![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 15, 2021, 10:22 PM IST
ಚಾಮರಾಜನಗರ: ರಸ್ತೆ ಅಪಘಾತದಲ್ಲಿ ಎರಡು ಪ್ರತ್ಯೇಕ ಬೈಕ್ಗಳ ಸವಾರರು ಮೃತಪಟ್ಟಿರುವ ಘಟನೆ ತಾಲೂಕಿನ ಹರದನಹಳ್ಳಿ ಫಾರಂ ಬಳಿ ಬುಧವಾರ ಸಂಜೆ ನಡೆದಿದೆ.
ತಾಲೂಕಿನ ಚಂದುಕಟ್ಟೆಮೋಳೆ ಗ್ರಾಮದ ಮಹೇಶ (23) ಹಾಗೂ ಹುಲ್ಲೇಪುರ ಗ್ರಾಮದ ಮಣಿಕಂಠ (23) ಮೃತರು. ಮಹೇಶ್ ಮತ್ತು ಮಣಿಕಂಠ ಪ್ರತ್ಯೇಕ ಬೈಕ್ಗಳಲ್ಲಿ ಸವಾರಿ ಮಾಡುತ್ತಿದ್ದರು. ಹರದನಹಳ್ಳಿ ಕೃಷಿ ಫಾರಂ ಬಳಿ ಮಹೇಶ್ ಬೈಕ್ ಚಲಿಸುತ್ತಿದ್ದ ಟ್ಯಾಂಕರ್ಗೆ ತಗುಲಿದೆ. ಇದರಿಂದ ಆಯತಪ್ಪಿದ ಮಹೇಶನ ಬೈಕ್ ಮಣಿಕಂಠನ ಬೈಕ್ಗೆ ತಗುಲಿದೆ. ಹೀಗಾಗಿ ಇಬ್ಬರೂ ಬೈಕ್ನಿಂದ ಕೆಳಗೆ ಬಿದ್ದಿದ್ದಾರೆ. ಮಹೇಶ್ ಸ್ಥಳದಲ್ಲೇ ಮೃತಪಟ್ಟರೆ, ತೀವ್ರಗಾಯಗೊಂಡ ಮಣಿಕಂಠನಿಗೆ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಮೈಸೂರಿನ ಆಸ್ಪತ್ರೆಗೆ ಕರೆದೊಯ್ದಾಗ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.