ಗುಂಡ್ಲುಪೇಟೆ: ರೈತನ ಮೇಲೆ ದಾಳಿ ಮಾಡಿ ಭೀತಿ ಹುಟ್ಟಿಸಿದ್ದ ಆನೆ ಕೊನೆಗೂ ಸೆರೆ
Team Udayavani, Jan 3, 2023, 7:42 PM IST
ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಬೆಟ್ಟದಮಾದಹಳ್ಳಿ ರೈತನ ಮೇಲೆ ದಾಳಿ ಮಾಡಿದ್ದ ಒಂಟಿ ಸಲಗವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಹಂಚೀಪುರ ಗ್ರಾಮದ ಬಳಿ ಸೆರೆ ಹಿಡಿದಿದ್ದಾರೆ.
ಒಂಟಿ ಸಲಗ ಸೋಮವಾರ ಬೆಳಗ್ಗೆ ಬೆಟ್ಟದಮಾದಹಳ್ಳಿ ರೈತ ದೇವರಾಜಪ್ಪ ಎಂಬುವವರ ಮೇಲೆ ದಾಳಿ ನಡೆಸಿ ತೀವ್ರ ಗಾಯಗೊಳಿಸಿತು. ಜೊತೆಗೆ ರೈತರ ಬಾಳೆ ಫಸಲು, ಹುರುಳು, ತಂತಿ ಬೇಲಿ ಸೇರಿದಂತೆ ಇತರೆ ಬೆಳೆಗಳನ್ನು ತುಳಿದು ನಾಶಪಡಿಸಿತ್ತು. ವಲಯ ಅರಣ್ಯಾಧಿಕಾರಿ ನವೀನ್ಕುಮಾರ್ ಹಾಗು ಸಿಬ್ಬಂದಿ ಆನೆ ಸೆರೆಗೆ ಹರ ಸಾಹಸ ನಡೆಸಿದರು ಕೂಡ ಪ್ರಯೋಜನವಾಗಿರಲಿಲ್ಲ. ನಂತರ ಸೋಮವಾರ ರಾತ್ರಿ ಓಂಕಾರ ಅರಣ್ಯದತ್ತ ತೆರಳಿದೆ.
ಮಂಗಳವಾರ ಬೆಳಗ್ಗೆ ಓಂಕಾರ ವಲಯಕ್ಕೆ ಹೊಂದಿ ಕೊಂಡಂತಿರುವ ಹಂಚೀಪುರ ಬಳಿ ಆನೆ ಕಾಣಿಸಿಕೊಂಡಿದೆ. ಮಂಗಳವಾರ ಬೆಳಗ್ಗೆ ಅಭಿಮನ್ಯು, ಮಹೇಂದ್ರ, ಭೀಮ, ಗಣೇಶ್ ಸಾಕಾನೆಗಳನ್ನು ಹಂಚೀಪುರ ಬಳಿಗೆ ಕರೆ ತಂದರು. ಜೊತೆಗೆ ಪಶು ವೈದ್ಯರಾದ ಡಾ.ಮುಜೀಬ್, ಡಾ.ವಾಸೀಂ, ಡಾ.ರಮೇಶ್ ಹಾಗು ಶೂಟರ್ ಸಹಾಯಕ ಅಕ್ರಂ ಹಾಗು ಸಿಬ್ಬಂದಿ ಜಮಾಯಿಸಿದರು. ಮಧ್ಯಾಹ್ನ ಆನೆ ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸಿ ನಂತರ ಆನೆಗೆ ಅರವಳಿಕೆ ಮದ್ದು ನೀಡಿದ ಬಳಿಕ ಆನೆ ನಿತ್ರಾಣವಾಯಿತು. ತದ ನಂತರ ಆನೆಯನ್ನು ನಾಲ್ಕು ಸಾಕಾನೆಗಳು ಸುತ್ತುವರಿದವು. ಈ ವೇಳೆ ಕ್ರೈನ್ ಮೂಲಕ ಲಾರಿಗೆ ಆನೆಯನ್ನು ಹಾಕಿದರು. ನಂತರ ಸೆರೆಯಾದ ಆನೆಯನ್ನು ಲಾರಿ ಮೂಲಕ ಕಲ್ಕರೆ ವಲಯದ ಬಳಿಯ ರಾಂಪುರ ಆನೆ ಶಿಬಿರಕ್ಕೆ ರವಾನಿಸಲಾಗಿದೆ.
ಕಾರ್ಯಾಚರಣೆ ನಡೆಸಿದ ಆನೆ ಸೆರೆಯಾದ ಬಳಿಕ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್ಕುಮಾರ್, ಎಸಿಎಫ್ ಜಿ.ರವೀಂದ್ರ, ಕೆ.ಪರಮೇಶ್ ಭೇಟಿ ನೀಡಿದ್ದರು.
ಇದನ್ನೂ ಓದಿ: ಬಿಜೆಪಿ ತ್ಯಜಿಸಲು ಅಣ್ಣಾಮಲೈ ಕಾರಣ! ನಟಿ ಗಾಯತ್ರಿ ರಘುರಾಮ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ
Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್ ಭೇಟಿ
Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.