Gundlupete: ಭಾರಿ ಮಳೆಗೆ ಹೊಳೆಯಂತಾದ ರಸ್ತೆಗಳು… ಕೊಚ್ಚಿ ಹೋದ ಬೆಳೆಗಳು


Team Udayavani, Jun 6, 2024, 7:42 PM IST

Gundlupete: ಭಾರಿ ಮಳೆಗೆ ಹೊಳೆಯಂತಾದ ರಸ್ತೆಗಳು… ಕೊಚ್ಚಿ ಹೋದ ಬೆಳೆಗಳು

ಗುಂಡ್ಲುಪೇಟೆ(ಚಾಮರಾಜನಗರ): ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗಂಟೆಗೂ ಅಧಿಕ ಕಾಲ ಸುರಿದ ಜೋರು ಮಳೆಗೆ ಕಾಲುವೆಗಳಲ್ಲಿ ಭಾರಿ ಪ್ರಮಾಣದ ನೀರು ಹರಿದು, ರಸ್ತೆಗಳು ಮುಳುಗಡೆಯಾಗುವ ಜೊತೆಗೆ ಸಣ್ಣಪುಟ್ಟ ಕೆರೆ-ಕಟ್ಟೆಗಳು ತುಂಬಿ ದೊಡ್ಡ ಕೆರೆಗಳತ್ತ ನೀರು ಬೋರ್ಗರೆದು ಹರಿಯುತ್ತಿದೆ.

ತಾಲೂಕಿನ ಹಂಗಳ, ತೆರಕಣಾಂಬಿ, ಕಸಬಾ ಹಾಗೂ ಬೇಗೂರು ಹೋಬಳಿ ವ್ಯಾಪ್ತಿಯ ಬಹುತೇಕ ಗ್ರಾಮಗಳಲ್ಲಿ ಗುರುವಾರ ಮಧ್ಯಾಹ್ನ ಭಾರಿ ಮಳೆ ಸುರಿದಿದ್ದು, ಜಮೀನುಗಳಲ್ಲಿ ಕೆರೆಗಳಂತೆ ನೀರು ಸಂಗ್ರಹವಾಗಿತ್ತು. ಇದರಿಂದ ಈರುಳ್ಳಿ, ಅರಿಶಿಣ, ಸೂರ್ಯಕಾಂತಿ, ಅಲಸಂದೆ ಇತರೆ ಬೆಳೆಗಳು ಮಳೆ ನೀರಿನಲ್ಲಿ ಕೊಚ್ಚಿ ಹೋಗಿವೆ.

ತಾಲೂಕಿನ ಅಣ್ಣೂರುಕೇರಿ, ಕೋಡಹಳ್ಳಿ, ಶಿವಪುರ, ಬೊಮ್ಮಲಾಪುರ, ಮಳವಳ್ಳಿ, ಕೂತನೂರು, ಪಡುಗೂರು, ಹಾಲಹಳ್ಳಿ, ತೊಂಡವಾಡಿ ರಸ್ತೆ ಮಳುಗಡೆಯಾದ ಪರಿಣಾಮ ಸಂಚಾರಕ್ಕೆ ವ್ಯತ್ಯಯ ಉಂಟಾಯಿತು. ಇನ್ನೂ ಮಳೆ ನೀರು ಹಲವು ಗ್ರಾಮಗಳ ಜಮೀನುಗಳಲ್ಲಿ ಹೊಳೆಯಂತೆ ಮತ್ತು ಹಳ್ಳಗಳಲ್ಲೂ ರಭಸದಿಂದ ಉಕ್ಕಿ ಹರಿಯಿತು. ಕಸಕಡ್ಡಿ, ಮರದ ದಿಮ್ಮಿಗಳು, ಭೂತಾಳೆ ಕಟ್ಟೆಗಳು, ತೆಂಗಿನ ಮಟ್ಟೆಗಳನ್ನು ಹೊತ್ತು ರಭಸದಿಂದ ಸಾಗಿತು. ಹಲವು ಕಡೆಗಳಲ್ಲಿ ಜಮೀನುಗಳಿಗೆ ಹೋಗಲೆಂದು ರೈತರು ಮಾಡಿಕೊಂಡಿರುವ ಕಿರುಸೇತುವೆಗಳು ಕಿತ್ತುಕೊಂಡು ಹೋಗಿವೆ. ಗೋಕಟ್ಟೆ ಮತ್ತು ಚಿಕ್ಕೆಕೆರೆಗಳು ತುಂಬಿರುವ ಹಿನ್ನೆಲೆಯಲ್ಲಿ ಮಳೆ ನೀರು ದೊಡ್ಡ ಕೆರೆಗಳನ್ನು ಸೇರಿತು.

ಬರಗಿ, ವಡೆಯನಪುರ ಇತರೆ ದೊಡ್ಡಕೆರೆಗಳು ಕೋಡಿ ಬಿದ್ದಿವೆ. ಮಳೆಯಿಂದ ತಾಲೂಕಿನ ಅಣ್ಣೂರುಕೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಳೆ ನೀರು ನದಿಯಂತೆ ಹರಿಯಿತು. ಇದೇ ಪ್ರದೇಶದ ಬಳಿ ಸೇತುವೆ ತುಂಬಿ ಹರಿದ ಪರಿಣಾಮ ಬೊಮ್ಮಲಾಪುರ ಮುಖ್ಯ ರಸ್ತೆ ಸಂಪರ್ಕ ಕಡಿತವಾಯಿತು. ವಡೆಯನಪುರ ಗ್ರಾಮದ ಬಳಿಯೂ ಕೊಡಸೋಗೆ ರಸ್ತೆ ಸಂಪರ್ಕ ಕಡಿತವಾಯಿತು.

ಪಟ್ಟಣದ ಸಾರಿಗೆ ಬಸ್ ನಿಲ್ದಾಣ, ಮಡಹಳ್ಳಿ ಸರ್ಕಲ್ ಎಂದಿನಂತೆ ಕೆರೆಯಂತಾಗಿದ್ದವು. ತಾಲೂಕಿನ ವಡ್ಡಗೆರೆಗೆ ಕೆರೆ ಏತ ನೀರಾವರಿ ಯೋಜನೆಯಡಿ ತುಂಬಿ ಕೋಡಿ ಬಿದ್ದಿದೆ. ಮುಂದಿನ ಕೆರೆಗಳಿಗೆ ನೀರು ಹರಿಸುತ್ತಿದ್ದು, ಇದರೊಂದಿಗೆ ಮಳೆ ನೀರು ಸೇರಿಕೊಳ್ಳುವ ಕಾರಣ ತಾಲೂಕಿನಲ್ಲಿ ಬಹುತೇಕ ಕೆರೆಗಳು ಮಳೆಯ ಕಾರಣದಿಂದ ತುಂಬಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಮಳೆಯಿಂದ ನೀರಾವರಿ ಮತ್ತು ಖುಷ್ಕಿ ಬೆಳೆಗಳಿಗೆ ಹಾನಿಯಾಗಿದೆ.

ಇದನ್ನೂ ಓದಿ: ಕಾಂತಾರ ಚಾಪ್ಟರ್ 1 ಯಶಸ್ಸಿಗೆ ಗೋಕರ್ಣದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಿರ್ದೇಶಕ ರಿಷಬ್ ಶೆಟ್ಟಿ

ಟಾಪ್ ನ್ಯೂಸ್

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Congress-Symbol

Congress: ಪಕ್ಷದ ನಿಲುವಿಗೆ ಭಿನ್ನ ಹೇಳಿಕೆ ನೀಡಿದರೆ ಸಹಿಸುವುದಿಲ್ಲ: ಕೆಪಿಸಿಸಿ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

Congress-Symbol

Congress: ಪಕ್ಷದ ನಿಲುವಿಗೆ ಭಿನ್ನ ಹೇಳಿಕೆ ನೀಡಿದರೆ ಸಹಿಸುವುದಿಲ್ಲ: ಕೆಪಿಸಿಸಿ

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ

Parameshwar

Government: ನ್ಯಾಯಾಧೀಶರೂ ಧರ್ಮ ಪಾಲಿಸಲಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidhana-Soudha

Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ

FKCCI

Digitization: ರಾಜ್ಯದ ಎಲ್ಲ ಎಪಿಎಂಸಿ ಡಿಜಿಟಲೀಕರಣ: ಸಚಿವ ಶಿವಾನಂದ ಪಾಟೀಲ್‌

1-kamindu

Test; ಬ್ರಾಡ್‌ಮನ್‌ ದಾಖಲೆ ಸರಿದೂಗಿಸಿದ ಮೆಂಡಿಸ್‌

cOurt

Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.