ಏ.9ಕ್ಕೆ ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ?


Team Udayavani, Apr 1, 2023, 11:43 AM IST

tdy-10

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಏ.9ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆ ಅರಣ್ಯ ಇಲಾಖೆ ಸಾಕಷ್ಟು ತಯಾರಿ ನಡೆಸುತ್ತಿದ್ದು, ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ಬಳಿ ಹೆಲಿಪ್ಯಾಡ್‌ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ಬಂಡೀಪುರ 50 ವರ್ಷ ಪೂರೈಸಿರುವ ಹಿನ್ನೆಲೆ ಏ.9ರಿಂದ ಮೂರು ದಿನಗಳ ಕಾಲ ಮೈಸೂರಿನಲ್ಲಿ ಪ್ರಾಜೆಕ್ಟ್ ಟೈಗರ್‌ ಸುವರ್ಣ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ವೇಳೆ ಬಂಡೀಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಡಲಿರುವ ಸಾಧ್ಯತೆ ಇದೆ.

13 ಕಿ.ಮೀ. ಸಫಾರಿ: ಮೈಸೂರಿನಲ್ಲಿ ನಡೆಯುವ ಪ್ರಾಜೆಕ್ಟ್ ಟೈಗರ್‌ ಸುವರ್ಣ ಮಹೋತ್ಸವ ಕಾರ್ಯಕ್ರಮ ಮುಗಿಸಿ ನೇರವಾಗಿ ಬಂಡೀಪುರಕ್ಕೆ ನರೇಂದ್ರ ಮೋದಿ ಬರಲಿದ್ದು, ಸುಮಾರು 13 ಕಿ.ಮೀ. ಸಫಾರಿ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಅರಣ್ಯ ಇಲಾಖೆ ಈಗಾಗಲೇ ಸಿದ್ಧತೆ ನಡೆಸುತ್ತಿದ್ದು, ಬಂಡೀಪುರ ಹೋಗುವ ಮಾರ್ಗ ಮಧ್ಯೆಯ ಸಫಾರಿ ಕೇಂದ್ರ ಹಾಗೂ ರಸ್ತೆಗಳನ್ನು ದುರಸ್ತಿ ಮಾಡಲಾಗುತ್ತಿದೆ.

ಐಜಿಪಿ-ಡಿಸಿಯಿಂದ ಹೆಲಿಪ್ಯಾಡ್‌ ನಿರ್ಮಾಣ ಸ್ಥಳ ಪರಿಶೀಲನೆ: ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ಬಳಿ ಮೂರು ಹೆಲಿಕ್ಯಾಪ್ಟರ್‌ ಇಳಿಯಲು ಹೆಲಿಪ್ಯಾಡ್‌ ನಿರ್ಮಾಣ ಮಾಡಲು ಉದ್ಧೇಶಿಸಿರುವ ಸ್ಥಳಕ್ಕೆ ದಕ್ಷಿಣ ವಲಯದ ಐಜಿಪಿ ಪ್ರವೀಣ್‌ ಮಧುಕರ್‌ ಪವರ್‌, ಜಿಲ್ಲಾಧಿಕಾರಿ ರಮೇಶ್‌, ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಪದ್ಮಿನಿ ಸಾಹೋ, ತಹಸೀಲ್ದಾರ್‌ ಮಲ್ಲಿಕಾರ್ಜುನ್‌ ಸೇರಿದಂತೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಭದ್ರತೆ ನೀಡುವ ಸಂಬಂಧ ಚರ್ಚೆ ನಡೆಸಿದ್ದಾರೆ.

ಆನೆ ಉಳಿಸಿದವರಿಗೆ ಸ್ಮರಣಿಕೆ?: ಫೆ.14ರಂದು ಓಂಕಾರ ಅರಣ್ಯದ ನಾಗಾಪಟ್ಟಣದ ಬಳಿಯ ಜಮೀನೊಂದಕ್ಕೆ ಅಳವಡಿಕೆ ಮಾಡಿದ್ದ ವಿದ್ಯುತ್‌ ತಂತಿ ತಗುಲಿದ್ದ ಆನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬದುಕಿಸಿದ್ದರು. ಇದಕ್ಕೆ ಪ್ರಧಾನಿ ಮೋದಿ ಕೂಡ ಟ್ವೀಟ್‌ ಮಾಡಿ ಶ್ಲಾ ಸಿದ್ದರು. ಇದೀಗ ಮೋದಿ ಬಂಡೀಪುರ ಭೇಟಿ ವೇಳೆ ಆನೆ ಉಳಿಸಿದ ಸಿಬ್ಬಂದಿಗೆ ಸ್ಮರಣಿಕೆ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಬಂಡೀಪುರ ಮಾರ್ಗವಾಗಿ ಮಧುಮಲೈಗೆ ಪ್ರಯಾಣ: ಬಂಡೀಪುರ ಮೇಲುಕಾಮನಹಳ್ಳಿ ಸಫಾರಿ ಬಳಿ ಹೆಲಿಕ್ಯಾಪ್ಟರ್‌ನಲ್ಲಿ ಬಂದಿಳಿಯುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಫಾರಿ ವೀಕ್ಷಣೆ ಬಳಿಕ ರಸ್ತೆ ಮಾರ್ಗವಾಗಿ ಮಧುಮಲೈಗೆ ಪ್ರಯಾಣ ಬೆಳೆಸಲಿದ್ದಾರೆ. ಇದಕ್ಕೆ ಈಗಾಗಲೇ ಅಧಿಕಾರಿಗಳು ಸಿದ್ಧತೆಯನ್ನು ಕೂಡ ನಡೆಸುತ್ತಿದ್ದಾರೆ. ನೀಲಗಿರಿ ಅರಣ್ಯ ಹೊಂದಿಕೊಂಡಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ತಮಿಳುನಾಡಿನ ಮಧುಮಲೈ ಹಾಗೂ ಕೇರಳದ ವೈನಾಡು ಅರಣ್ಯ ಪ್ರದೇಶದ ಗಡಿ ಹೊಂದಿದ್ದು, 1973 ರಲ್ಲಿ ಹುಲಿ ಯೋಜನೆ ಘೋಷಿಸಿದ ವೇಳೆ ಕೇವಲ 10-15 ಹುಲಿಗಳಿದ್ದವು. ಈಗ ಅವುಗಳ ಸಂಖ್ಯೆ 150 ದಾಟಿದೆ ಎನ್ನಲಾಗುತ್ತದೆ. ಈ ಕಾರಣದಿಂದ ಬಂಡೀಪುರಕ್ಕೆ ಮೋದಿ ಭೇಟಿ ಕೊಡುವ ಸಾಧ್ಯತೆ ಹೆಚ್ಚಾಗಿದೆ.

ನಕ್ಸಲ್‌ ಚಟುವಟಿಕೆ ಇದ್ದ ಪ್ರದೇಶಕ್ಕೆ ಮೋದಿ ಭೇಟಿ : ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ನಕ್ಸಲ್‌ ಚಟುವಟಿಕೆ ಆಗಿಂದ್ದಾಗ್ಗೆ ಕಂಡು ಬರುತ್ತಿದೆ. ಬರಗಿ ಬಳಿ ನಿರ್ಮಾಣ ಮಾಡಿರುವ ಕ್ಯಾಂಪ್‌ನಿಂದ ನಕ್ಸಲ್‌ ನಿಗ್ರಹ ದಳದ ಪೊಲೀಸಲು ನಿರಂತರವಾಗಿ ಕೂಂಬಿಂಗ್‌ ನಡೆಸುತ್ತಲೆ ಇರುತ್ತಾರೆ. ಇದೀಗ ಮೋದಿ ಬಂಡೀಪುರ ಭೇಟಿ ಹಿನ್ನಲೆ ಹೆಚ್ಚುವರಿಯಾಗಿ ಸಿಬ್ಬಂದಿ ನೇಮಕ ಮಾಡಿಕೊಂಡು ಕೂಂಬಿಂಗ್‌ ಆರಂಭಿಸಿದ್ದಾರೆ ಎನ್ನಲಾಗುತ್ತಿದೆ.

ಬಂಡೀಪುರ ವ್ಯಾಪ್ತಿಯ ಕೇರಳ ಗಡಿಯ ಮೂಲೆಹೊಳೆ ಚೆಕ್‌ ಪೋಸ್ಟ್‌ ಭಾಗದಲ್ಲಿ ಕಳೆದ ವರ್ಷ ಸ್ಯಾಟಲೈಟ್‌ ಫೋನ್‌ ಬಳಕೆ ಪತ್ತೆಯಾಗಿತ್ತು. ಆ ವೇಳೆ ಪೊಲೀಸರು ಕಾರ್ಯಪ್ರೌರುತ್ತರಾಗಿ ಹೆಚ್ಚಿನ ಕೂಂಬಿಂಗ್‌ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹದುದು.

ಬಂಡೀಪುರ 50 ವರ್ಷ ಪೂರೈಕೆ ಮಾಡಿರುವ ಹಿನ್ನೆಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಂಡೀಪುರಕ್ಕೆ ಆಗಮಿಸುವ ನಿರೀಕ್ಷೆಯಿದೆ. ಈ ಕಾರಣದಿಂದ ಇಲಾಖೆಯಿಂದ ಎಲ್ಲಾ ರೀತಿಯ ತಯಾರಿ ನಡೆಸಲಾಗುತ್ತಿದ್ದು, ಹೆಲಿಪ್ಯಾಡ್‌ ನಿರ್ಮಾಣದ ಕುರಿತು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. -ಡಾ.ರಮೇಶಕುಮಾರ್‌, ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ

ಬಸವರಾಜು ಎಸ್‌.ಹಂಗಳ

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.