Gundlupet: ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ 44 ಲಕ್ಷ ರೂ. ದರೋಡೆ


Team Udayavani, Sep 28, 2023, 7:26 PM IST

Gundlupet: ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ 44 ಲಕ್ಷ ರೂ. ದರೋಡೆ

ಗುಂಡ್ಲುಪೇಟೆ(ಚಾಮರಾಜನಗರ): ಕೇರಳ ಮೂಲದ ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿದ ಗುಂಪೊಂದು 44 ಲಕ್ಷ ರೂ. ದರೋಡೆ ಮಾಡಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಅಗತಗೌಡನಹಳ್ಳಿ ಸಮೀಪದಲ್ಲಿ ಬುಧವಾರ ತಡರಾತ್ರಿ ನಡೆದಿದೆ.

ಕೇರಳ ಮೂಲದ ಚಿನ್ನದ ವ್ಯಾಪಾರಿ ರಹೀಂ ಮತ್ತು ಆತನ ಸ್ನೇಹಿತ ನೌಫಾಜ್ ಇಬ್ಬರು ಮೈಸೂರಿನಲ್ಲಿ ಚಿನ್ನ ಮಾರಾಟ ಮಾಡಿ ಹಣ ತೆಗೆದುಕೊಂಡು ಕೇರಳಕ್ಕೆ ತೆರಳುತ್ತಿದ್ದ ವೇಳೆ ಕೇರಳ ಮೂಲದ ದರೋಡೆಕೋರರ ಸುಮಾರು 10 ಮಂದಿಯ ಗುಂಪೊಂದು ಎರಡು ಕಾರು ಹಾಗು ಒಂದು ಲಾರಿಯಲ್ಲಿ ಬಂದು ರಾಷ್ಟ್ರೀಯ ಹೆದ್ದಾರಿ ಅಗತಗೌಡನಹಳ್ಳಿ ಸಮೀಪ ಚಿನ್ನದ ವ್ಯಾಪಾರಿ ಕಾರು ಅಡ್ಡಗಟ್ಟಿ ವ್ಯಾಪಾರಿಗೆ ಥಳಿಸಿ ಆತನ ಬಳಿಯಿದ್ದ ಹಣವನ್ನು ದೋಚಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ನೌಫಾಜ್ ಇಳಿದು ಓಡಿ ಹೋಗಿದ್ದಾರೆ. ನಂತರ ಚಿನ್ನದ ವ್ಯಾಪಾರಿ ಬೇಗೂರು ಪೊಲೀಸ್ ಠಾಣೆಗೆ ಆಗಮಿಸಿ, ದರೋಡೆ ಸಂಬಂಧ ದೂರು ನೀಡಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಬೇಗೂರು ಠಾಣೆ ಪೊಲೀಸ್ ತನಿಖೆ ಆರಂಭಿಸಿ, ದರೋಡೆಕೋರರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಸ್ಥಳಕ್ಕೆ ಎಸ್ಪಿ ಭೇಟಿ: ದರೋಡೆ ನಡೆದ ಮಾಹಿತಿ ತಿಳಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೋ, ಎಎಸ್ಪಿ ಉದೇಶ್, ಡಿವೈಎಸ್ಪಿ ಲಕ್ಷ್ಮಯ್ಯ, ಸರ್ಕಲ್ ಇನ್ಸ್ ಪೆಕ್ಟರ್ ವನರಾಜು, ಸಬ್ ಇನ್ಸ್ ಪೆಕ್ಟರ್ ಚರಣ್ ಗೌಡ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಸಿಸಿ ಕ್ಯಾಮಾರಾ ಪರಿಶೀಲನೆ: ದರೋಡೆ ಘಟನೆ ಸಂಬಂಧ ಕಾರ್ಯಾಚರಣೆ ಚುರುಕುಗೊಳಿಸಿದ ಪೊಲೀಸ್ ರಾಷ್ಟ್ರೀಯ ಹೆದ್ದಾರಿಯಲ್ಲಿನ ಹಲವು ಸಿಸಿ ಕ್ಯಾಮಾರಾಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ದರೋಡೆಕೋರರ ಕುರಿತು ಯಾವುದೇ ಮಾಹಿತಿ ತಿಳಿದು ಬಂದಿಲ್ಲ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.