ಈಶ ಫೌಂಡೇಷನ್‌ನಿಂದ ಇನ್ನರ್‌ ಇಂಜಿನಿಯರಿಂಗ್‌


Team Udayavani, Apr 11, 2021, 3:15 PM IST

ಈಶ ಫೌಂಡೇಷನ್‌ನಿಂದ ಇನ್ನರ್‌ ಇಂಜಿನಿಯರಿಂಗ್‌

ಚಾಮರಾಜನಗರ: ಸದ್ಗುರು ಜಗ್ಗಿ ವಾಸುದೇವ್‌ ಅವರ ಈಶ ಫೌಂಡೇಷನ್‌ನಿಂದ ಇನ್ನರ್‌ಇಂಜಿನಿಯರಿಂಗ್‌ ಎಂಬ 7 ದಿನದ ತರಬೇತಿಯನ್ನುಮೊಟ್ಟ ಮೊದಲ ಬಾರಿಗೆ ಕನ್ನಡದಲ್ಲಿ ಪ್ರಾರಂಭ ಮಾಡಲಿದ್ದು, ಪ್ರಪ್ರಥಮವಾಗಿ ನಗರದಲ್ಲಿ ಆಯೋಜಿಸಲಾಗಿದೆ.

ಇನ್ನರ್‌ ಎಂಜಿನಿಯರಿಂಗ್‌-ಜಗತ್ತಿನಾದ್ಯಂತ ಲಕ್ಷಾಂತರ ಜನರನ್ನು ಪ್ರಭಾವಿಸಿರುವ ಈಶಫೌಂಡೇಷನ್ನಿನ ಪ್ರಮುಖ ಕಾರ್ಯಕ್ರಮವಾಗಿದ್ದು,ಪ್ರಪ್ರಥಮ ಬಾರಿಗೆ ಚಾಮರಾಜನಗರದಲ್ಲಿ ಏ.14ರಿಂದ ಏಪ್ರಿಲ್‌ 20 ರವರೆಗೆ ನಡೆಸಲಾಗುತ್ತಿದೆ. ಶಾಂಭವಿ ಮಹಾಮುದ್ರ ಕ್ರಿಯೆಯನ್ನು ಒಳಗೊಂಡಿರುವ ಈ ಕಾರ್ಯಕ್ರಮವನ್ನು ತರಬೇತಿ ಪಡೆದ ಈಶ ಶಿಕ್ಷಕರು ಸಂಪೂರ್ಣವಾಗಿ ಕನ್ನಡದಲ್ಲಿನಡೆಸಲಿದ್ದಾರೆ. ಶಾಂಭವಿ ಮಹಾಮುದ್ರ ಕ್ರಿಯೆಯು ಪುರಾತನ ಮತ್ತು ಶಕ್ತಿಯುತ ಯೋಗವಿಧಾನವಾಗಿದ್ದು, ಇದು ವರ್ಧಿತ ಶಕ್ತಿ ಮಟ್ಟ, ಹೆಚ್ಚಿನಭಾವಾನಾತ್ಮಕ ಸಂತುಲನೆ ಮತ್ತು ಆರೋಗ್ಯದಸುಧಾರಣೆಯಿಂದ ಅಂತರಂಗದ ಯೋಗಕ್ಷೇಮವನ್ನುಉತ್ತೇಜಿಸುತ್ತದೆ. 15 ವರ್ಷ ಹಾಗೂ ಹೆಚ್ಚಿನ ವಯಸ್ಸಿನಯಾರಾದರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸ ಬಹುದು ಎಂದು ಈಶ ಫೌಂಡೇಶನ್‌ನ ಸ್ವಯಂ ಸೇವಕ ವೃಷಭ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶರೀರ, ಮನಸ್ಸು ಮತ್ತು ಪ್ರಾಣಶಕ್ತಿಯನ್ನುಸಂತುಲನಗೊಳಿಸಿ, ಅವುಗಳು ಸಾಮರಸ್ಯದಿಂದ ಕಾರ್ಯಗೈಯುವಂತೆ ಮಾಡಲು ಈಶ ಫೌಂಡೇಷನ್ನಿನಸಂಸ್ಥಾಪಕ ಸದ್ಗುರು ಈ ಇನ್ನರ್‌ ಎಂಜಿನಿಯರಿಂಗ್‌ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಿದ್ದಾರೆ. ಇದನ್ನುಜಗತ್ತಿನಾದ್ಯಂತ ಲಕ್ಷಾಂತರ ಈಶ ಸಾಧಕರುಅಭ್ಯಾಸಿಸುವರು. ದೈನಂದಿನ ಅಭ್ಯಾಸದಿಂದ ದೊರಕುವ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಪ್ರಯೋಜನಗಳಿಗೆ ಅನೇಕ ಸಾಧಕರು ಪುಷ್ಟಿ ನೀಡಿದಾರೆ ಎಂದರು.

7 ದಿನದ ಕಾರ್ಯಕ್ರಮವನ್ನು ನಗರದಶಂಕರಪುರದಲ್ಲಿರುವ ಸೇವಾಭಾರತಿ ಕಾಲೇಜುಕ್ಯಾಂಪಸ್‌ನಲ್ಲಿ ಬೆಳಗ್ಗೆ 6 ರಿಂದ 9 ರವರೆಗೆ, ಸಂಜೆ 6ರಿಂದ 9 ರವರೆಗೆ ನಡೆಸಲಾಗುವುದು. ಭಾಗವಹಿಸಲು ಇಚ್ಛಿಸುವವರು ಮೊಬೈಲ್‌ ಸಂಖ್ಯೆ 9886627666ಹಾಗೂ 9739376108 ಸಂಪರ್ಕಿಸಬಹುದು ಎಂದರು. ಸುದ್ದಿಗೋಷ್ಠಿಯಲ್ಲಿ ಸ್ವಯಂ ಸೇವಕ ನಕುಲ್‌ ಇತರರಿದ್ದರು

ಅಂತರಂಗದ ಯೋಗಕ್ಷೇಮ :

ಯೋಗ ಶಿಕ್ಷಕ ಮನು ಮಾತನಾಡಿ, ಇನ್ನರ್‌ಎಂಜಿನಿಯರಿಂಗ್‌ ಯೋಗದ ಪುರಾತನ ವಿಜ್ಞಾನದಿಂದಪಡೆದ ವಿಧಾನವಾಗಿದ್ದು, ಅಂತರಂಗದಯೋಗಕ್ಷೇಮಕ್ಕಾಗಿ ನಮ್ಮನ್ನು ನಾವು ಎಂಜಿನಿಯರ್‌ ಮಾಡಿಕೊಳ್ಳುವ ಸಾಧನಗಳನ್ನು ನೀಡುತ್ತದೆ. ಇದುಜೀವನದ ಎಲ್ಲ ಆಯಾಮಗಳಿಗೆ ಒಳಗಿನ ಅಡಿಪಾಯಮತ್ತು ಮುಂಗಾಣೆRಯನ್ನು (ವಿಷನ್‌) ಸ್ಥಾಪಿಸಲುಸಹಾಯ ಮಾಡುತ್ತದೆ. ಇಂದು ಎಲ್ಲರೂ ಒತ್ತಡದಜೀವನದಲ್ಲಿದ್ದೇವೆ. ಈ ಒತ್ತಡವನ್ನು ನಿವಾರಿಸಿಕೊಂಡುಜೀವನದಲ್ಲಿ ಶಾಂತಿ, ಪರಮಾನಂದ ಪಡೆದುಕೊಳ್ಳಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.