ಪ್ರತಿ ಬಾರಿ ಮಳೆ ಸುರಿದರೂ ಕೊಳಚೆ ನೀರಲ್ಲೇ ಸಂಚಾರ!

ಅವ್ಯವಸ್ಥೆಯಿಂದ ವಾಹನ ಸವಾರರು, ಪಾದಚಾರಿಗಳಿಗೆ ಕಿರಿಕಿರಿ

Team Udayavani, Sep 9, 2020, 11:43 AM IST

ಪ್ರತಿ ಬಾರಿ ಮಳೆ ಸುರಿದರೂ ಕೊಳಚೆ ನೀರಲ್ಲೇ ಸಂಚಾರ!

ಗುಂಡ್ಲುಪೇಟೆ ಪಟ್ಟಣದ ಚಾಮರಾಜನಗರ ರಸ್ತೆಯಲ್ಲಿರುವ ವೀರಯೋಧ ಶಿವಾನಂದ ವೃತ್ತದ ಬಳಿ ಕೊಳಚೆ ನೀರಿನಲ್ಲೇ ವಾಹನ ಸವಾರರು ಸಂಚರಿಸುತ್ತಿರುವುದು.

ಗುಂಡ್ಲುಪೇಟೆ: ಸ್ವಲ್ಪ ಮಳೆ ಬಿದ್ದರೂ ಸಹರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳ ಮೇಲೆಯೇ ಕೊಳಚೆ ನೀರು ಹರಿಯುತ್ತಿದ್ದು, ಜೀವದ ಹಂಗು ತೊರೆದು ವಾಹನ ಸವಾರರು ಮತ್ತು ಪಾದಚಾರಿಗಳು ಸಂಚರಿಸಬೇಕಾಗಿದೆ.

ಪಟ್ಟಣದ ಮಡಹಳ್ಳಿ ಹಾಗೂ ಕೊಡಹಳ್ಳಿ ಸರ್ಕಲ್‌ನಿಂದ ಮುಂಭಾಗದ ರಸ್ತೆಯುದ್ದಕ್ಕೂ ಹರಿಯುವ ಕೊಳಚೆ ನೀರು ಮತ್ತು ಕೆಸರಿನಲ್ಲಿವಾಹನಗಳು ಸಂಚರಿಸಬೇಕಿದೆ. ಕಳೆದ 4 ವರ್ಷದ ಹಿಂದೆ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸಂದರ್ಭದಲ್ಲಿ ಮಳೆನೀರು ಸುಗಮವಾಗಿ ಹರಿದು ಹೋಗಲು ವ್ಯವಸ್ಥೆ ಮಾಡದ ಕಾರಣ ಈ ಅವ್ಯವಸ್ಥೆಉಂಟಾಗಿದೆ.

ಎಲ್ಲೆಲ್ಲಿ ಸಮಸ್ಯೆ: ಅಲ್ಲದೇ ರಸ್ತೆಯ ಪಕ್ಕದಲ್ಲಿರುವ ಚರಂಡಿಗಳು ಮುಚ್ಚಿಕೊಂಡಿರುವ ಪರಿಣಾಮ ರಾಷ್ಟ್ರೀಯ ಹೆದ್ದಾರಿ, ಚಾಮರಾಜನಗರ ರಸ್ತೆಗಳ ಬದಿಯಲ್ಲಿನ ರಸ್ತೆಗಳ ಮೇಲೆಯೇ ನೀರು ಹರಿಯುತ್ತಿದೆ. ಪ್ರತಿ ಬಾರಿ ಮಳೆ ಸುರಿದಾಗಲೂ ಪಟ್ಟಣದ ಆರ್‌ಟಿಒ ಕಚೇರಿ, ಪ್ರವಾಸಿ ಮಂದಿರ, ಎಂಡಿಸಿಸಿ ಬ್ಯಾಂಕ್‌, ಬಸ್‌ ನಿಲ್ದಾಣ, ಮಡಹಳ್ಳಿ ವೃತ್ತ, ಚಾಮರಾಜನಗರ ಜೋಡಿ ರಸ್ತೆ, ಆಂಜನೇಯಸ್ವಾಮಿ ದೇವಸ್ಥಾನ, ಶಿವಾನಂದ ವೃತ್ತಗಳ ಬಳಿಯಲ್ಲಿ ಭಾರೀ ಪ್ರಮಾಣದ ಕೊಳಚೆ ನೀರು ಹರಿಯುತ್ತದೆ. ಇದರಿಂದ ಸ್ಥಳೀಯರು ಸಾಕಷ್ಟು ಕಿರಿಕಿರಿ ಅನುಭವಿಸಬೇಕಿದೆ.

ಕೊಳಚೆ ನೀರಲ್ಲೇ ಸಂಚಾರ: ಇತ್ತೀಚೆಗೆ ಬಿದ್ದ ಮಳೆ ನೀರಿನೊಂದಿಗೆ ಕೊಳಚೆ ನೀರು ಬೆರೆತು ಪ್ರವಾಹದಂತೆ ಹರಿಯುತ್ತಿದ್ದು, ಈ ಮಾರ್ಗದಲ್ಲಿ ಸಂಚರಿಸುವ ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ಮಂಡಿಯುದ್ದದ ಕೊಳಚೆ ನೀರಿನಲ್ಲಿ ಹಾದುಹೋಗಲು ತೀವ್ರಪ್ರಯಾಸ ಪಡಬೇಕಾಯಿತು. ಜೋಡಿರಸ್ತೆಯ ಯುಜಿಡಿ, ಚರಂಡಿಗಳು ಹಾಗೂ ಪಟ್ಟಣದ ಮೇಲ್ಭಾಗದಿಂದ ಚರಂಡಿಗಳಲ್ಲಿ ಕೆಳಗೆ ಬಂದ ನೀರು ವೀರಯೋಧ ಶಿವಾನಂದವೃತ್ತದ ಬಳಿ ಚರಂಡಿಯಲ್ಲಿ ಉಕ್ಕಿ ಹರಿದು ಚಾಮರಾಜನಗರ ರಸ್ತೆಯುದ್ದಕ್ಕೂ ಕಾಲುವೆಯಂತೆ ಹರಿಯುತ್ತಿದೆ. ಅಲ್ಲದೇ ಚರಂಡಿಯಲ್ಲಿದ್ದ ಕಸಕಡ್ಡಿಗಳು ರಸ್ತೆಯ ಮೇಲೆಯೇ ಬಿದ್ದಿರುವುದರಿಂದ ಗಬ್ಬುನಾರುತ್ತಿದ್ದು, ಈ ಮಾರ್ಗದಲ್ಲಿ ಮೂಗು ಮುಚ್ಚಿಕೊಂಡು ಸಾಗುವಂತಾಗುತ್ತಿದೆ. ಜೊತೆಗೆ ಸಾಂಕ್ರಾಮಿಕ ರೋಗಗಳ ಭೀತಿ ಕೂಡ ಎದುರಾಗಿದೆ. ಪ್ರತಿ ಬಾರಿಯೂ ಈ ಅವ್ಯವಸ್ಥೆ ಎದುರಾಗುತ್ತಿದ್ದರೂ ಸಂಬಂಧಪಟ್ಟವರು ಇತ್ತ ಗಮನ ಹರಿಸಿಲ್ಲ. ಶಾಸಕರು ಹಾಗೂ ಅಧಿಕಾರಿಗಳು ಮಳೆಗಾಲದಲ್ಲಿ ಕೊಳಚೆ ನೀರು ರಸ್ತೆಗೆ ಬಾರದಂತೆ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಶಾಸಕರೇ ಪ್ರಾಧಿಕಾರದ ಮೇಲೆ ಒತ್ತಡ ಹೇರಿ ಸಮಸ್ಯೆ ಪರಿಹರಿಸಿ : ಕಳೆದ 4 ವರ್ಷದ ಹಿಂದೆ ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸಂದರ್ಭದಲ್ಲಿ ಮಳೆನೀರು ಸುಗಮವಾಗಿ ಹರಿದುಹೋಗಲು ವ್ಯವಸ್ಥೆ ಮಾಡದ ಕಾರಣ ಈ ಅವ್ಯವಸ್ಥೆ ಉಂಟಾಗಿದೆ. ಪ್ರತಿ ಬಾರಿ ಮಳೆ ಬಂದಾಗಲೂ ಕೂಡ ಇದೇ ಸಮಸ್ಯೆ ಎದುರಾಗಿ ವಾಹನ ಸವಾರರಿಗೆ ಕಿರಿಕಿರಿಯಾಗುತ್ತದೆ. ಅಲ್ಲದೇ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇದೆ. ಈ ಸಮಸ್ಯೆ ಕುರಿತು ಪುರಸಭೆಯನ್ನು ಪ್ರಶ್ನಿಸಿದರೆ ಇದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕೆಲಸವಾಗಿ ಎಂದು ಪ್ರತಿಕ್ರಿಯಿಸಿದೆ. ಹೀಗಾಗಿ ಕ್ಷೇತ್ರದ ಶಾಸಕ ನಿರಂಜನ್‌ ಕುಮಾರ್‌ ಹಾಗೂ ಪುರಸಭೆ ಮುಖ್ಯಾಧಿಕಾರಿಗಳು ಪ್ರಾಧಿಕಾರದ ಮೇಲೆ ಒತ್ತಡ ಹೇರಿ ಸಮರ್ಪಕ ಒಳಚರಂಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಪ್ರವಾಸಿ ಮಂದಿರದಿಂದ ಮಡಹಳ್ಳಿ ವೃತ್ತದವರೆಗೂ ರಾಷ್ಟ್ರೀಯ ಹೆದ್ದಾರಿ ಬದಿಗಳಲ್ಲಿ ಮಳೆನೀರು ನಿಲ್ಲದಂತೆ ಮಾಡಲು ಕಳೆದ ವರ್ಷ ಪುರಸಭೆ ವತಿಯಿಂದ 70 ಲಕ್ಷ ರೂ.ವೆಚ್ಚದಲ್ಲಿ ಟೆಂಡರ್‌ ಕರೆದು ವರ್ಕ್‌ ಆರ್ಡರ್‌ ಮಂಜೂ ರಾಗಿದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ತಾವೇ ಕಾಮಗಾರಿ ಮಾಡುವುದಾಗಿಹೇಳಿದ್ದರಿಂದ ಇದನ್ನು ಕೈಬಿಡಲಾಗಿದೆ. ಇದೇ ಹಣವನ್ನು ಶಿವಾ ನಂದ ವೃತ್ತದ ಬಳಿ ದೊಡ್ಡ ಚರಂಡಿ ನಿರ್ಮಿಸಲು ಕ್ರಮಕೈಗೊಳ್ಳ ಲಾಗಿದೆ. ಶೀಘ್ರದಲ್ಲೇ ಈ ಸಮಸ್ಯೆಗೆ ಅಂತ್ಯ ಹಾಡಲಾಗುವುದು.   ಎ.ರಮೇಶ್‌, ಪುರಸಭೆ ಮುಖ್ಯಾಧಿಕಾರಿ

 

ಸೋಮಶೇಖರ್‌

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.