ಡಾ.ಅಂಬೇಡ್ಕರ್‌ ಭವನಕ್ಕೆ ಸಿಗುವುದೇ ಉದ್ಘಾಟನೆ ಭಾಗ್ಯ?


Team Udayavani, Mar 4, 2020, 3:00 AM IST

dr-ambedkar

ಕೊಳ್ಳೇಗಾಲ: ಕಳೆದ 2002ರಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ ಆರಂಭವಾದ ಕಾಮಗಾರಿ ಇದುವರೆಗೂ ಪೂರ್ಣಗೊಳ್ಳದೆ ಉದ್ಘಾಟನೆ ಭಾಗ್ಯವಿಲ್ಲದೆ ಭವನ ಜೂಜು ಮತ್ತು ಅನೈತಿಕ ಚಟುವಟಿಕೆಯ ತಾಣವಾಗಿ ಮಾರ್ಪಟ್ಟಿದೆ.

ಭವನದ ಕಟ್ಟಡ ಕಾಮಗಾರಿಗೆ ಸುಮಾರು 3.50 ಕೋಟಿ ರೂ. ಖರ್ಚಾಗಿದೆ. ಆದರೂ ಕಟ್ಟಡದ ಸುತ್ತಲೂ ಕಾಂಪೌಂಡ್‌, ಶಾಚಾಲಯಗಳಿಲ್ಲದೇ ಅಪೂರ್ಣಗೊಂಡಿದ್ದು, ಅಕ್ರಮ ಚಟುವಟಿಕೆ ತಾಣವಾಗಿದೆ. ಹೀಗಾಗಿ ಭವನಕ್ಕೆ ಉದ್ಘಾಟನೆ ಭಾಗ್ಯ ಯಾವಾಗ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಕೇಂದ್ರದ ಮಾಜಿ ಸಚಿವ ವಿ.ಶ್ರೀನಿವಾಸ್‌ ಪ್ರಸಾದ್‌, 25 ಲಕ್ಷ, ಮಾಜಿ ಕೇಂದ್ರ ಸಚಿವ ದಿ.ರಾಜಶೇಖರ್‌ ಮೂರ್ತಿ ತಮ್ಮ ನಿಧಿಯಿಂದ ಅನುದಾನ ನೀಡಿದ್ದರು.

ಶಾಸಕ ಎಸ್‌.ಬಾಲರಾಜ್‌ 25 ಲಕ್ಷ, ಸಂಸದರಾಗಿದ್ದ ಆರ್‌.ಧ್ರುವನಾರಾಯಣ್‌ 90 ಲಕ್ಷ, ಮಾಜಿ ಶಾಸಕ ಎ.ಆರ್‌.ಕೃಷ್ಣಮೂರ್ತಿ 90 ಲಕ್ಷ ಅನುದಾನ ಕೊಡಿಸಿದ್ದರು. ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಸರ್ಕಾರದಿಂದ ಒಂದು ಕೋಟಿ.. ಹೀಗೆ ಹಲವಾರು ಚುನಾಯಿತ ಪ್ರತಿನಿಧಿಗಳು ಅನುದಾನ ನೀಡಿದ್ದಾರೆ. ಆದರೂ ಭವನದಲ್ಲಿ ಸೂಕ್ತ ಮೂಲಸೌಕರ್ಯಗಳಿಲ್ಲ.

ಜತೆಗೆ ಕಾಮಗಾರಿಯಲ್ಲಿ ಹಣ ನುಂಗಿರುವ ಮಾತುಗಳು ಕೇಳುತ್ತಿವೆ ಎಂದು ಜನರು ಆರೋಪಿಸಿದ್ದಾರೆ. ಡಾ. ಅಂಬೇಡ್ಕರ ಭವನ ಉದ್ಘಾಟನೆಗೆ ಸಿದ್ಧತೆ ನಡೆದಿತ್ತು. ಆದರೆ ಡಾ.ಅಂಬೇಡ್ಕರ್‌ ಸ್ಮಾರಕ ಸಂಘದ ಪದಾಧಿಕಾರಿಗಳು ಕೇವಲ ಭವನ ಉದ್ಘಾಟನೆಯಾದರೆ ಸಾಲದು. ಅದರ ಸುತ್ತ ಗೋಡೆ, ಶೌಚಾಲಯ, ರಸ್ತೆ ನಿರ್ಮಿಸಿದ ಬಳಿಕ ಉದ್ಘಾಟಿಸುವಂತೆ ಒತ್ತಡ ಹೇರಿದ್ದರಿಂದ ಉದ್ಘಾಟನೆ ಭಾಗ್ಯ ದೊರೆಯಲಿಲ್ಲ.

ಬಳಿಕ ಹೆಚ್ಚಿನ ಮೂಲಸೌಲಭ್ಯಗಳನ್ನು ಒದಗಿಸಲು ಹೆಚ್ಚುವರಿ 2.40 ಕೋಟಿ ರೂ. ಬೇಕೆಂದು ಭೂಸೇನಾ ನಿಗಮದ ಅಧಿಕಾರಿಗಳು ಅಂದಾಜು ವೆಚ್ಚ ತಯಾರಿಸಿದ್ದಾರೆ. ಈವರೆಗೂ ಸರ್ಕಾರದಿಂದ ಹಣ ಮಂಜೂರಾಗಿಲ್ಲ. ಇನ್ನಾದರೂ ಸಂಬಂಧಿಸಿದವರು ಭವನಕ್ಕೆ ಉದ್ಘಾಟನೆ ಭಾಗ್ಯ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಕೂಡಲೇ ಸಮಾಲೋಚನೆ ನಡೆಸಲಾಗುವುದು ಅಥವಾ ನೂತನ ಬಜೆಟ್‌ನಲ್ಲಿ ಹಣ ಮಂಜೂರಾಗುವಂತೆ ಕ್ರಮಕೈಗೊಳ್ಳಲಾಗುವುದು.
-ಡಾ.ಎಂ.ಆರ್‌.ರವಿ, ಜಿಲ್ಲಾಧಿಕಾರಿ

ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ 2.40 ಕೋಟಿ ಮಂಜೂರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಂದು ಕೋಟಿ ಮಂಜೂರಾಗಿದ್ದು, ಉಳಿದ 1.40 ಕೋಟಿ ಹಣವನ್ನು ಹೊಸ ಬಜೆಟ್‌ನಲ್ಲಿ ಸೇರಿಸಿ, ಭವನ ಪೂರ್ಣಗೊಳಿಸಿ ಉದ್ಘಾಟನೆ ಮಾಡಲಾಗುವುದು.
-ಎನ್‌.ಮಹೇಶ್‌, ಶಾಸಕ

* ಡಿ.ನಟರಾಜು

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.