ಕಾಮಗಾರಿಗೆ ಹೆಚ್ಚುವರಿ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಿ


Team Udayavani, Sep 8, 2020, 3:15 PM IST

ಕಾಮಗಾರಿಗೆ ಹೆಚ್ಚುವರಿ ಅನುದಾನಕ್ಕಾಗಿ ಪ್ರಸ್ತಾವನೆ ಸಲ್ಲಿಸಿ

ಚಾಮರಾಜನಗರ: ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಹೆಚ್ಚುವರಿ ಅನುದಾನಕ್ಕಾಗಿ ಅಗತ್ಯ ಪ್ರಸ್ತಾವನೆ ಹಾಗೂ ಅಂದಾಜುಪಟ್ಟಿ ಸಲ್ಲಿಸುವಂತೆ ಪೌರಾಡಳಿತ ಸಚಿವ ಡಾ. ನಾರಾಯಣಗೌಡ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ, ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆ ಗಳು ಅನುಷ್ಠಾನಗೊಳಿಸಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮತ್ತು ರೇಷ್ಮೆ, ತೋಟಗಾರಿಕೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ಚಾಮರಾಜನಗರ ನಗರಸಭೆ ವತಿಯಿಂದ ಜಿಲ್ಲಾ ಕ್ರೀಡಾಂಗಣ, ಖಾಸಗಿ ಬಸ್‌ ನಿಲ್ದಾಣ, ರಂಗಮಂದಿರದ ಕಾಮಗಾರಿ ಹಾಗೂ ಕೋರ್ಟ್‌ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಕೋರ್ಟ್‌ ರಸ್ತೆಯ ಅಗಲೀಕರಣಕ್ಕಾಗಿ 8 ಕೋಟಿ ರೂ. ಗಳನ್ನು ಲೋಕೋಪಯೋಗಿ ಇಲಾಖೆ ನೀಡಲಾಗಿದ್ದು, ರಸ್ತೆಬದಿಯಲ್ಲಿನ ನಿವಾಸಿಗಳಿಗೆ ಈಗಾಗಲೇ 2.85 ಕೋಟಿ ರೂ. ಪರಿಹಾರ ನೀಡಲಾಗಿದೆ. ಹೆಚ್ಚು ವರಿ ಪರಿಹಾರದ ಅಗತ್ಯವಿದ್ದರೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವ ನಾರಾಯಣಗೌಡ ತಿಳಿಸಿದರು.

ಪರಿಹಾರ ಒದಗಿಸಿ: ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಕೋರ್ಟ್‌ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ರಸ್ತೆ ಬದಿಯ ನಿವಾಸಿಗಳಿಗೆ ಸೂಕ್ತ ಪರಿಹಾರ ಒದಗಿಸಿ ಕಾಮಗಾರಿಯನ್ನು ಅದಷ್ಟು ಬೇಗ ಪೂರ್ಣಗೊಳಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದರೂ ಸಹ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ. ರಸ್ತೆ ಬದಿಯಲ್ಲಿ ಸರ್ಕಾರಿ ಜಾಗವಿದ್ದರೆ ಅದನ್ನು ತೆರವುಗೊಳಿಸಲು ನೋಟಿಸ್‌ ನೀಡುವ ಅಗತ್ಯವಿಲ್ಲ ಎಂದರು.

ಅನುದಾನ: ಶಾಸಕ ಎನ್‌. ಮಹೇಶ್‌ ಮಾತನಾಡಿ, ಕೊಳ್ಳೇಗಾಲದಲ್ಲಿ ಬಸ್‌ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಉಳಿದ ಕಾಮಗಾರಿಗಳಿಗಾಗಿ 10 ಕೋಟಿ ರೂ. ಹೆಚ್ಚುವರಿ ಅನುದಾನ ಅವಶ್ಯವಾಗಿದೆ. ಮಾದರಿ ಬಸ್‌ ನಿಲ್ದಾಣ ನಿರ್ಮಾಣಕ್ಕಾಗಿ ಅಗತ್ಯ ಅನುದಾನ ಬಿಡುಗಡೆ ಮಾಡಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.

ರೇಷ್ಮೆ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 779 ರೇಷ್ಮೆ ನೇಕಾರರಿದ್ದು, ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ 228 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಇದಕ್ಕಾಗಿ 67 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಯಾವುದೇ ಕಾಮಗಾರಿ ಅನುಷ್ಠಾನ ಸಂದರ್ಭದಲ್ಲಿ ಸಂಬಂಧಪಟ್ಟ ಆಯಾ ಭಾಗದ ಶಾಸಕರ ಗಮನಕ್ಕೂ ತರಬೇಕು ಎಂದು ಸಚಿವರು ತಿಳಿಸಿದರು.

ರೈತರ ಸಮಸ್ಯೆ ಅರಿಯಲು ಕ್ಷೇತ್ರ ಪ್ರವಾಸ ಕೈಗೊಳ್ಳಿ: ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿಯಲ್ಲಿ ರೈತರ ಸಮಸ್ಯೆಗಳನ್ನು ಅರಿಯಲು ಅಧಿಕಾರಿಗಳು ಕ್ಷೇತ್ರಪ್ರವಾಸ ಮಾಡ ಬೇಕು. ಈ ಬಾರಿ ತೋಟಗಾರಿಕೆ ಬೆಳೆಹಾನಿಗೆ 70.85 ಲಕ್ಷ ರೂ. ಪರಿಹಾರ ನೀಡಲಾಗಿದೆ. ಹೂ ಬೆಳೆಗಾರರಿಗೂ ಪರಿಹಾರ ಒದಗಿಸಲಾಗಿದೆ. ಹಣ್ಣು ಬೆಳೆಗಾರರಿಗೆ 58 ಲಕ್ಷ ರೂ. ಬಿಡುಗಡೆಯಾಗಿದ್ದು, ಈಗಾಗಲೇ 607 ಜನರಿಗೆ ಪರಿಹಾರ ನೀಡಲಾಗಿದೆ. ಹನಿ ನೀರಾವರಿಗಾಗಿ ಜನರು ಮಧ್ಯವರ್ತಿಗಳನ್ನು ಅವಲಂಬಿಸದಂತೆ ಆದ್ಯತೆ ಮೇರೆಗೆ ಸಹಾಯಧನ ನೀಡಬೇಕು ಎಂದು ಸಚಿವರಾದ ನಾರಾಯಣಗೌಡ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಚಾಮರಾಜನಗರ ನಗರಸಭೆ ಪೌರಾಯುಕ್ತ ರಾಜಣ್ಣ, ಕೊಳ್ಳೇಗಾಲ ನಗರಸಭೆ ಆಯುಕ್ತ ನಾಗ ಶೆಟ್ಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೆ. ಸುರೇಶ್‌, ಎಂಜಿನಿಯರ್‌ ರವಿ ಕುಮಾರ್‌, ರೇಷ್ಮೆ ಉಪನಿರ್ದೇಶಕ ವೃಷಭೇಂದ್ರಪ್ಪ, ತೋಟಗಾರಿಕಾ ಉಪನಿರ್ದೇಶಕ ಶಿವಪ್ರಸಾದ್‌ ಸೇರಿದಂತೆ ಪುರಸಭೆ, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-kollegala

Kollegala: ಗಾಂಜಾ ಗಿಡ ಬೆಳೆಸಿದ್ದ ಆರೋಪಿಯ ಬಂಧನ; ಗಿಡ ವಶಕ್ಕೆ ಪಡೆದ ಪೊಲೀಸರು

2-gundlupete

Chamarajanagar: ಬೈಕ್- ಪಿಕ್ ಅಪ್ ಅಪಘಾತ: ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವುRoad Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.