JDS ಶಾಸಕ ಮಂಜುನಾಥ್ ಅವರ ಅವಶ್ಯಕತೆ ಪಕ್ಷಕ್ಕಿಲ್ಲ: ಹನೂರು ಕಾಂಗ್ರೆಸ್ ಮುಖಂಡರು

ಅವರು ಆರ್‌ಎಸ್‌ಎಸ್ ಹಿನ್ನೆಲೆಯ ವ್ಯಕ್ತಿ.. ಕಾಂಗ್ರೆಸ್ ಸಿದ್ದಾಂತವೇ ಬೇರೆ...

Team Udayavani, Oct 7, 2023, 4:06 PM IST

1-sadsad

ಹನೂರು: ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವ ಸಿದ್ಧಾಂತವನ್ನು ಪ್ರತಿಪಾದಿಸುವ ಪಕ್ಷ, ಶಾಸಕ ಮಂಜುನಾಥ್ ಆರ್‌ಎಸ್‌ಎಸ್‌ನಿಂದ ಬಂದಂತಹ ವ್ಯಕ್ತಿಯಾಗಿದ್ದು ಅವರದು ಆರ್‌ಎಸ್‌ಎಸ್ ಪ್ರವೃತ್ತಿ. ಆದುದರಿಂದ ಯಾವುದೇ ಕಾರಣಕ್ಕೂ ಶಾಸಕ ಮಂಜುನಾಥ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಈಶ್ವರ್ ಆಗ್ರಹಿಸಿದರು.

ಹನೂರು ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಈಶ್ವರ್ ಕಳೆದ 4-5 ದಿನಗಳಿಂದ ಕ್ಷೇತ್ರದ ಹಾಲಿ ಶಾಸಕ ಮಂಜುನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಾರೆ ಎಂಬ ವದಂತಿಗಳು ಹರಡಿವೆ. ಈ ವಿಚಾರವಾಗಿ ಮಂಜುನಾಥ್ ಅವರೇ ಸ್ಪಷ್ಟಪಡಿಸಿದ್ದು ನಾನು ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದೇನೆಯೇ ಹೊರತು ಪಕ್ಷ ಸೇರ್ಪಡೆ ವಿಚಾರ ಚರ್ಚೆ ಆಗಿಲ್ಲ ಎಂದು ತಿಳಿಸಿದ್ದಾರೆ. ಆದುದರಿಂದ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಹಾಪೋಹಗಳಿಗೆ ಕಿವಿಗೊಡದೆ ಮುಂಬರುವ ಲೋಕಸಭೆ, ತಾ.ಪಂ, ಜಿ.ಪಂ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಮಾಜಿ ಶಾಸಕರ ಕುಟುಂಬಸ್ಥರ ಶ್ರಮ ಅಪಾರ
ಹನೂರು ಕ್ಷೇತ್ರದ ಅಭಿವೃದ್ಧಿಯಲ್ಲಿ ಮಾಜಿ ಶಾಸಕ ಆರ್.ನರೇಂದ್ರ, ಅವರ ತಂದೆ ಮಾಜಿ ಸಚಿವ ದಿ|ರಾಜೂಗೌಡ, ದೊಡ್ಡಪ್ಪ ದಿ|ವೆಂಕಟೇಗೌಡ ಅವರ ಕೊಡುಗೆ ಅಪಾರವಾದುದು. 1968 ರಿಂದ ಇಲ್ಲಿಯತನಕ ಕಾಂಗ್ರೆಸ್ ಪಕ್ಷಕ್ಕಾಗಿ ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿದಾಗಲೂ ಅನ್ಯ ಪಕ್ಷದತ್ತ ಮುಖಮಾಡದೆ ಪಕ್ಷೇತರವಾಗಿ ಗೆಲುವು ಸಾಧಿಸಿ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಪ್ರಸಕ್ತ ಚುನಾವಣೆಯಲ್ಲಿ ಕೆಲ ವ್ಯತ್ಯಾಸಗಳಿಂದಾಗಿ ನರೇಂದ್ರ ಅವರು ಸೋಲು ಕಂಡಿದ್ದರೂ ನಿರಂತರವಾಗಿ ಜನಸಂಪರ್ಕದಲ್ಲಿದ್ದು ಸೇವೆಯಲ್ಲಿ ತೊಡಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹನೂರು ಕ್ಷೇತ್ರದಿಮದ 15 ಸಾವಿರಕ್ಕೂ ಹೆಚ್ಚಿನ ಬಹುಮತ ನೀಡಿ ಹನೂರು ಕ್ಷೇತ್ರ ಕಾಂಗ್ರೆಸ್ ನ ಭದ್ರಕೊಟೆ, ಮಾಜಿ ಶಾಸಕ ನರೇಂದ್ರರ ನಾಯಕತ್ವದಲ್ಲಿ ಸದೃಢವಾಗಿದೆ ಎಂಬುದನ್ನು ಸಾಬೀತುಪಡಿಸುತ್ತೇವೆ . ಒಂದೊಮ್ಮೆ ಶಾಸಕ ಮಂಜುನಾಥ್ ಅವರನ್ನು ಪಕ್ಷ ಸೇರ್ಪಡೆ ಮಾಡಿಕೊಳ್ಳಲು ಮುಂದಾದಲ್ಲಿ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರು ಒಕ್ಕೊರಲಿನಿಂದ ವಿರೋಧಿಸುತ್ತೇವೆ ಎಂದರು.

ಜಿ.ಪಂ ಮಾಜಿ ಉಪಾಧ್ಯಕ್ಷ ಬಸವರಾಜು ಮಾತನಾಡಿ 2008 ರ ಚುನಾವಣೆಯಲ್ಲಿ ಶಾಸಕ ನರೇಂದ್ರ ಅವರು ಮೊದಲ ಬಾರಿ ಜಯಗಳಿಸಿದ್ದರು, 2018 ರಲ್ಲಿ ಸತತವಾಗಿ 3 ನೇ ಬಾರಿಗೆ ಗೆಲುವು ಸಾಧಿಸಿದ್ದರು. ಈ ಎರಡೂ ಸಮಯದಲ್ಲಿಯೂ ಬಿಜೆಪಿ ಪಕ್ಷ ನರೇಂದ್ರ ಅವರನ್ನು ಸೆಳೆಯಲು ಪ್ರಯತ್ನಿಸಿತ್ತು. ಈ ವೇಳೆ ಬೊಜೆಪಿ ನಾಯಕರು 50 ಕೋಟಿ ರೂ. ಹಣ, ಮಂತ್ರಿಸ್ಥಾನ ಮತ್ತು ಉಪಚುನಾವಣೆಯ ಖರ್ಚುವೆಚ್ಚವನ್ನೆಲ್ಲಾ ಭರಿಸುವ ಭರವಸೆ ನೀಡಿದರೂ ಅತ್ತ ಮುಖ ಮಾಡಲಿಲ್ಲ ಇದು ಅವರ ಪಕ್ಷ ನಿಷ್ಠೆಯನ್ನು ತೋರುತ್ತದೆ. ಇನ್ನು 1985ರಲ್ಲಿ ದಿ|ರಾಜೂಗೌಡ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿದಾಗ ಪಕ್ಷೇತರವಾಗಿ ಗೆಲುವು ಸಾಧಿಸಿದ್ದರು. ಈ ಸಂದರ್ಭದಲ್ಲಿ 1986 ರಲ್ಲಿ ಅಂದಿನ ಪಿಡಬ್ಲ್ಯೂಡಿ ಸಚಿವರಾಗಿದ್ದ ಮಾಜಿ ಪ್ರಧಾನಿ ದೇವೇಗೌಡರು ಚಿಕ್ಕಲ್ಲೂರಿಗೆ ಆಗಮಿಸಿದ್ದ ವೇಳೆ ಜನತಾ ಪಕ್ಷಕ್ಕೆ ಆಹ್ವಾನಿಸಿ ಮಂತ್ರಿಸ್ಥಾನದ ಭರವಸೆ ನೀಡಿದ್ದರು. ಆಗಲೂ ರಾಜೂಗೌಡರು ವಿನಯದಿಂದಲೇ ತಿರಸ್ಕರಿಸಿದ್ದರು. ಇದು ಅವರ ಪಕ್ಷ ನಿಷ್ಠೆಯನ್ನು ತೋರುತ್ತಿದ್ದು ಮಾಜಿ ಶಾಸಕ ನರೇಂದ್ರ ನಾಯಕತ್ವದಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಬಲವಾಗಿದ್ದು ಶಾಸಕ ಮಂಜುನಾಥ್ ಅವರ ಅನಿವಾರ್ಯತೆ ನಮಗಿಲ್ಲ ಎಂದರು.

ಮಂಜುನಾಥ್ ಅವರು ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರೆ ಸ್ವಾಗತ. ಕೂಡಲೇ ಮಂಜುನಾಥ್ ಅವರು ತಾವು ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷ ತೊರೆಯುವುದಿಲ್ಲ ಎಂದು ಮಾಧ್ಯಮಗಳ ಮುಖಾಂತರ ಸ್ಪಷ್ಟಪಡಿಸಿ ಊಹಾಪೋಹಗಳಿಗೆ ತೆರೆ ಎಳೆಯಬೇಕು ಎಂದು ಕಾಂಗ್ರೆಸ್ ಮುಖಂಡ ಪಾಳ್ಯ ರಾಚಪ್ಪ ಹೇಳಿದರು.

ಒಂದೊಮ್ಮೆ ಮಂಜುನಾಥ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರೆ ಮುಂದಿನ ಪರಿಣಾಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ನೇರಹೊಣೆಯಾಗಬೇಕಾಗುತ್ತದೆ ಎಂದು ಪ.ಪಂ ಸದಸ್ಯ ಹರೀಶ್ ಕುಮಾರ್ ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಚಿಕ್ಕತಮ್ಮಯ್ಯ, ಪೆದ್ದನಪಾಳ್ಯ ಸಿದ್ದರಾಜು, ಪ.ಪಂ ಸದಸ್ಯರಾದ ಸುದೇಶ್, ಮುಖಂಡರಾದ ಬಸವರಾಜು, ಮಾದೇಶ್, ನಟರಾಜು, ಮಂಜು ಹಾಗೂ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haryana: ಇಬ್ಬರು ಪಕ್ಷೇತರ ಶಾಸಕರು ಸೇರ್ಪಡೆ… ಬಿಜೆಪಿ ಸಂಖ್ಯಾ ಬಲ 50ಕ್ಕೆ ಏರಿಕೆ

Haryana: ಇಬ್ಬರು ಪಕ್ಷೇತರ ಶಾಸಕರು ಬಿಜೆಪಿ ಸೇರ್ಪಡೆ… ಸಂಖ್ಯಾ ಬಲ 50ಕ್ಕೆ ಏರಿಕೆ

Jammu Kashmir Result: ಓಮರ್‌ ಅಬ್ದುಲ್ಲಾ ಜಮ್ಮು-ಕಾಶ್ಮೀರದ ಸಿಎಂ: ಫಾರೂಖ್ ಅಬ್ದುಲ್ಲಾ

Jammu Kashmir Poll:ವಿಶೇಷ ಸ್ಥಾನಮಾನ ರದ್ದು ನಿರ್ಧಾರ ಜನರು ಒಪ್ಪಿಲ್ಲ: ಫಾರೂಖ್ ಅಬ್ದುಲ್ಲಾ

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.