ಕಟಾವಿಗೆ ಬಂದ ಭತ್ತ, ಇನ್ನೂ ತೆರೆಯದ ಖರೀದಿ ಕೇಂದ್ರ


Team Udayavani, Dec 11, 2019, 3:00 AM IST

katavige

ಯಳಂದೂರು: ತಾಲೂಕಿನಲ್ಲಿ ಭತ್ತ ಕಟಾವು ಕಾರ್ಯವು ಆರಂಭವಾಗುತ್ತಿದೆ. ಈ ಬಾರಿ ಉತ್ತಮ ಮಳೆ ಹಾಗೂ ಕಬಿನಿ ಕಾಲುವೆಯಲ್ಲಿ ನೀರು ಹರಿದಿರುವುದರಿಂದ ಬಂಪರ್‌ ಬೆಳೆಯೂ ಬಂದಿದೆ. ಭತ್ತಕ್ಕೆ ಬೆಂಬಲ ಬೆಲೆ ನೀಡುವ ಉದ್ದೇಶದಿಂದ ಖರೀದಿ ಕೇಂದ್ರ ತೆರೆಯಬೇಕೆಂಬ ನಿಯಮವಿದೆ. ಆದರೆ ರೈತರಿಗೆ ಅನುಕೂಲವನ್ನು ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರವು ತಕ್ಷಣ ಮುಂದಾಗಬೇಕಾಗಿದೆ.

3500 ಹೆಕ್ಟೇರ್‌ನಲ್ಲಿ ಭತ್ತ: ತಾಲೂಕಿನಲ್ಲಿ 3500 ಹೆಕ್ಟೇರ್‌ ಪ್ರದೇಶದಲ್ಲಿ ರೈತರು ಭತ್ತವನ್ನು ಬೆಳೆದಿದ್ದಾರೆ. ಈಗಾಗಲೇ ಭತ್ತ ಹಣ್ಣಾಗಿದ್ದು ಕಟಾವಿಗೆ ಬಂದಿದೆ. ಇಲ್ಲಿನ ರೈತರು ಈ ಬಾರಿ ಐಆರ್‌-64, ಬಿಪಿಟಿ, ಎಂಟಿಯು-1010, ಜಯ ಭತ್ತದ ತಳಿಗಳನ್ನು ಬೆಳೆದಿದ್ದಾರೆ. ಅದರಲ್ಲೂ ಐಆರ್‌-64 ತಳಿ ಹೆಚ್ಚಾಗಿ ಬೆಳೆದಿದ್ದು ಹಾಗೂ ಮುಸುಕಿನ ಜೋಳವನ್ನು ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ, ರಾಗಿಯನ್ನು 150 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗಿದ್ದು ಈಗಾಗಲೇ ಇದರ ಕಟಾವು ಕಾರ್ಯ ಪ್ರಾರಂಭವಾಗಿದೆ.

ತಾಲೂಕು ಮಟ್ಟದಲ್ಲಿ ಖರೀದಿ ಕೇಂದ್ರ ತೆರೆಯಬೇಕು: ಸರ್ಕಾರವು ಭತ್ತಕ್ಕೆ ಬೆಂಬಲ ಬೆಲೆಯನ್ನು ನಿಗದಿ ಮಾಡಿ ಖರೀದಿ ಕೇಂದ್ರಗಳನ್ನು ತೆರೆಯಬೇಕು. ತಾಲೂಕು ಮಟ್ಟದಲ್ಲಿ ಖರೀದಿ ಕೇಂದ್ರವನ್ನು ಆರಂಭಿಸಬೇಕಿದೆ. ಆದರೆ ಈ ಕಾರ್ಯ ಇನ್ನೂ ತಾಲೂಕಿನಲ್ಲಿ ಆಗಿಲ್ಲ.

ಯಳಂದೂರಿನಲ್ಲಿ ಖರೀದಿ ಕೇಂದ್ರ ಬೇಕು: ಕಳೆದ ವರ್ಷ ಭತ್ತದ ಖರೀದಿ ಕೇಂದ್ರವನ್ನು ಸಮೀಪದ ಸಂತೆಮರಹಳ್ಳಿಯ ಎಪಿಎಂಸಿ ಕೇಂದ್ರದಲ್ಲಿ ಖರೀದಿ ಕೇಂದ್ರ ತೆರೆದಿತ್ತು. ಇದರಿಂದ ರೈತರಿಗೆ ತೀವ್ರ ತೊಂದರೆಯಾಗಿತ್ತು. ಇದಕ್ಕೆ ವಿರೋಧವೂ ವ್ಯಕ್ತವಾಗಿತ್ತು. ಯಳಂದೂರು ತಾಲೂಕಿನಲ್ಲಿ ಹೆಚ್ಚು ಭತ್ತ ಬೆಳೆಯುವ ಪ್ರದೇಶವನ್ನು ಬಿಟ್ಟು ದೂರದ ಸಂತೆಮರಹಳ್ಳಿ ಕ್ಷೇತ್ರದಲ್ಲಿ ತೆರೆದಿತ್ತು ಪ್ರತಿಭಟನೆಗೂ ಕಾರಣವಾಗಿತ್ತು.

ಇಲ್ಲಿಗೆ ಸಾಗಣೆ ವೆಚ್ಚವೂ ಅಧಿಕವಾಗುತ್ತದೆ. ಜೊತೆಗೆ ಹೆಚ್ಚಿನ ಪರಿಶ್ರಮವೂ ಇರುತ್ತದೆ ಎಂಬ ಕಾರಣವೊಡ್ಡಿ ಹೆಚ್ಚಿನ ರೈತರು ಭತ್ತವನ್ನು ಗದ್ದೆಗಳಲ್ಲಿ ಮಧ್ಯವರ್ತಿಗಳಿಗೆ ಮಾರಾಟ ಮಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಬಾರಿ ಹೀಗೆ ಆಗಬಾರದು ಖರೀದಿ ಕೇಂದ್ರವನ್ನು ಯಳಂದೂರು ಪಟ್ಟಣದಲ್ಲೇ ತೆರೆಯಬೇಕು ಎಂಬುದು ಇಲ್ಲಿನ ರೈತ ಮುಖಂಡ ಮಹಾದೇವಸ್ವಾಮಿ, ಸಿದ್ದಲಿಂಗಸ್ವಾಮಿ ಹಾಗೂ ಇತರರ ಆಗ್ರಹವಾಗಿದೆ.

ತಾಲೂಕಿನಲ್ಲಿ ಡಿಸೆಂಬರ್‌ ತಿಂಗಳಲ್ಲಿ ಕಟಾವು ಕಾರ್ಯ ಪ್ರಾರಂಭವಾಗುತ್ತಿದೆ. ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಖರೀದಿ ಕೇಂದ್ರ ಹಾಗೂ ಬೆಂಬಲ ಬೆಲೆ ನೀಡುವ ನಿಟ್ಟಿನಲ್ಲಿ ಪತ್ರದ ಮೂಲಕ ಮಾಹಿತಿ ನೀಡಲಾಗಿದೆ. ಸರ್ಕಾರದ ಆದೇಶಕ್ಕಾಗಿ ಕಾಯುತ್ತಿದ್ದು, ಆದೇಶ ಬಂದ ತಕ್ಷಣ ಖರೀದಿ ಕೇಂದ್ರ ತೆರೆಯಲಾಗುವುದು.
-ವೆಂಕಟರಂಗಶೆಟ್ಟಿ, ಕೃಷಿ ಅಧಿಕಾರಿ, ಯಳಂದೂರು

* ಫೈರೋಜ್‌ ಖಾನ್‌

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.