ಮಾದಪ್ಪನ ಬೆಟ್ಟಕ್ಕೆ ಬರುವ ಭಕ್ತರು ನನ್ನನ್ನು ಬೈಯ್ಯುತ್ತಾರೆ: ಶಾಸಕ


Team Udayavani, Dec 14, 2021, 1:45 PM IST

ಶಾಸಕ ನಾಗೇಂದ್ರ

ಹನೂರು: ರಾಜ್ಯದ ವಿವಿಧ ಜಿಲ್ಲೆಗಳಿಂದ ಮಾದಪ್ಪನ ಬೆಟ್ಟಕ್ಕೆ ಆಗಮಿಸುವ ಭಕ್ತಾದಿಗಳು ಇಲ್ಲಿನ ರಸ್ತೆ ಅವ್ಯವಸ್ಥೆಯನ್ನು ಕಂಡು ಈ ಕ್ಷೇತ್ರದ ಶಾಸಕರು ಏನು ಮಾಡುತ್ತಿದ್ದಾರೆ ಎಂದು ನನ್ನನ್ನು ಬೈಯ್ಯುತ್ತಿದ್ದಾರೆ ಎಂದು ವಿಧಾನಸಭಾ ಅಧಿವೇಶನ ದಲ್ಲಿ ಶಾಸಕ ನರೇಂದ್ರ ಅಳಲು ತೋಡಿಕೊಂಡ ಪ್ರಸಂಗ ಜರುಗಿದೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರ ದಿಂದ ಆರಂಭಗೊಂಡಿರುವ ವಿಧಾನಸಭಾ ಅಧಿವೇಶನದಲ್ಲಿ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ರಸ್ತೆಯು ಹದಗೆಟ್ಟಿರುವ ಬಗ್ಗೆ ಚರ್ಚೆ ನಡೆಯಿತು. ಚರ್ಚೆಯಲ್ಲಿ ಶಾಸಕ ಆರ್‌.ನರೇಂದ್ರ ಮಾತ ನಾಡಿ, ಮಲೆ ಮಹದೇಶ್ವರ ಬೆಟ್ಟಕ್ಕೆ ದೈನಂದಿನ ದಿನಗಳಲ್ಲಿ 15-20 ಸಾವಿರ ಭಕ್ತಾದಿಗಳು, ವಾರಾಂತ್ಯ ದಲ್ಲಿ 1 ಲಕ್ಷ ಭಕ್ತಾದಿಗಳು ಮತ್ತು ಜಾತ್ರಾ ಸಂದರ್ಭದಲ್ಲಿ 3-4 ಲಕ್ಷ ಜನರು ಆಗಮಿಸುತ್ತಾರೆ.

ಇಲ್ಲಿನ ರಸ್ತೆ ಬಹಳ ಹದಗೆಟ್ಟಿದ್ದು, ಸಂಚಾರಕ್ಕೆ ತೊಡ ಕಾಗಿದೆ ಇದು ಸರ್ಕಾರದ ಗಮನಕ್ಕೆ ಬಂದಿದೆಯೇ, ಬಂದಿದ್ದಲ್ಲಿ ಸರ್ಕಾರ ಕೈಗೊಂಡ ಕ್ರಮಗಳೇನು ಎಂದು ಪ್ರಶ್ನಿಸಿದರು. ಶಾಸಕರ ಪ್ರಶ್ನೆಗೆ ಲಿಖೀತವಾಗಿ ಉತ್ತರಿಸಿರುವ ಲೋಕೋಪಯೋಗಿ ಸಚಿವ ಚಂದ್ರಕಾಂತ್‌ ಪಾಟೀಲ್‌, ಈ ರಸ್ತೆಯು ಅಲ್ಲಲ್ಲಿ ಹದಗೆಟ್ಟಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

2021-22ನೇ ಸಾಲಿನಲ್ಲಿ ಹನೂರು ರಾಮಾಪುರ-ಮ.ಬೆಟ್ಟ ಮಾರ್ಗದ 61 ಕಿ.ಮೀ. ರಸ್ತೆ ದುರಸ್ತಿಗಾಗಿ 35 ಲಕ್ಷ ರೂ. ಅನುದಾನ ನೀಡಲಾಗಿದೆ. ಈ ಮಾರ್ಗದಲ್ಲಿ 9.50 ಕೋಟಿ ರೂ. ವೆಚ್ಚದಲ್ಲಿ ಅನುಮೋದನೆ ನೀಡಲಾಗಿದ್ದು, ಕಾಮಗಾರಿ ಕೈಗೆತ್ತಿಕೊಳ್ಳಲಾಗು ವುದು. ಜೊತೆಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜ ನೆಯ 4ನೇ ಹಂತದಲ್ಲಿ ರಸ್ತೆ ಅಭಿವೃದ್ಧಿಪಡಿಸಲು 10 ಕೋಟಿ ರೂ. ಅನುದಾನಕ್ಕಾಗಿ ಆರ್ಥಿಕ ಇಲಾಖೆಯ ಅನುಮತಿಗೆ ಪ್ರಸ್ತಾವನೆ ಸಲ್ಲಿಸಲಾ ಗಿದೆ. ಮತ್ತೂಂದು ಮಾರ್ಗವಾದ ಎಲ್ಲೇಮಾಳ- ಕೌದಳ್ಳಿ-ಮ.ಬೆಟ್ಟ ರಸ್ತೆಯ 6.5 ಕಿ.ಮೀ. ದುರಸ್ತಿ ಗಾಗಿ 5 ಲಕ್ಷ ರೂ. ಅನುದಾನ ನೀಡಲಾಗಿದ್ದು ಸಾರ್ವಜನಿಕ ಅನುಕೂಲಕ್ಕೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಅಲ್ಲದೆ ಈ ಮಾರ್ಗದ ರಸ್ತೆ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನಕ್ಕೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸ ಲಾಗಿದೆ. ಅನುಮತಿ ದೊರೆತ ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು. ಸಚಿವರ ಉತ್ತರದ ಮೇಲೆ ಚರ್ಚೆ ಆರಂಭವಾ ದಾಗ ಶಾಸಕ ನರೇಂದ್ರ ಮಾತನಾಡಿ, 61 ಕಿ.ಮೀ ರಸ್ತೆ ನಿರ್ವಹಣೆಗೆ 35 ಲಕ್ಷ ರೂ., 10 ಕಿ.ಮೀ ರಸ್ತೆ ನಿರ್ವಹಣೆಗೆ 5 ಲಕ್ಷ ಅನುದಾನ ಸಾಲುವುದಿಲ್ಲ.

ಅಧಿಕಾರಿಗಳು ವಸ್ತುಸ್ಥಿತಿ ನೋಡಿ ಉತ್ತರ ನೀಡಿ ದ್ದಾರೋ, ಸುಮ್ಮನೇ ನೀಡಿದ್ದಾರೋ, ಕೊಡಬೇಕು ಎಂದು ಕೊಟ್ಟಿದ್ದಾರೋ ಗೊತ್ತಿಲ್ಲ. 5 ಕೋಟಿ ವೆಚ್ಚದ ಕಾಮಗಾರಿಗೆ ಟೆಂಡರ್‌ ಮುಕ್ತಾಯಗೊಂಡು 1 ವರ್ಷ ಕಳೆದಿದ್ದರೂ ಕಾಮಗಾರಿ ಆರಂಭವಾಗಿಲ್ಲ. ರಸ್ತೆಯ ಅವ್ಯವಸ್ಥೆ ಕಂಡು ರಾಜ್ಯದ ಜನರಲ್ಲದೆ ಹೊರ ರಾಜ್ಯದ ಜನರೂ ಶಾಸಕರು ಏನು ಮಾಡುತ್ತಿದ್ದಾರೆ, ಗಮನಹರಿಸುತ್ತಿಲ್ಲವೇ ಎಂದು ನನ್ನನ್ನು ಬೈಯುತ್ತಿದ್ದಾರೆ ಎಂದು ಅಳಲನ್ನು ತೋಡಿಕೊಂಡರು. ಇದಕ್ಕೆ ಉತ್ತರಿಸಿದ ಸಚಿವ ಸಿ.ಸಿ.ಪಾಟೀಲ್‌, 35 ಲಕ್ಷ ಮತ್ತು 5 ಲಕ್ಷ ಅನುದಾನ ನೀಡಿರುವುದು ಗುಂಡಿಮುಚ್ಚಲು, ಇದನ್ನು ಹೊರತುಪಡಿಸಿ ರಸ್ತೆ ದುರಸ್ತಿಪಡಿಸಲು ಕ್ರಮವಹಿಸುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-kollegala

Kollegala: ಗಾಂಜಾ ಗಿಡ ಬೆಳೆಸಿದ್ದ ಆರೋಪಿಯ ಬಂಧನ; ಗಿಡ ವಶಕ್ಕೆ ಪಡೆದ ಪೊಲೀಸರು

2-gundlupete

Chamarajanagar: ಬೈಕ್- ಪಿಕ್ ಅಪ್ ಅಪಘಾತ: ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವುRoad Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.