![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jun 10, 2024, 6:21 PM IST
ಗುಂಡ್ಲುಪೇಟೆ(ಚಾಮರಾಜನಗರ): ಬೇಗೂರು ಸಂತೆಯಿಂದ ಕಸಾಯಿ ಖಾನೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಐದು ಜಾನುವಾರುಗಳನ್ನು ರಕ್ಷಣೆ ಮಾಡಿ, ಓರ್ವ ಆರೋಪಿಯನ್ನು ಬಂಧಿಸಿರುವ ಘಟನೆ ತಾಲೂಕಿನ ಕಮರಹಳ್ಳಿ ರಸ್ತೆಯಲ್ಲಿ ಸೋಮವಾರ ನಡೆದಿದೆ.
ಗುಂಡ್ಲುಪೇಟೆ ಪಟ್ಟಣದ ಗೂಡ್ಸ್ ಆಟೋ ಚಾಲಕ ಅಬ್ದುಲ್ ಜಬ್ಬಾರ್ ಬಂಧಿತ ಆರೋಪಿ. ಉಳಿದ ಇರ್ಷಾದ್ ಹಾಗೂ ಜಾಕೀರ್ ಎಂಬ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಘಟನೆ ವಿವರ: ಬೇಗೂರು ಸಂತೆಯಿಂದ ಕಮರಹಳ್ಳಿ ಮಾರ್ಗವಾಗಿ ಐದು ಜಾನುವಾರುಗಳನ್ನು ಕಸಾಯಿ ಖಾನೆಗೆ ಅಕ್ರಮವಾಗಿ ಗೂಡ್ಸ್ ಆಟೋದಲ್ಲಿ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬೇಗೂರು ಸಬ್ ಇನ್ಸ್ ಪೆಕ್ಟರ್ ಚರಣ್ ಗೌಡ ನೇತೃತ್ವದ ತಂಡ ದಾಳಿ ನಡೆಸಿ, ಆಟೋ ಸಮೇತ ಜಾನುವಾರುಗಳನ್ನು ಹಿಡಿದಿದ್ದಾರೆ. ಈ ವೇಳೆ ಚಾಲಕ ಅಬ್ದುಲ್ ಜಬ್ಬಾರ್ ಸಿಕ್ಕಿಬಿದ್ದಿದ್ದು, ಇರ್ಷಾದ್ ಹಾಗೂ ಜಾಕೀರ್ ಇಬ್ಬರು ಪರಾರಿಯಾಗಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬೇಗೂರು ಠಾಣೆ ಪೊಲೀಸರು ಜಾನುವಾರುಗಳನ್ನು ಬರಗಿ ಗೋಶಾಲೆಗೆ ರವಾನಿಸಿದ್ದಾರೆ. ಜೊತೆಗೆ ಪರಾರಿಯಾದ ಇಬ್ಬರ ಬಂಧನಕ್ಕೆ ಬಲೆ ಬೀಸಿದ್ದಾರೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು
Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು
Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ
Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ
You seem to have an Ad Blocker on.
To continue reading, please turn it off or whitelist Udayavani.