ಬೇಗೂರಲ್ಲಿ ಕುಡಿವ ನೀರಿಗೆ ಹಾಹಾಕಾರ


Team Udayavani, Apr 30, 2019, 3:00 AM IST

begura

ಗುಂಡ್ಲುಪೇಟೆ: ತಾಲೂಕಿನ ಬೇಗೂರು ಗ್ರಾಮದಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತಾಂಡವವಾಗುತ್ತಿದೆ. ಗ್ರಾಮಸ್ಥರು ನೀರಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕಬಿನಿ ಕುಡಿಯುವ ನೀರು ಸರಬರಾಜಿನ ಬಗ್ಗೆ ಕಳೆದ 15 ದಿನಗಳಿಂದ ಬೇಗೂರು ಸೇರಿದಂತೆ ಸುತ್ತ ಮುತ್ತಲ ಐದಾರು ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜಾಗಾದೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಜನತೆಗೆ ಬಿಸಿ ತಟ್ಟಿದೆ.

ಅಧಿಕಾರಿಗಳಿಗೆ ಹಿಡಿಶಾಪ: ಗುಂಡ್ಲುಪೇಟೆ ತಾಲೂಕಿನಲ್ಲಿ ಬೇಗೂರು ಹೋಬಳಿ ಅತ್ಯಂತ ದೊಡ್ಡ ಹೋಬಳಿ ಕೇಂದ್ರವಾಗಿದೆ. ಆದರೂ ಇಲ್ಲಿನ ಜನರು ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದರೂ, ಖಾಲಿ ಕೊಡ ಹಿಡಿದು ಅಲೆದಾಡುತ್ತಿದ್ದರೂ, ನೀರಿನ ಸಮಸ್ಯೆ ಬಗ್ಗೆ ಯಾವೊಬ್ಬ ಅಧಿಕಾರಿಗಳೂ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಗ್ರಾಮಸ್ಥರು ಹಿಡಿಶಾಪ ಹಾಕುತ್ತಾರೆ.

ಕಬಿನಿ ನೀರನ್ನೇ ನಂಬಿರುವ 33 ಗ್ರಾಮಗಳು: ನಂಜನಗೂಡಿನಿಂದ ಗುಂಡ್ಲುಪೇಟೆ ತಾಲೂಕಿಗೆ ಕಬಿನಿ ಕುಡಿಯುವ ನೀರಿನ ಪೈಪ್‌ಲೈನ್‌ ಹಾದುಹೋಗಿದ್ದು, ಪೈಪ್‌ಲೈನ್‌ ಪಕ್ಕದ ಹಲವಾರು ಗ್ರಾಮಗಳು ಈ ನೀರಿನ ಸೌಲಭ್ಯ ಪಡೆದುಕೊಂಡಿವೆ, ಬೇಗೂರು ಹೋಬಳಿ ಚಿಕ್ಕಾಟಿ, ಹಾಲಹಳ್ಳಿ, ತೊಂಡವಾಡಿ, ರಾಘವಾಪುರ, ತಗ್ಗಲೂರು, ಗರಗನಹಳ್ಳಿ, ಸೇರಿದಂತೆ 33ಕ್ಕೂ ಹೆಚ್ಚು ಹಳ್ಳಿಗಳ ಜನರು ಕಬಿನಿ ಕುಡಿಯುವ ನೀರನ್ನೇ ಅವಲಂಬಿಸಿದ್ದಾರೆ.

ಹನಿ ನೀರಿಗೂ ಪರದಾಟ: ಕಬಿನಿ ಕುಡಿಯುವ ನೀರು ಸರಬರಾಜಿನ ಮೋಟರ್‌ಗಳು ಸುಟ್ಟು ಹೋಗಿವೆ ಎಂದು ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ. ಆದರೆ ಕಾರಣ ಬೇರೆಯೇ ಇದೆ, ಅಲ್ಲದೇ ಸುಟ್ಟು ಹೋಗಿರುವ ಮೋಟಾರ್‌ ದುರಸ್ತಿಗೆ ಎಷ್ಟು ದಿನಗಳು ಬೇಕು ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿದೆ. ಕಳೆದ 15 ದಿನಗಳಿಂದ ಬೇಗೂರು ಹೋಬಳಿ ಸುತ್ತ ಮುತ್ತಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಜನ ಬೇಸತ್ತಿದ್ದು, ಗ್ರಾಮಸ್ಥರು ಹನಿ ನೀರಿಗೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಬೋರ್‌ವೆಲ್‌ ಕೊರೆಸದ ಗ್ರಾಪಂ: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಇದೇ ಮೊದಲೇನಲ್ಲ. ಈ ಸಮಸ್ಯೆ ಆಗಿಂದಾಗ್ಗೆ ತಲೆ ತೋರುತ್ತಲೇ ಇದ್ದರೂ, ಚುನಾಯಿತ ಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ಶಾಶ್ವತವಾಗಿ ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವ ಕ್ರಮ ಕೈಗೊಂಡಿಲ್ಲ. ಲಕ್ಷಾಂತರ ರೂ. ಆದಾಯವಿರುವ ಗ್ರಾಪಂ ಆಡಳಿತ ಮಂಡಳಿ ಜನರ ನೀರಿನ ಸಮಸ್ಯೆ ಬಗ್ಗೆ ತಲೆಕೆಡಿಸಿಕೊಂಡಂತಿಲ್ಲ. ಕೇವಲ ಕಬಿನಿ ನೀರಿನ ಸರಬರಾಜನ್ನೆ ನೆಚ್ಚಿಕೊಂಡಿರುವ ಅಧಿಕಾರಿಗಳು ಹೊಸದಾಗಿ ಬೋರ್‌ವೆಲ್‌ ಕೊರೆಯಿಸಿ ಸಮರ್ಪಕ ನೀರು ಸರಬರಾಜಿಗೆ ವ್ಯವಸ್ಥೆ ಮಾಡಿಲ್ಲ.

ಇರುವುದೆರೆಡೆ ರಾಟೆ ಬಾವಿ: ಗ್ರಾಮದಲ್ಲಿ ಕುಡಿಯುವ ನೀರಿನ ಪೂರೈಕೆಗಾಗಿ ಎರಡು ರಾಟೆ ಬಾವಿಗಳನ್ನು ಆಶ್ರಯಿಸುವಂತಾಗಿದೆ. ಬಾವಿಯಲ್ಲಿನ ನೀರನ್ನೆ ಗ್ರಾಮದ ಜನರು ನೆಚ್ಚಿಕೊಂಡಿದ್ದಾರೆ. ಕಬಿನಿ ಜಲಾಶಯದಿಂದ ನಂಜನಗೂಡಿನಿಂದ ಗುಂಡ್ಲುಪೇಟೆಗೆ ಕಬಿನಿ ನೀರು ಸರಬರಾಜಾಗುತ್ತಿದ್ದು, ಈ ಭಾಗದಲ್ಲಿ ಬರುವ ಸುತ್ತ-ಮುತ್ತಲ ಹಳ್ಳಿಗಳಿಗೂ ಸಹ ಇದೇ ನೀರು ಪೂರೈಕೆಯಾಗುತ್ತಿದೆ. ಆದರೆ ಈ ಪೈಪ್‌ಲೈನ್‌ ಮಾಡಿ ಅನೇಕ ವರ್ಷಗಳಾಗಿರುವುದರಿಂದ ಪೈಪ್‌ಗ್ಳೆಲ್ಲಾ ಹಳೆದಾದ್ದು ಆಗಾಗ ಒಡೆದು ಹೋಗುತ್ತಿರುತ್ತವೆ.

ಹೊಸ ಬೋರ್‌ ಕೊರೆಸಲು ಗ್ರಾಮಸ್ಥರ ಆಗ್ರಹ: ಪ್ರಸ್ತುತ ನೀರು ಸರಬರಾಜಿನ ಮೋಟರ್‌ಗಳು ಸುಟ್ಟು ಹೋಗಿ 15 ದಿನಗಳೇ ಕಳೆದಿದ್ದರೂ ಶೀಘ್ರ ದುರಸ್ತಿಯಾಗದ ಹಿನ್ನೆಲೆ ಗ್ರಾಮಸ್ಥರು ನೀರಿಲ್ಲದೆ ಪರದಾಡುವಂತಾಗಿದೆ. ಇನ್ನೂ ಬೇಸಿಗೆ ಪ್ರಾರಂಭವಾಗಿಲ್ಲ, ಈಗಲೇ ಕುಡಿಯುವ ನೀರಿಗೆ ಈ ರೀತಿಯ ಬರ ಬಂದಿದೆ.

ಬೇಸಿಗೆ ದಿನಗಳಲ್ಲಿ ಗ್ರಾಮಸ್ಥರು ನೀರಿಗಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಬಹುದು. ಆದ್ದರಿಂದ ಗ್ರಾ.ಪಂ ಆಡಳಿತ ವರ್ಗದವರು ಮತ್ತು ಚುನಾಯಿತ ಪ್ರತಿನಿಧಿಗಳು ಕುಡಿಯುವ ನೀರಿಗೆ ಕಬಿನಿ ಮೂಲವನ್ನೇ ಆಶ್ರಯಿಸದೇ ಕಬಿನಿಯಲ್ಲಿ ದುರಸ್ತಿಯಾದಾಗ ನೀರಿನ ಸರಬರಾಜಿನಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಹೊಸ ಬೋರ್‌ ಕೊರೆಯಿಸಿ ನೀರು ಸರಭರಾಜು ಮಾಡಲಿ ಎಂದು ಗ್ರಾಮಸ್ಥರ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-kollegala

Kollegala: ಗಾಂಜಾ ಗಿಡ ಬೆಳೆಸಿದ್ದ ಆರೋಪಿಯ ಬಂಧನ; ಗಿಡ ವಶಕ್ಕೆ ಪಡೆದ ಪೊಲೀಸರು

2-gundlupete

Chamarajanagar: ಬೈಕ್- ಪಿಕ್ ಅಪ್ ಅಪಘಾತ: ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವುRoad Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.