Kollegala: ಇಟ್ಟಿಗೆಯಿಂದ ಹಲ್ಲೆ: ಆಟೋ ಚಾಲಕ ಮೃತ್ಯು… ನೆರೆಮನೆಯ ಮಹಿಳೆಯರಿಬ್ಬರ ಬಂಧನ
Team Udayavani, Oct 1, 2024, 12:53 PM IST
ಕೊಳ್ಳೇಗಾಲ: ಪಟ್ಟಣದ ಮುಡಿಗುಂಡ ಬಡಾವಣೆಯಲ್ಲಿ ಹಳೆಯ ವೈಷಮ್ಯದಿಂದ ಜಗಳ ನಡೆದ ಸಂದರ್ಭದಲ್ಲಿ ಹಲ್ಲೆಯಿಂದ ಆಟೋ ಚಾಲಕ ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.
ಬಡಾವಣೆಯ ಆಟೋ ಚಾಲಕ ಮಹದೇವಸ್ವಾಮಿ (42) ಮೃತ ದುರ್ದೈವಿ.
ಘಟನೆ ವಿವರ: ಬಡಾವಣೆ ಅಕ್ಕ ಪಕ್ಕದ ಮನೆಯಲ್ಲಾಗಿದ್ದು ಮಹದೇವಸ್ವಾಮಿ ಆಟೋವನ್ನು ಮನೆಯ ಮುಂದೆ ನಿಲ್ಲಿಸುತ್ತಿದ್ದ ವಿಷಯಕ್ಕೆ ಸೋಮವಾರ ರಾತ್ರಿ ಜಗಳ ಆರಂಭವಾಗಿ, ಪಕ್ಕದ ಮನೆಯ ನಿವಾಸಿ ಚಂದ್ರಮ್ಮ (50) ಮತ್ತು ಪ್ರೀತಿ(35) ಇಟ್ಟಿಗೆಯಿಂದ ಮಹದೇವಸ್ವಾಮಿಗೆ ಹೊಡೆದಾಗ ಆತ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾನೆ. ಆತನಿಗೆ ಕೊಳ್ಳೆಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಜಯದೇವ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯದಲ್ಲಿ ಮೃತ ಪಟ್ಟನೆಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿರುವ ನಗರ ಪೊಲೀಸ್ ಠಾಣೆಯ ಪಿಎಸ್ಐ ವರ್ಷ ಘಟನೆಗೆ ಸಂಬಂಧಿಸಿದಂತೆ ಚಂದ್ರಮ್ಮ (50) ಮತ್ತು ಪ್ರೀತಿ(35) ಅವರನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಹೆಸ್ಕಾಂ ನಿರ್ಲಕ್ಷ್ಯ: ವಿದ್ಯುತ್ ಪ್ರವಹಿಸಿ 11 ಕುರಿ, 1 ನಾಯಿ ಸಾವು… ತಪ್ಪಿದ ಅನಾಹುತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
BJP: ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಶ್ರೀರಾಮುಲು
Vidhanasoudha: ಫೆ.27ರಿಂದ ವಿಧಾನಸೌಧದಲ್ಲಿ ಪುಸ್ತಕ, ಸಾಂಸ್ಕೃತಿಕ ಮತ್ತು ಆಹಾರ ಮೇಳ: ಖಾದರ್
Congress: ‘ಮುಂದಿನ ಸಿಎಂ ಸತೀಶಣ್ಣ..’: ಕುಂಭಮೇಳದಲ್ಲಿ ಅಭಿಮಾನ ಪ್ರದರ್ಶನ
Kottigehara: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಸ್ಥಳೀಯರಿಂದ ಅಂತ್ಯ ಸಂಸ್ಕಾರ
MUST WATCH
ಹೊಸ ಸೇರ್ಪಡೆ
Yellapur: 30 ಚೀಲ ಭತ್ತ, 200 ಕ್ಕೂ ಅಧಿಕ ಕಟ್ಟು ಹುಲ್ಲು ಬೆಂಕಿಗಾಹುತಿ
ಅನೌನ್ಸ್ ಆಗಿ ಎರಡು ವರ್ಷದ ಬಳಿಕ ʼಆಶಿಕಿ -3ʼ ಬಗ್ಗೆ ಅಪ್ಡೇಟ್ ಕೊಟ್ಟ ನಿರ್ದೇಶಕ ಅನುರಾಗ್
Yadagiri: ಮರಿಯಮ್ಮ ದೇವಿ ಮೂರ್ತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು
U19T20WC: ಟಿ20 ವಿಶ್ವಕಪ್ ಗೆದ್ದ ಹುಡುಗಿಯರಿಗೆ ಬೃಹತ್ ನಗದು ಪುರಸ್ಕಾರ ಘೋಷಿಸಿದ ಬಿಸಿಸಿಐ
Mangaluru: ಹೀಗಿದೆ ನೋಡಿ, ಕನಸಿನ ರಂಗಮಂದಿರ!