ಗಡಿಯಂಚಿನ ಗ್ರಾಮಗಳಿಗೆ ಸಾರಿಗೆ ಕಲ್ಪಿಸಿ


Team Udayavani, Nov 29, 2019, 2:29 PM IST

cn-tdy-1

ಹನೂರು: ರಾಜ್ಯದ ಗಡಿಯಂಚಿನ ಕಂಬಿಗುಡ್ಡ ಮತ್ತು ಅರೆಕಡುವಿನ ದೊಡ್ಡಿ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕು. ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ರಾಜ್ಯದ ಗಡಿ ಗ್ರಾಮ ಪಂಚಾಯ್ತಿಯಾದ ಬೈಲೂರು ವ್ಯಾಪ್ತಿಗೆ ಒಳಪಡುವ ಕಂಬಿಗುಡ್ಡ ಮತ್ತು ಅರೆಕಡುವಿನ ದೊಡ್ಡಿ ಗ್ರಾಮಗಳು ಕೊಳ್ಳೇಗಾಲ -ಹಸನೂರು ಘಾಟ್‌ ಮುಖ್ಯ ರಸ್ತೆಯಿಂದ ಸುಮಾರು5 ಕಿ.ಮೀ ದೂರವಿದೆ. ಗ್ರಾಮ ಪಂಚಾಯ್ತಿ ಕೇಂದ್ರಸ್ಥಾನ ಬೈಲೂರಿನಿಂದ 3 ಕಿ.ಮೀ ಅಂತರವಿದೆ. ಇಲ್ಲಿನ ಗ್ರಾಮಸ್ಥರು ದೈನಂದಿನ ಚಟುವಟಿಕೆಗಳಿಗಾಗಿ ಮತ್ತು ಶಾಲಾ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ನಡೆದುಕೊಂಡೇ ಬರಬೇಕಾದ ಪರಿಸ್ಥಿತಿಯಿದೆ.

ವನ್ಯಜೀವಿಗಳ ಹಾವಳಿ: ಕಂಬಿಗುಡ್ಡ ಮತ್ತು ಅರೆಕಡುವಿನ ದೊಡ್ಡಿ ಗ್ರಾಮಗಳಿಂದ ಸುಮಾರು 20ಕ್ಕೂ ಹೆಚ್ಚು ಗಿರಿಜನ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ನಡುದುಕೊಂಡೇ ಹೋಗಬೇಕಿದೆ. ಈ ಗ್ರಾಮಗಳು ಕರ್ನಾಟಕ ಮತ್ತು ತಮಿಳುನಾಡನ್ನು ಬೇರ್ಪಡಿಸುವ ಗಡಿಗ್ರಾಮಗಳಾಗಿದ್ದು ಸುತ್ತಲೂ ದಟ್ಟ ಅರಣ್ಯದಿಂದ ಕೂಡಿದೆ. ಈ ವಿದ್ಯಾರ್ಥಿಗಳು ಶಾಲೆಗೆ ತೆರಳು ವೇಳೆಹಲವಾರು ಬಾರಿ ಕಾಡುಹಂದಿಗಳು, ಕಾಡಾನೆ ಸೇರಿದಂತೆ ಹಲವಾರು ವನ್ಯಜೀವಿಗಳು ಪ್ರತ್ಯಕ್ಷವಾಗಿವೆ.

ಅಲ್ಲದೆ, ಹಲವಾರು ಬಾರಿ ಜಮೀನುಗಳಿಂದ ಹಂದಿಗಳು ಓಡಾಡುವುದನ್ನು ಕಂಡು ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ. ಸಂಜೆಯಾಗುತ್ತಲೇ ಕಾಯಬೇಕಾದ ಪರಿಸ್ಥಿತಿ: ಈ ಎರಡೂ ಗ್ರಾಮಗಳ ಗ್ರಾಮಸ್ಥರು ಯಾರಾದರೂ ವೈದ್ಯಕೀಯ ತಪಾಸಣೆಗೆ, ಸಂಬಂಧಿಕರ ಮನೆಗಳಿಗೆ, ಇನ್ನಿತರೆ ಕೆಲಸ ಕಾರ್ಯಗಳಿಗೇನಾದರೂ ತೆರಳಿದರೆ ಸಂಜೆಯಾಗುತ್ತಲೇ ಸಂಜೆ ವೇಳೆಗೆ ಆಗಮಿಸುವ ಬಸ್ಸು ಬೈಲೂರು ತಲುಪಿದ ಬಳಿಕ ಆ ಬಸ್ಸಿನಲ್ಲಿ ಬಂದವರನ್ನು ಕರೆದುಕೊಂಡು ಗ್ರಾಮಗಳತ್ತ ತೆರಳಲು ಮತ್ತೂಬ್ಬರು ಕಾಯಬೇಕಾದ ಪರಿಸ್ಥಿತಿಯಿದೆ. ಇಂತಹ ಸಂದರ್ಭದಲ್ಲಿ ಗ್ರಾಮಸ್ಥರು ವನ್ಯಜೀವಿಗಳ ದಾಳಿಯ ಭೀತಿಯಲ್ಲಿಯೇ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿಯಿದೆ.

ಈ ಹಿನ್ನೆಲೆ ಬೈಲೂರು ಗ್ರಾಮದವರೆಗೆ ಆಗಮಿಸುವ ಬಸ್ಸನ್ನೇ ಬೆಳಗ್ಗೆ ಒಂದು ಬಾರಿ ಸಂಜೆ ಒಂದು ಬಾರಿ ಕಂಬಿಗುಡ್ಡ ಗ್ರಾಮದವರೆಗೆ ವಿಸ್ತರಿಸಿದಲ್ಲಿ ಈ ಭಾಗದ ಜನರಿಗೆ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಅರೆಕಡುವಿನದೊಡ್ಡಿ ಮತ್ತು ಕಂಬಿಗುಡ್ಡ ಗ್ರಾಮಗಳ ರಸ್ತೆಯು ಉತ್ತಮ ಸ್ಥಿತಿಯಲ್ಲಿದೆ. ರಾಷ್ಟ್ರೀಯ ಹೆದ್ದಾರಿ ಮಾದರಿಯಲ್ಲಿ ನಿರ್ಮಾಣವಾಗಿದೆ. ಆದ್ದರಿಂದ ಸಾರಿಗೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿಬೆಳಗ್ಗೆ ಶಾಲಾ ಪ್ರಾರಂಭವಾಗುವ ವೇಳೆಗೆಮತ್ತು ಸಂಜೆಯ ವೇಳೆಗೆ ಒಮ್ಮೆ ಕಂಬಿಗುಡ್ಡದವರೆಗೆ ಬಸ್‌ ಸೌಲಭ್ಯ ವಿಸ್ತರಿಸಿದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲಿದೆ. –ಮಾದೇಗೌಡ, ಗ್ರಾಮ ಪಂಚಾಯ್ತಿ ಸದಸ್ಯ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.