗಳು ಬಂದಿದ್ದವು! ಆಗ ಲಾಟರಿ ಮೂಲಕ ಆಯ್ಕೆ ನಡೆಯಿತು. ಲಾಟರಿಯಲ್ಲಿ ರೂಪಾ ಗೆದ್ದರು! ಇತ್ತ ಗೆದ್ದಿದ್ದರೂ ಕುಮಾರ್ ಸೋತರು. ಸೋತಿದ್ದರೂ ರೂಪಾ ಗೆದ್ದರು!

ಟಾಪ್ ನ್ಯೂಸ್

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.