ಅರ್ಥಿಕ ಸದೃಢತೆಗೆ ತೆರಿಗೆ ಸಂಗ್ರಹಣೆ ಅಗತ್ಯ


Team Udayavani, May 19, 2019, 3:00 AM IST

arthika

ಚಾಮರಾಜನಗರ: ಗ್ರಾಮ ಪಂಚಾಯಿತಿಗಳ ಅರ್ಥಿಕ ಸದೃಢತೆಗೆ ತೆರಿಗೆ ಸಂಗ್ರಹಣೆ ಅವಶ್ಯವಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌. ಲತಾಕುಮಾರಿ ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಗ್ರಾಪಂಗಳ ಬಿಲ್‌ ಕಲೆಕ್ಟರ್‌ಗಳು ಹಾಗೂ ಡಾಟಾ ಎಂಟ್ರಿ ಅಪರೇಟರ್‌ಗಳಿಗೆ 14ನೇ ಹಣಕಾಸು ಯೋಜನೆಯಡಿ ತಂತ್ರಾಂಶಗಳ ನಿರ್ವಹಣೆ ಮತ್ತು ತೆರಿಗೆ ನಿರ್ಧರಣೆ, ಪರಿಷ್ಕರಣೆ ಹಾಗೂ ವಸೂಲಾತಿ ಕುರಿತು ಅಯೋಜಿಸಲಾಗಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ತೆರಿಗೆ ಬಲವರ್ಧನೆ: ಗ್ರಾಮೀಣಾಭಿವೃದ್ಧಿಯಲ್ಲಿ ಗ್ರಾಪಂಗಳ ಪಾತ್ರ ಪ್ರಮುಖವಾಗಿದೆ. ಗ್ರಾಮಗಳಲ್ಲಿ ವಾಸಿಸುವ ಎಲ್ಲರೂ ಯಾವುದಾದರೊಂದು ತೆರಿಗೆ ಕಟ್ಟಲೇಬೇಕು. ತೆರಿಗೆಯಿಂದ ಯಾರು ಸಹ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮನೆ, ನೀರು, ನಿವೇಶನ ಸೇರಿದಂತೆ ಇತರೆ ಬಗೆಯ ಆಸ್ತಿಗಳಿಗೆ ಪ್ರತಿಯೊಬ್ಬರೂ ತೆರಿಗೆಯನ್ನು ಪಾವತಿಸಬೇಕಾಗಿದೆ.

ವಸೂಲಾದ ತೆರಿಗೆ ಹಣವನ್ನು ಸಂಗ್ರಹಿಸಿ ಗ್ರಾಮಗಳ ಜನೋಪಯೋಗಿ ಕಲ್ಯಾಣ ಕಾರ್ಯಕ್ರಮಗಳು ಹಾಗೂ ಗ್ರಾಮೀಣ ಮೂಲಭೂತ ಸೌಲಭ್ಯಗಳಿಗೆ ಬಳಸಿಕೊಳ್ಳಲಾಗುವುದು. ಆಗ ಅದು ಮಾದರಿ ಗ್ರಾಮವಾಗುವ ಮೂಲಕ ಗ್ರಾಪಂಗಳ ಬಲವರ್ಧನೆಗೂ ಸಹಕಾರಿಯಾಗುತ್ತದೆ ಎಂದರು.

ಇತಿಹಾಸ: ತೆರಿಗೆ ಎಂದರೆ ಕಾನೂನಾತ್ಮಕವಾಗಿ ಪ್ರತಿಯೊಬ್ಬರಿಂದ ಅವರ ಆಸ್ತಿ ಸೃಜನೆ ಆಧಾರದ ಮೇಲೆ ಕರ ವಸೂಲಿ ಮಾಡುವುದು ಎಂದರ್ಥ. ತೆರಿಗೆಗೂ ಇತಿಹಾಸವಿದೆ. ತೆರಿಗೆ ಸಂಗ್ರಹಣೆಯನ್ನು 5 ಸಾವಿರ ವರ್ಷಗಳ ಹಿಂದೆ ಈಜಿಪ್ಟ್ ದೇಶ ಜಾರಿಗೆ ತಂದಿತು.

ತದನಂತರ ಎಲ್ಲಾ ದೇಶಗಳು ಇದನ್ನು ಅಳವಡಿಸಿಕೊಂಡು ಪ್ರಗತಿಯ ಪಥದತ್ತ ಸಾಗುತ್ತಿವೆ. ವಿವಿಧ ರಾಷ್ಟ್ರಗಳು ತೆರಿಗೆ ಸಂಗ್ರಹಣೆಯನ್ನು ತಮ್ಮ ಅಭಿವೃದ್ಧಿಯ ಮೂಲವಾಗಿಸಿಕೊಂಡಿವೆ. ನಮ್ಮಲ್ಲಿ ಚಾಣಕ್ಯನ ತೆರಿಗೆ ನೀತಿ ಪ್ರಸಿದ್ಧವಾಗಿತ್ತು ಎಂದು ತಿಳಿಸಿದರು.

ಮಾಹಿತಿ ಕೊರತೆ: ಪ್ರತಿ ಅರ್ಥಿಕ ವರ್ಷದಲ್ಲಿ ಎಲ್ಲಾ ಗ್ರಾಮಪಂಚಾಯಿತಿಗಳಿಗೆ ನಿಗದಿತ ಕರ ವಸೂಲಾತಿಗಾಗಿ ಗುರಿ ನೀಡಲಾಗುತ್ತಿದೆ. 2018-19ನೇ ಸಾಲಿನಲ್ಲಿ ನಮ್ಮ ಜಿಲ್ಲೆಯಲ್ಲಿ ಗ್ರಾಪಂಗಳಿಂದ ಶೇ. 26ರಷ್ಟು ತೆರಿಗೆ ವಸೂಲಿಯಾಗಿದೆ.

ಇದು ಅತೀ ಕಡಿಮೆಯಗಿದೆ. ಗ್ರಾಪಂಗಳ ತೆರಿಗೆ ಸಂಗ್ರಾಹಕರು (ಬಿಲ್‌ ಕಲೆಕ್ಟರ್‌) ಹಾಗೂ ಡಾಟಾ ಎಂಟ್ರಿ ಅಪರೇಟರ್‌ಗಳಿಗೆ ಮಾಹಿತಿ ಅರಿವಿನ ಕೊರತೆ ಇರುವುದೇ ಇದಕ್ಕೆ ಮುಖ್ಯ ಕಾರಣವಾಗಿದ್ದು, ಈ ಪ್ರಸ್ತುತ ತರಬೇತಿ ಆಯೋಜನೆ ಮಾಡಲಾಗಿದೆ ಎಂದು ಸಿಇಒ ತಿಳಿಸಿದರು.

ತೆರಿಗೆ ಸಂಗ್ರಹಣೆಯನ್ನು ಸುಲಭೀಕರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಪರಿಷ್ಕೃತ ನಿರ್ದೇಶನ, ಸುತ್ತೋಲೆ‌ಗಳನ್ನು ಹೊರಡಿಸಿವೆ. ನಮ್ಮ ಗ್ರಾಪಂ ಅಧಿಕಾರಿ, ಸಿಬ್ಬಂದಿ ಅವುಗಳನ್ನು ಮನವರಿಕೆ ಮಾಡಿಕೊಳ್ಳಬೇಕು.

ಜವಾಬ್ದಾರಿ ಅರಿತು ಈ ಬಾರಿ ಗ್ರಾಪಂ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಣೆಯಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸುವಲ್ಲಿ ಸಕ್ರಿಯವಾಗಿ ಕಾರ್ಯೋನ್ಮುಖರಾಗಬೇಕು. ಇದರಿಂದ ಗ್ರಾಪಂಗಳು ಸ್ವಾವಲಂಬನೆ ಸಾಧಿಸಲು ನೆರವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಸಂಪನ್ಮೂಲ ವ್ಯಕ್ತಿಗಳಾದ ಮೈಸೂರಿನ ಅಬ್ದುಲ್‌ ನಜೀರ್‌ಸಾಬ್‌ ಗ್ರಾಮೀಣಾಭಿವೃದ್ಧಿ (ಎಸ್‌.ಐ.ಆರ್‌.ಡಿ) ಸಂಸ್ಥೆಯ ಬೋಧಕ ಡಾ. ಜಿ.ಎಸ್‌. ಗಣೇಶ್‌ಪ್ರಸಾದ್‌, ಜಿ. ಮಲ್ಲಿಕಾರ್ಜುನಸ್ವಾಮಿ, ಗಿರಿಧರ್‌ 14ನೇ ಹಣಕಾಸು ಯೋಜನೆಯಡಿ ತಂತ್ರಾಂಶಗಳ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ಮಾನಸಿಕ ಆರೋಗ್ಯ ಕೇಂದ್ರದ ಮನಶಾಸ್ತ್ರಜ್ಞ ಡಾ. ಭರತ್‌ ಅವರು ಗ್ರಾಪಂ ಕಾರ್ಯನಿರ್ವಹಣೆಯಲ್ಲಿ ಒತ್ತಡ ನಿರ್ವಹಣೆ ಕುರಿತು ಮಾತನಾಡಿದರು. ಜಿಪಂ ಉಪಕಾರ್ಯದರ್ಶಿ ಹನುಮನರಸಯ್ಯ, ಮುಖ್ಯ ಯೋಜನಾಧಿಕಾರಿ ಪದ್ಮಶೇಖರ್‌ ಪಾಂಡೆ ಇತರರು ಇದ್ದರು.

ಪ್ರಗತಿ ಗುರಿ: 14ನೇ ಹಣಕಾಸು ಯೋಜನೆಯಡಿ ಗ್ರಾಮಪಂಚಾಯಿತಿಗಳು ವಾರ್ಷಿಕ ಲೆಕ್ಕ ಪರಿಶೋಧನೆ ಮಾಡಿಸಿರಬೇಕು. ತಮ್ಮ ವ್ಯಾಪ್ತಿಯಲ್ಲಿ ನಿಗಧಿತ ಗುರಿಗಿಂತ ಹೆಚ್ಚಿನ ಕರ ವಸೂಲಾತಿಯಾಗಿರಬೇಕು. ಬಯಲು ಶೌಚಮುಕ್ತ ಗ್ರಾಮವಾಗಿಬೇಕು.

ಮಗುವಿಗೆ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಉತ್ತಮ ಪ್ರಗತಿ ಸಾಧಿಸಿರಬೇಕು. ಆಗ ಮಾತ್ರ ಸರ್ಕಾರದಿಂದ ಕಾರ್ಯಕ್ಷಮತೆ ನಿಧಿಯನ್ನು ಪ್ರೋತ್ಸಾಹಧನ ರೂಪದಲ್ಲಿ ಪಡೆಯಲು ಸಹಾಯವಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಲತಾಕುಮಾರಿ ಸೂಚನೆ ನೀಡಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-kollegala

Kollegala: ಗಾಂಜಾ ಗಿಡ ಬೆಳೆಸಿದ್ದ ಆರೋಪಿಯ ಬಂಧನ; ಗಿಡ ವಶಕ್ಕೆ ಪಡೆದ ಪೊಲೀಸರು

2-gundlupete

Chamarajanagar: ಬೈಕ್- ಪಿಕ್ ಅಪ್ ಅಪಘಾತ: ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವುRoad Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.