Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ
Team Udayavani, Oct 1, 2024, 12:53 PM IST
ಕೊಳ್ಳೇಗಾಲ: ಪಟ್ಟಣದ ಮುಡಿಗುಂಡ ಬಡಾವಣೆಯಲ್ಲಿ ಹಳೆಯ ವೈಷಮ್ಯದಿಂದ ಜಗಳ ನಡೆದ ಸಂದರ್ಭದಲ್ಲಿ ಹಲ್ಲೆಯಿಂದ ಆಟೋ ಚಾಲಕ ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ಬಡಾವಣೆಯ ಆಟೋ ಚಾಲಕ ಮಹದೇವಸ್ವಾಮಿ (42) ಮೃತ ದುರ್ದೈವಿ.
ಘಟನೆ ವಿವರ: ಬಡಾವಣೆ ಅಕ್ಕ ಪಕ್ಕದ ಮನೆಯಲ್ಲಾಗಿದ್ದು ಮಹದೇವಸ್ವಾಮಿ ಆಟೋವನ್ನು ಮನೆಯ ಮುಂದೆ ನಿಲ್ಲಿಸುತ್ತಿದ್ದ ವಿಷಯಕ್ಕೆ ಸೋಮವಾರ ರಾತ್ರಿ ಜಗಳ ಆರಂಭವಾಗಿ, ಪಕ್ಕದ ಮನೆಯ ನಿವಾಸಿ ಚಂದ್ರಮ್ಮ (50) ಮತ್ತು ಪ್ರೀತಿ(35) ಇಟ್ಟಿಗೆಯಿಂದ ಮಹದೇವಸ್ವಾಮಿಗೆ ಹೊಡೆದಾಗ ಆತ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾನೆ. ಆತನಿಗೆ ಕೊಳ್ಳೆಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಜಯದೇವ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯದಲ್ಲಿ ಮೃತ ಪಟ್ಟನೆಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿರುವ ನಗರ ಪೊಲೀಸ್ ಠಾಣೆಯ ಪಿಎಸ್ಐ ವರ್ಷ ಘಟನೆಗೆ ಸಂಬಂಧಿಸಿದಂತೆ ಚಂದ್ರಮ್ಮ (50) ಮತ್ತು ಪ್ರೀತಿ(35) ಅವರನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಆರು ಅಡಿ ಉದ್ದದ ಹೆಬ್ಬಾವು
ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ
Political: ಡಿಸಿಎಂ ಡಿ.ಕೆ.ಶಿವಕುಮಾರ್ -ಪರಮೇಶ್ವರ್ ರಹಸ್ಯ ಭೇಟಿ; ಮಾತುಕತೆ
Illegal immigration: ಪಾಕಿಸ್ಥಾನಿಗರ ವಿಚಾರಣೆ ನಡೆಯುತ್ತಿದೆ: ಗೃಹ ಸಚಿವ ಪರಮೇಶ್ವರ್
Govt.,: ಆರ್ಥಿಕ ಹೊರೆ ತಗ್ಗಿಸಲು ನಿಗಮ-ಮಂಡಳಿ ವಿಲೀನ?
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.