ಚಾ.ನಗರ ಜಿಲ್ಲಾಭಿವೃದ್ಧಿಗೆ 1500 ಕೋಟಿ ರೂ.: ಸೋಮಣ್ಣ


Team Udayavani, Nov 16, 2022, 4:09 PM IST

ಚಾ.ನಗರ ಜಿಲ್ಲಾಭಿವೃದ್ಧಿಗೆ 1500 ಕೋಟಿ ರೂ.: ಸೋಮಣ್ಣ

ಯಳಂದೂರು: ಚಾಮರಾಜನಗರ ಜಿಲ್ಲಾ ಕೇಂದ್ರ, ಎಲ್ಲಾ ತಾಲೂಕಿನ ಅಭಿವೃದ್ಧಿಗೆ 1500 ಕೋಟಿ ರೂ. ವಿಶೇಷ ಯೋಜನೆ ತಯಾರಾಗಿದ್ದು, ಶೀಘ್ರದಲ್ಲೇ ಇದಕ್ಕೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಪಟ್ಟಣದ ಜೆಎಸ್‌ಎಸ್‌ ಶಿಕ್ಷಣ ಸಂಸ್ಥೆಗಳ ಆವರಣ ದಲ್ಲಿ ಮಂಗಳವಾರ ಮೈಸೂರು-ಚಾಮರಾಜನಗರ ಜಿಲ್ಲಾ ವೀರಶೈವ ಲಿಂಗಾಯಿತ ಮಠಾಧಿಪತಿಗಳ ಗೋಷ್ಠಿ ವತಿಯಿಂದ ಹಮ್ಮಿಕೊಂಡಿದ್ದ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 107ನೇ ಜಯಂತಿ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಶಿವದೀಕ್ಷೆ- ಲಿಂಗದೀಕ್ಷೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಕಾಲೆಳೆಯುವವರ ಸಂಖ್ಯೆ ಹೆಚ್ಚಿದ್ದು, ಅಭಿವೃದ್ಧಿ ಕೆಲಸಕ್ಕೆ ಕೆಲವರು ತೊಡಕು ಮಾಡುತ್ತಾರೆ. ಇದು ಹೀಗೆ ಮುಂದುವರಿದರೆ ಅಭಿವೃದ್ಧಿ ಕುಂಠಿತ ವಾಗುತ್ತದೆ ಎಂದು ವಿಷಾಧಿಸಿದರು.

ವಿಶ್ವದಲ್ಲೇ ಅಪಾರ ಕೀರ್ತಿ: ಇದೊಂದು ಪವಿತ್ರ ಕಾರ್ಯಕ್ರಮವಾಗಿದೆ. ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಲು, ಉತ್ತಮ ಮನುಷ್ಯರಾಗಿ ರೂಪು ಗೊಳ್ಳಲು ಇಂತಹ ಕಾರ್ಯಕ್ರಮಗಳು ಅತ್ಯವಶ್ಯಕ. ರಾಜೇಂದ್ರ ಶ್ರೀಗಳು ಮಾತೃಹೃದಯಿಯಾಗಿದ್ದರು. ಸಾವಿರಾರು ವರ್ಷಗಳ ಐತಿಹ್ಯ ಹೊಂದಿರುವ ಸುತ್ತೂರು ಮಠ, ವಿಶ್ವದಲ್ಲೇ ಅಪಾರ ಕೀರ್ತಿ ಪಡೆ ದುಕೊಂಡಿದೆ. ಇದರ ಹಿಂದೆ ರಾಜೇಂದ್ರ ಶ್ರೀ ಹಾಗೂ ಹಾಲಿ ಇರುವ ಸುತ್ತೂರು ಶ್ರೀಗಳ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಮಠಗಳು ಸಂಸ್ಕಾರ ಕಲಿಸುವ ಕೇಂದ್ರಗಳು: ಮಠ ಮಾನ್ಯಗಳು ರಾಷ್ಟ್ರದ ಸಂಪತ್ತಾಗಿದ್ದು, ಸಮಾಜದ ಅಂಕುಡೊಂಡು ತಿದ್ದುವ, ಆಧ್ಯಾತ್ಮವನ್ನು ಪಸರಿ ಸುವ, ನಮ್ಮ ಸಂಸ್ಕೃತಿ, ಶ್ರೀಮಂತ ಪರಂಪರೆಯನ್ನು ಜಗಕ್ಕೆ ಸಾರುವ, ಸಂಸ್ಕಾರ ಕಲಿಸುವ ಕೇಂದ್ರಗಳಾಗಿವೆ ಎಂದು ವಿವರಿಸಿದರು.

ರಾಜೇಂದ್ರರ ಜೀವನವೇ ನಮಗೆ ಸಂದೇಶ: ಸಿದ್ಧ ಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಮತನಾಡಿ, ಸುತ್ತೂರು ಮಠದ ರಾಜೇಂದ್ರ ಶ್ರೀಗಳ ಜೀವನವೇ ನಮಗೆ ಉತ್ತಮ ಸಂದೇಶವಾಗಿದೆ. ತಮ್ಮ ಜೀವಿತಾವಧಿಯಲ್ಲಿ ಬಡವರ ಶಿಕ್ಷಣಕ್ಕೆ ಇವರು ಪಟ್ಟ ಪಾಡು ಇದಕ್ಕಾಗಿ ಮಾಡಿದ ತ್ಯಾಗ ಅನುಕರಣೀಯವಾಗಿದೆ. ಮಾನವೀಯತೆಯ ದೊಡ್ಡ ಸಾಕಾರ ಮೂರ್ತಿಯಾದ ಇವರು, ಶಿಕ್ಷ ಣವೇ ಸಮಸ್ತ ಪ್ರಗತಿಯ ಬೀಜ ಅದೇ ತಾಯಿ ಬೇರು ಎಂದು ನಂಬಿದ್ದು, ಹಾಗೇ ಬದುಕಿ ತೋರಿಸಿ ಕೊಟ್ಟರು ಎಂದು ಹೇಳಿದರು.

ಶಿವಕುಮಾರ ಶ್ರೀ, ರಾಜೇಂದ್ರ ಶ್ರೀ ಒಂದೇ ನಾಣ್ಯ: ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ಮಾತನಾಡಿ, ಲಿಂಗೈಕ್ಯ ಡಾ.ಶಿವ ಕುಮಾರ ಸ್ವಾಮೀಜಿ, ರಾಜೇಂದ್ರ ಮಹಾಸ್ವಾಮಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಇವರು ಅಪರೂಪದ ಶ್ರೇಷ್ಠ ಸಂತರಾಗಿದ್ದಾರೆ. ಸಂಸ್ಕಾರ ಪ್ರತಿ ಧರ್ಮದಲ್ಲೂ ಇದ್ದು, ಇದನ್ನು ರೂಢಿಗತ ಮಾಡಿ ಕೊಳ್ಳಬೇಕು. ಆಧ್ಯಾತ್ಮಿಕ ಸಂಪ್ರ ದಾಯಕ್ಕೆ ಭಗ ವಂತನ ಸ್ಮರಣೆ ಮುಖ್ಯವಾಗಿದೆ ಎಂದು ಹೇಳಿದರು.

ಶ್ರೀಮಂತ ಸಂಸ್ಕೃತಿಯ ಅನಾವರಣ: ಮೈಸೂರು- ಚಾಮರಾಜನಗರದ 45 ಮಠಾಧ್ಯಕ್ಷರು ಸೇರಿ ಕೊಂಡು ಇಂತಹ ಗೋಷ್ಠಿಯನ್ನು ಕಟ್ಟಿಕೊಂಡು ಇಲ್ಲಿ ತಾತ್ವಿಕ ಚಿಂತನೆಗಳನ್ನು ಬಿತ್ತುವ, ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಪ್ರತಿಭಾವಂತ ಮಕ್ಕ ಳನ್ನು ಗುರುತಿಸಿ ಅವರನ್ನು ಉತ್ತೇಜಿಸುವ ಕೆಲಸ ವನ್ನು ಮಾಡುತ್ತಿದ್ದಾರೆ. ಯುವ ಸಮೂಹ ದೇಶಭಕ್ತಿ ಯನ್ನು ಬೆಳೆಸಿಕೊಳ್ಳಬೇಕು, ನಮ್ಮ ಶ್ರೀಮಂತ ಸಂಸ್ಕೃ ತಿಯ ಅನಾವರಣ ಜಗಕ್ಕೆ ತೆರೆದಿಡಬೇಕು ಎಂದು ತಿಳಿಸಿದರು.

55 ಜನರಿಗೆ ಶಿವದೀಕ್ಷೆ-ಲಿಂಗದೀಕ್ಷೆ, 55 ವಿದ್ಯಾರ್ಥಿಗಳಿಗೆ ವಿವಿಧ ದತ್ತಿಗಳಿಂದ ಪ್ರತಿಭಾ ಪುರಸ್ಕಾರ ನೀಡಲಾಯಿತು. ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌, ಅಪರ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ, ಎಎಸ್ಪಿ ಸುಂದರ್‌ರಾಜ್‌, ಮಠಾಧೀಶರು ಹಾಜರಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು

Chamarajanagar: DRFO arrested by Lokayukta while taking bribe

Chamarajanagara: ಲಂಚ ಪಡೆಯುತ್ತಿದ್ದ ಡಿಆರ್‌ಎಫ್‌ಒ ಲೋಕಾಯುಕ್ತ ಬಲೆಗೆ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Road Mishap ಬೈಕ್ ಗೆ ಟಿಪ್ಪರ್ ಢಿಕ್ಕಿ; ಕೇರಳ ಮೂಲದ ಮೂವರ ದುರ್ಮರಣ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

Yelandur ಆಟೋಗೆ ಅಪರಿಚಿತ ವಾಹನ ಡಿಕ್ಕಿ; ಇಬ್ಬರಿಗೆ ತೀವ್ರ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.