Gundlupete ಕೊಳೆತ ಸ್ಥಿತಿಯಲ್ಲಿ ಗಂಡು ಕಾಡಾನೆ ಮೃತದೇಹ ಪತ್ತೆ


Team Udayavani, Oct 3, 2023, 8:02 PM IST

Gundlupete ಕೊಳೆತ ಸ್ಥಿತಿಯಲ್ಲಿ ಗಂಡು ಕಾಡಾನೆ ಮೃತದೇಹ ಪತ್ತೆ

ಗುಂಡ್ಲುಪೇಟೆ(ಚಾಮರಾಜನಗರ): 35 ವರ್ಷದ ಗಂಡು ಕಾಡಾನೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ತಾಲೂಕಿನ ಬಂಡೀಪುರ ಅಭಯಾರಣ್ಯ ಗುಂಡ್ಲುಪೇಟೆ ಉಪ ವಿಭಾಗದ ಓಂಕಾರ ವನ್ಯಜೀವಿ ವಲಯ ವ್ಯಾಪ್ತಿಯ ಕುರುಬರಹುಂಡಿ ಶಾಖೆಯ ನಾಗಣಾಪುರ ಬ್ಲಾಕ್ 2ರ ಆಲದ ಮರದ ಹಳ್ಳ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಕಾಡಾನೆಯು ಮತ್ತೊಂದು ಕಾಡಾನೆಯ ಜೊತೆ ಕಾದಾಟ ನಡೆಸಿ ಮೃತಪಟ್ಟಿರುವುದಾಗಿ ಅರಣ್ಯ ಅಧಿಕಾರಿಗಳು ದೃಢಪಡಿಸಿದ್ದಾರೆ.

ಕಾಡಾನೆಯ ಕಣ್ಣಿನ ಕೆಳಭಾಗದಲ್ಲಿ ಎದುರಾಳಿ ಕಾಡಾನೆಯ ದಂತ ಚುಚ್ಚಿರುವುದು ಕಂಡು ಬಂದಿದ್ದು, ರಕ್ತಸ್ರಾವ ಹಾಗೂ ನಿತ್ರಾಣದಿಂದ ಮೃತಪಟ್ಟಿದೆ ಎನ್ನಲಾಗುತ್ತಿದೆ. ಎದುರಾಳಿ ಕಾಡಾನೆಯ ದಂತ ಚುಚ್ಚಿ ದಂತವು ಮೃತ ಕಾಡಾನೆಯ ಮೇಲ್ದವಡೆಯವರೆಗೆ 30 ಸೆ.ಮೀ ಆಳದವರೆಗೆ ಹೊಳಹೊಕ್ಕಿದ್ದು, ದವಡೆಯ ಒಳಗೆ ದಂತವು ಮುರಿದಿರುವುದರಿಂದ ಕಾಡಾನೆಯು ಸಾವನ್ನಪ್ಪಿದೆ ಎಂದು ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್‍ಕುಮಾರ್ ಮಾಹಿತಿ ನೀಡಿದ್ದಾರೆ.

ಎದುರಾಳಿ ಆನೆಯ ಮುರಿದ ದಂತದ ಭಾಗ ಹಾಗೂ ಮೃತ ಕಾಡಾನೆಯ ಎರಡು ದಂತಗಳನ್ನು ಇಲಾಖಾ ಪರ ವಶಪಡಿಸಿಕೊಂಡು ಮೃತ ಕಾಡಾನೆಯ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕಳೆಬರವನ್ನು ನಿಯಮಾನುಸಾರ ಕಾಡಾನೆ ಮೃತಪಟ್ಟ ಅರಣ್ಯ ಪ್ರದೇಶದಲ್ಲೆ ಬಿಡಲಾಯಿತು.

ಈ ಸಂಧರ್ಭದಲ್ಲಿ ಬಂಡೀಪುರ ಹುಲಿ ಯೋಜನೆ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್ ಕುಮಾರ್, ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ, ಓಂಕಾರ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಕೆ.ಪಿ.ಸತೀಶ್ ಕುಮಾರ್, ಇಲಾಖಾ ಪಶುವೈದ್ಯಾಧಿಕಾರಿ ಡಾ.ಮಿರ್ಜಾ ವಾಸಿ, ಗಸ್ತು ವನಪಾಲಕ ಸಂತೋಷ್ ಸೇರಿದಂತೆ ಅರಣ್ಯ ವೀಕ್ಷಕ ಹಾಗೂ ಇಲಾಖಾ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.