ಸೋಂಕು ಸಂಪರ್ಕಿತರ ಶೀಘ್ರ ಪತ್ತೆಗೆ ಸೂಚನೆ


Team Udayavani, Apr 25, 2021, 2:19 PM IST

ಸೋಂಕು ಸಂಪರ್ಕಿತರ ಶೀಘ್ರ ಪತ್ತೆಗೆ ಸೂಚನೆ

ಚಾಮರಾಜನಗರ: ಕೋವಿಡ್‌ ಹರಡುವಿಕೆಯನ್ನು ಪರಿಣಾಮಕಾರಿ ಯಾಗಿ ತಡೆಯಲು ದೃಢೀಕೃತ ಪ್ರಕರಣಗಳಿಗೆ ಸಂಬಂಧಿಸಿದ ಪ್ರಾಥಮಿಕ ಸಂಪರ್ಕಿತರನ್ನು ಶೀಘ್ರ ಪತ್ತೆ ಹಚ್ಚಿ ಪರೀಕ್ಷೆಗೆ ಒಳಪಡುವಂತಹ ಪ್ರಕ್ರಿಯೆಗೆ ವಿಳಂಬ ಮಾಡಬಾರದೆಂದು ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕೋವಿಡ್‌ ನಿಯಂತ್ರಣ ಸಂಬಂಧ ನಿಯೋಜನೆಗೊಂಡಿರುವ ನೋಡೆಲ್‌ ಅಧಿಕಾರಿಗಳು ಹಾಗೂ ಹಿರಿಯ ಆರೋಗ್ಯ ಹಾಗೂ ವೈದ್ಯಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಕೋವಿಡ್‌ ವ್ಯಾಪಿಸುವುದನ್ನು ನಿಯಂತ್ರಿಸಲು ದೃಢಪಟ್ಟ ಕೋವಿಡ್‌ ಸೋಂಕಿತರ ಸಂಪರ್ಕಕ್ಕೆ ಬಂದಿರಬಹುದಾದ ವ್ಯಕ್ತಿಗಳ ಬಗ್ಗೆ ನಿಗಾ ವಹಿಸಬೇಕಿದೆ. ಸೋಂಕುದೃಢಪಡುತ್ತಿದ್ದಂತೆಯೇ ಸೋಂಕಿತರಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಿ ಪರೀಕ್ಷೆಗೆ ಒಳಪಡಿಸುವ ಕೆಲಸ ನಿಗದಿತ ಅವಧಿಯೊಳಗೆ ನಡೆಸಬೇಕಿದೆ. ಇದಕ್ಕಾಗಿ ಪತ್ತೆ ಹಚ್ಚುವಿಕೆ ತಂಡ ಅತಿ ವೇಗವಾಗಿ ಪ್ರಕ್ರಿಯೆ ಕೈಗೊಳ್ಳಬೇಕೆಂದರು.

ಜಿಪಂ ಸಿಇಒ ಹರ್ಷಲ್‌ ಬೋಯರ್‌ ಮಾತನಾಡಿ, ಪ್ರಕರಣ ದೃಢೀಕೃತಗೊಳ್ಳುತ್ತಿದ್ದಂತೆ ಸೋಂಕಿತರ ಮಾಹಿತಿಯನ್ನು ತಾಲೂಕು ವೈದ್ಯಾಧಿಕಾರಿಗಳಿಗೆ ಕಳುಹಿಸಿ ಕೊಡಬೇಕು. ತಾಲೂಕು ವೈದ್ಯಾಧಿಕಾರಿಗಳು ಸೋಂಕಿತರ ಸಂಪರ್ಕಿತರನ್ನು ಪತ್ತೆಹಚ್ಚಿ ಮುಂದಿನ ಪರೀಕ್ಷಾ ಕ್ರಮಗಳಿಗೆ ಮುಂದಾಗುವ ಮೂಲಕ ಸೋಂಕು ಮತ್ತಷ್ಟು ಹರಡದಂತೆ ನಿಯಂತ್ರಿಸಬೇಕು. ಪತ್ತೆ ಹಚ್ಚುವಿಕೆಗಾಗಿಯೇ ನಿಯೋಜಿತವಾಗಿರುವ ವೈದ್ಯರು, ಆರೋಗ್ಯ ಸಿಬ್ಬಂದಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಇತರೆ ಸಿಬ್ಬಂದಿ ಶೀಘ್ರವಾಗಿ ಕಾರ್ಯೋನ್ಮುಖರಾಗಲು ನೋಡೆಲ್‌ ಅಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕೆಂದರು.

ಜಿಲ್ಲಾಧಿಕಾರಿ ಡಾ. ಎಂ.ಆರ್‌. ರವಿ ಮುಂದುವರಿದು ಮಾತನಾಡಿ, ಕೋವಿಡ್‌ ಪರೀಕ್ಷೆಗಳನ್ನು 24 ಗಂಟೆಯೊಳಗೆ ನಡೆಸಿ ವರದಿ ನೀಡಬೇಕು. ಯಾವುದೇ ತಾಲೂಕಿನಲ್ಲಿರಲಿ, ಜಿಲ್ಲೆಯ ಪ್ರಯೋಗಾಲಯಕ್ಕೆ ನಿಗದಿತ ಸಮಯಕ್ಕೆ ಮಾದರಿ ತಲುಪಿಸ ಬೇಕು ಎಂದರು.

ರಜಾ ದಿನಗಳಲ್ಲಿಯೂ ಲಸಿಕೆ ಪಡೆಯುವವರ ಪ್ರಮಾಣ ಕಡಿಮೆಯಾಗದಂತೆ ಹೆಚ್ಚು ಜನರಿಗೆ ಲಸಿಕೆ ನೀಡಬೇಕು. ಹಾಡಿಗಳಲ್ಲಿನ ಗಿರಿಜನರಿಗೆ ಲಸಿಕೆ ಸೌಲಭ್ಯ ಪೂರ್ಣ ಪ್ರಮಾಣದಲ್ಲಿ ತಲುಪಬೇಕು. ಸ್ವಸಹಾಯ ಸಂಘಗಳ ಸದಸ್ಯರು ಸೇರಿದಂತೆ ಎಲ್ಲಾ ವರ್ಗದ ಅರ್ಹರಿಗೆ ಲಸಿಕೆ ಪಡೆದು ಕೊಳ್ಳಲು ಉತ್ತೇಜನ ನೀಡಬೇಕೆಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಕಾತ್ಯಾಯಿನಿದೇವಿ, ಉಪವಿಭಾಗಾಧಿಕಾರಿ ಡಾ. ಗಿರೀಶ್‌ ದಿಲೀಪ್‌ ಬಡೋಲೆ, ವೈದ್ಯಕೀಯ ಕಾಲೇಜಿನ ನಿರ್ದೇಶಕಹಾಗೂ ಡೀನ್‌ ಡಾ. ಸಂಜೀವ್‌, ಡಿಎಚ್‌ಓ ಡಾ. ಎಂ.ಸಿ. ರವಿ. ಜಿಲ್ಲಾ ಸರ್ವೇಲೆನ್ಸ್‌ಅಧಿಕಾರಿ ಡಾ. ನಾಗರಾಜು, ಜಿಲ್ಲಾ ಆಸ್ಪತ್ರೆ ಹಿರಿಯ ವೈದ್ಯರಾದ ಡಾ. ಮಹೇಶ್‌, ಡಾ. ಕೃಷ್ಣಪ್ರಸಾದ್‌ ಇತರರು ಹಾಜರಿದ್ದರು.

ಹೋಂ ಐಸೋಲೇಷನ್‌ ಕಾಳಜಿ ವಹಿಸಿ :

ಹೋಮ್‌ ಐಸೋಲೇಷನ್‌ ಆಯ್ಕೆ ಮಾಡಿಕೊಂಡಿರುವವರ ಬಗ್ಗೆ ಅತ್ಯಂತ ಹೆಚ್ಚು ಕಾಳಜಿಯಿಂದ ನಿಗಾ ವಹಿಸಬೇಕು. ಇದಕ್ಕಾಗಿಯೇ ನೇಮಕವಾಗಿರುವ ನೋಡೆಲ್‌ ಅಧಿಕಾರಿಗಳು ಮತ್ತು ತಂಡ ಸೋಂಕಿತರ ಸಂಪರ್ಕದಲ್ಲಿದ್ದು, ಆರೋಗ್ಯ ಸಂಬಂಧ ಎಲ್ಲಾ ಅಗತ್ಯ ಮಾಹಿತಿ ಪಡೆದು ಔಷಧ ಉಪಚಾರಗಳ ಪಡೆಯುತ್ತಿರುವ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ವಿಶೇಷವಾಗಿ ಟೆಲಿ ಮಾನಿಟರಿಂಗ್‌ ತಂಡದ ವೈದ್ಯರು, ಆಪ್ತ ಸಮಾಲೋಚಕರು ಪ್ರತಿನಿತ್ಯವು ಹೆಚ್ಚಿನ ಅವಧಿಯಲ್ಲಿ ಸೋಂಕಿತರಿಗೆ ಸಲಹೆ, ಅಪ್ತ ಸಮಾಲೋಚನೆ, ಚಿಕಿತ್ಸೆ, ಮಾರ್ಗದರ್ಶನ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.