ಸರ್ಕಾರ ದಿಂದಲೇ ವೇತನ ವಿತರಣೆ


Team Udayavani, Mar 11, 2018, 2:09 PM IST

cham-2.jpg

ಚಾಮರಾಜನಗರ: ಗ್ರಾಮ ಪಂಚಾಯ್ತಿ ನೌಕರರಿಗೆ ನೇರ ಖಜಾನೆಯಿಂದಲೇ ವೇತನ ನೀಡುವ ಆದೇಶ ಜಾರಿ ಮಾಡಿ ರುವ ರಾಜ್ಯ ಸರ್ಕಾರ ನಿರ್ಧಾರ ಸ್ವಾಗತಿಸಿ ಜಿಲ್ಲಾ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ನಗರದಲ್ಲಿ ವಿಜಯೋತ್ಸವ ಆಚರಣೆ ಮಾಡಲಾಯಿತು.

ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೊತ್ತಲವಾಡಿ ಮಹದೇವ ಸ್ವಾಮಿ ನೇತೃತ್ವದಲ್ಲಿ ಜಿಲ್ಲೆಯ 142 ಗ್ರಾಮ ಪಂಚಾಯ್ತಿಗಳ ನೌಕರರು ಸಭೆ ಸೇರಿ, ರಾಜ್ಯ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ ಅವರ ಹೋರಾಟದ ಫ‌ಲವಾಗಿ, ರಾಜ್ಯ ಸರ್ಕಾರ ಮಾರ್ಚ್‌ರಿಂದಲೇ ಅನ್ವಯವಾಗುವಂತೆ ನೌಕರರಿಗೆ ನೇರವಾಗಿ ಸಂಬಳ ನೀಡಲು ತೀರ್ಮಾನಿಸಿದೆ. ಗ್ರಾಮ ಪಂಚಾಯಿತಿ ನೌಕರರು ಸಹ ರಾಜ್ಯ ಸರ್ಕಾರಿ ನೌಕರರು ಎಂದು ಪರಿಗಣಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಈ ನಿರ್ಧಾರದಿಂದ 52 ಸಾವಿರ ಗ್ರಾಮ ಪಂಚಾಯ್ತಿ ನೌಕರರು ಹಾಗೂ ಅವರ ಕುಟುಂಬ ನೆಮ್ಮದಿಯಿಂದ ಜೀವನ ಮಾಡಲು ಸಹಕಾರಿಯಾಗಿದೆ. ಜಿಲ್ಲೆಯಲ್ಲಿ 1367 ಗ್ರಾಮ ಪಂಚಾಯಿತಿ ನೌಕರರಿದ್ದು, ಈ ಪೈಕಿ 943 ನೌಕರರು ಅನುಮೋದನೆಗೊಂಡಿದ್ದಾರೆ. ಇನ್ನುಳಿದ 424 ನೌಕರಿಗೂ ನೇರ ಸಂಬಳ ದೊರೆಯಲಿದೆ ಎಂದು ಹೇಳಿದರು.

ಈ ಸಂಬಂಧ ಜಿಲ್ಲಾ ಸಮಿತಿ ಮುಖ್ಯ ಅಧಿಕಾರಿಗಳೊಂದಿಗೆ ಮಾತನಾಡಿದೆ. ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ ಅವರು
ರಾಜ್ಯ ಗ್ರಾಪಂ ನೌಕರರ ಪರ ಹೋರಾಟ ಮಾಡಿದ ಫ‌ಲವಾಗಿ ಇಂದು ಸರ್ಕಾರ ಈ ಅಧಿಸೂಚನೆ ಹೊರಡಿಸಿದೆ ಎಂದರು.
 
ಮಾರ್ಚ್‌ ತಿಂಗಳಲ್ಲಿ ಎಲ್ಲಾ ನೌಕರರಿಗೂ ಸಂಬಳ ನೇರವಾಗಿ ಬರುವಂತಾಗಲು ತಮ್ಮ ಪಂಚಾಯಿತಿಗಳಲ್ಲಿ ಪಿಡಿಒ ಮುಖಾಂತರ ಪೂರ್ಣ ಮಾಹಿತಿಗಳನ್ನು ಜಿಲ್ಲಾ ಪಂಚಾಯ್ತಿಗೆ ನೀಡಬೇಕು. ಮಾ. 20ರೊಳಗೆ ಅಂತಿಮ ಗಡುವು ನೀಡಲಾಗಿದೆ. ಇಲ್ಲಿಯವರಿಗೆ ತಾವುಗಳು ಬ್ಯಾಂಕ್‌ ಖಾತೆಯನ್ನು ಹೊಂದ ಬೇಕು ಎಂದು ತಿಳಿಸಿದರು.

ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ ಅವರನ್ನು ಜಿಲ್ಲಾ ಸಂಘಟನೆಯಿಂದ ಆಹ್ವಾನಿಸಿ ಅಭಿನಂದಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಎಲ್ಲಾ ನೌಕರರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ತಮ್ಮ ಸಂಘಟಿತ ಹೋರಾಟವನ್ನು ಪ್ರದರ್ಶನ ಮಾಡೋಣ. ಸರ್ಕಾರದಿಂದ ನೇರವಾಗಿ ಸಂಬಳ ಬಂದಾಕ್ಷಣ ತಾವುಗಳು ಸರ್ಕಾರಿ ನೌಕರರಿಗಾಗಿ ಪರಿಗಣಿಸಲ್ಪಡುವುದಿಲ್ಲ. ಇನ್ನು ಬಹಳಷ್ಟು ಹೋರಾಟ ಮಾಡಬೇಕಾಗಿದೆ. ಇಂದಿನ ಜಯ ಮೊದಲ ಮೆಟ್ಟಿಲು ಎಂದರು.

ಪ್ರಧಾನ ಕಾರ್ಯದರ್ಶಿ ಪಿ.ಮಹದೇವ ಸ್ವಾಮಿ, ರಾಜ್ಯ ಸಮಿತಿ ಸದಸ್ಯ ಸಿ.ಗೋವಿಂದ ರಾಜು, ತಾಲೂಕು ಅಧ್ಯಕ್ಷರಾದ ಚಾ.ನಗರ ಸುರೇಶ್‌, ಕೊಳ್ಳೇಗಾಲ ಸಿದ್ದೇಗೌಡ, ಜಿಲ್ಲಾ ಖಜಾಂಚಿ ಯೋಗೇಂದ್ರ, ಯಳಂದೂರು ತಾಲೂಕು ಪ್ರಧಾನ ಕಾರ್ಯದರ್ಶಿ ಕೃಷ್ಣನಾಯಕ, ಪಾಪಣ್ಣ, ನಂಜಪ್ಪ, ಸುಬ್ಬಣ್ಣ, ಡಿ.ಕೆ.ರವಿ, ಚಂದ್ರು, ಸಾಕಮ್ಮ ಇತರರಿದ್ದರು. 

ರಾಜ್ಯ ಸರ್ಕಾರದ ಆದೇಶ ಶೀಘ್ರ ಜಾರಿಯಾಗಬೇಕು. ಜಿಪಂ ಸಿಇಒ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಕೂಡಲೇ ಗ್ರಾಮ ಪಂಚಾಯ್ತಿಯಲ್ಲಿ ದುಡಿಯುತ್ತಿರುವ ಎಲ್ಲಾ ನೌಕರರ ಬ್ಯಾಂಕ್‌ ಖಾತೆ ವಿವರಗಳನ್ನು ಇ- ಎಫ್ಎಂಎಸ್‌ಗೆ ಅಪಲೋಡ್‌ ಮಾಡಿ ವೇತನವನ್ನು ಅವರ ಖಾತೆಗೆ ಜಮಾ ಮಾಡಬೇಕು. 
 ಮಹದೇವಸ್ವಾಮಿ, ಗ್ರಾಪಂ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.