ರಾಷ್ಟ್ರೀಯ ಲೋಕ್‌ ಅದಾಲತ್‌ ಸದುಪಯೋಗಪಡಿಸಿಕೊಳ್ಳಿ


Team Udayavani, Feb 7, 2020, 3:00 AM IST

rashtriya

ಚಾಮರಾಜನಗರ: ರಾಷ್ಟ್ರೀಯ ಲೋಕ್‌ ಅದಾಲತ್‌ ಅನ್ನು ಚಾಮರಾಜನಗರ ಜಿಲ್ಲೆಯಲ್ಲಿ ಫೆ.8ರಂದು ಆಯೋಜಿಸಲಾಗಿದೆ. ಈ ಮೂಲಕ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಡಿ.ವಿ ಪಾಟೀಲ್‌ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವ್ಯಾಜ್ಯ ಪರಿಹಾರ ಕೇಂದ್ರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲೋಕ್‌ ಅದಾಲತ್‌ಗಾಗಿ ಚಾಮರಾಜನಗರ, ಗುಂಡ್ಲುಪೇಟೆ, ಯಳಂದೂರು ಹಾಗೂ ಕೊಳ್ಳೇಗಾಲ ನ್ಯಾಯಾಲಯದಲ್ಲಿ ಒಟ್ಟು ಎಂಟು ಸಭೆಗಳಿಗೆ ಸಂಧಾನಕಾರರನ್ನು ನೇಮಿಸಲಾಗಿದೆ. ಸಂಧಾನಕಾರರು ಎರಡು ಪಕ್ಷಗಾರರ ಭಿನ್ನಾಭಿಪ್ರಾಯ, ಸಮಸ್ಯೆಗಳನ್ನು ಆಲಿಸಿ, ಉಭಯ ಪಕ್ಷಗಾರರಿಗೂ ಒಪ್ಪಿಗೆಯಾಗುವ ರೀತಿಯಲ್ಲಿ ರಾಜೀ ಕಾರ್ಯ ನಡೆಸಲಿದ್ದಾರೆ.

ಇದರಿಂದ ಪ್ರಕರಣವನ್ನು ಶೀಘ್ರವಾಗಿ ಹಾಗೂ ಕಡಿಮೆ ವೆಚ್ಚದಲ್ಲಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು. ಲೋಕ್‌ ಅದಾಲತ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣಗಳನ್ನು ಹೊರತುಪಡಿಸಿ, ಇತರ ಯಾವುದೇ ಸಿವಿಲ್‌ ಪ್ರಕರಣಗಳಾದ ದಾಂಪತ್ಯ, ಮಕ್ಕಳ ಸಂರಕ್ಷಣೆ, ಮೋಟಾರ್‌ ವಾಹನ ಅಪಘಾತಕ್ಕೆ ಸಂಬಂಧಿಸಿದ ಪ್ರಕರಣಗಳು,

ವಿಶೇಷ ಕಾನೂನಿನಡಿ ಶಿಕ್ಷಿಸಲ್ಪಡುವ ಅಪರಾಧಗಳಾದ ಚೆಕ್ಕು ಅಮಾನ್ಯಿಕರಣ, ವಿದ್ಯುತ್‌ ಕಳವು, ಕಾರ್ಮಿಕ ಕಾಯ್ದೆಯಡಿ ಬರುವ ಪ್ರಕರಣಗಳು, ಅಕ್ರಮ ಕಲ್ಲು- ಮರಳು ಸಾಗಾಣಿಕೆ ಸಂಬಂಧಿಸಿದ ಪ್ರಕರಣಗಳು, ಇತರೆ ಯಾವುದೇ ಅಪರಾಧ ಸ್ವರೂಪದ ರಾಜೀ ಆಗಬಹುದಾದ ಪ್ರಕರಣಗಳನ್ನು ಲೋಕ್‌ ಅದಾಲತ್‌ನಲ್ಲಿ ಪರಿಹರಿಸಿಕೊಳ್ಳಬಹುದಾಗಿದೆ ಎಂದರು.

6000 ಪ್ರಕರಣ ರಾಜಿ ಗುರಿ: ಲೋಕ್‌ ಅದಾಲತ್‌ನಲ್ಲಿ ಸಿವಿಲ್‌, ಕ್ರಿಮಿನಲ್‌ ಸೇರಿದಂತೆ ಒಟ್ಟು 1414 ಪ್ರಕರಣಗಳನ್ನು ಹೊಂದಿದೆ. ಅದರಂತೆ ಈ ಬಾರಿಯ ಲೋಕ್‌ ಅದಾಲತ್‌ಗೆ 904 ಸಿವಿಲ್‌, 510 ಕ್ರಿಮಿನಲ್‌, 300 ವ್ಯಾಜ್ಯ ಪೂರ್ವ, ಇತರೆ 6000 ಪ್ರಕರಣಗಳನ್ನು ರಾಜಿ ಮಾಡಲು ಗುರಿ ಹೊಂದಿದ್ದೇವೆ.

ಸಂಧಾನಕಾರರು ತಮ್ಮ ಮುಂದೆ ಬಂದ ಪ್ರಕರಣಗಳನ್ನು ಉಭಯ ಪಕ್ಷಗಾರರ ಭಿನ್ನಾಭಿಪ್ರಾಯ ಆಲಿಸಿ, ಕಾನೂನಿನ ಚೌಕಟ್ಟಿನಲ್ಲಿ ಬಗೆಹರಿಸುವ ರಾಜಿ ಸೂತ್ರಗಳನ್ನು ತಿಳಿಸುತ್ತಾರೆ. ಪಕ್ಷಗಾರರು ರಾಜಿ ಸೂತ್ರಕ್ಕೆ ಒಪ್ಪದಿದ್ದಲ್ಲಿ, ಸಂಧಾನ ಆಗುವುದರಿಂದ ಉಂಟಾಗುವ ಅನುಕೂಲತೆಗಳ ಬಗ್ಗೆ ಸಂಧಾನಕಾರರು ತಿಳಿಸಿಕೊಡುತ್ತಾರೆ ಎಂದು ತಿಳಿಸಿದರು.

ಮೇಲ್ಮನವಿ ಸಲ್ಲಿಕೆಗೆ ಅವಕಾಶವಿಲ್ಲ: ಲೋಕ್‌ ಅದಾಲತ್‌ನಲ್ಲಿ ಸಂಧಾನವಾದ ಪ್ರಕರಣಗಳ ವಿರುದ್ಧ ಯಾವುದೇ ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ. ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ಪಕ್ಷಗಾರರು ಸಂಧಾಯ ಮಾಡಿದ ಶೇ.75ರಷ್ಟು ನ್ಯಾಯಾಲಯ ಶುಲ್ಕವನ್ನು ಮರುಪಾವತಿ ಮಾಡಲಾಗುತ್ತದೆ.

ಮುಂದಿನ ವ್ಯಾಜ್ಯಗಳಿಗೆ ಆಸ್ಪದ ಕೊಡದೇ ಸಹಕಾರ, ಸಹಬಾಳ್ವೆಗೆ ಅವಕಾಶ ಮಾಡಿಕೊಡುವ ಲೋಕ್‌ ಅದಾಲತ್‌ ಅನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಜಿ.ವಿಶಾಲಾಕ್ಷಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್‌ ಹಾಜರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.