ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಜೆ.ಪಿ. ನಡ್ಡಾ


Team Udayavani, Mar 1, 2023, 4:19 PM IST

ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಜೆ.ಪಿ. ನಡ್ಡಾ

ಚಾಮರಾಜನಗರ: ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ರಥ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ನಗಾರಿ ಬಾರಿಸಿ, ಬಾವುಟ ಬೀಸುವ ಮೂಲಕ ಚಾಲನೆ ನೀಡಿದರು.

ಮಲೆ ಮಹದೇಶ್ವರ ದೇವಸ್ಥಾನದ ಎದುರಿನ ಮೈದಾನದಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಕೇಂದ್ರಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಅರಗ ಜ್ಞಾನೇಂದ್ರ, ಸುನೀಲ್‌ಕುಮಾರ್, ಕೋಟಾ ಶ್ರೀನಿವಾಸಪೂಜಾರಿ, ರಾಜ್ಯ ಸಭಾ ಸದಸ್ಯ ಜಗ್ಗೇಶ್, ಎನ್. ಮಹೇಶ್, ನಿರಂಜನಕುಮಾರ್, ಜಿಲ್ಲಾ ಪ್ರಭಾರಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಜಿಲ್ಲಾಧ್ಯಕ್ಷ ನಾರಾಯಣಪ್ರಸಾದ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವಿವಿಧ ಜನಪದ ಕಲಾತಂಡಗಳು, ಗೊರವರ ಕುಣಿತ, ವೀರಗಾಸೆ, ಬೇಡಗಂಪಣ ನೃತ್ಯ, ಮಂಗಳವಾದ್ಯ ಮತ್ತಿತರ ಸಾಂಸ್ಕೃತಿಕ ಕಲಾ ತಂಡಗಳ ನಡುವೆ ಯಾತ್ರೆಗೆ ಚಾಲನೆ ನೀಡಲಾಯಿತು. ರಥಯಾತ್ರೆಗೆ ಸಜ್ಜುಗೊಂಡಿರುವ ಬಸ್ ಮೇಲೆ ನಿಂತು ಬಿಜೆಪಿ ನಾಯಕರು ಜನರತ್ತ ಕೈ ಬೀಸಿದರು.

ರಥ ಯಾತೆಗೆ ಚಾಲನೆ ನೀಡಿದ ಬಳಿಕ ಜೆ.ಪಿ. ನಡ್ಡಾ ಅವರು ಮಹದೇಶ್ವರ ಬೆಟ್ಟದ ರಂಗಮಂದಿರದಲ್ಲಿ ಬುಡಕಟ್ಟು ಸಮುದಾಯಗಳಾದ ಬೇಡಗಂಪಣ ಹಾಗೂ ಸೋಲಿಗರೊಂದಿಗೆ ಸಂವಾದ ನಡೆಸಿದರು. ವೇದಿಕೆಯಲ್ಲಿ ಮಾತನಾಡಿದ ನಡ್ಡಾ ಅವರು, ಮಲೆ ಮಹದೇಶ್ವರನ ದರ್ಶನ ಸ್ವಾಮಿಯನ್ನು ನೋಡುವ ಭಾಗ್ಯ ಹಾಗೂ ಆಶೀರ್ವಾದ ಪಡೆಯುವ ಸೌಭಾಗ್ಯ ದೊರೆತಿದೆ. ಹಾಗೆಯೇ ನಿಮ್ಮನ್ನು ನೋಡುವ ಭಾಗ್ಯವೂ ನನ್ನದಾಗಿದೆ. ಈ ಪವಿತ್ರ ಭೂಮಿಯಿಂದ ಮಲೆ ಮಹದೇಶ್ವರ ಸ್ವಾಮಿಯ ಆಶೀರ್ವಾದ ಪಡೆದು ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಆರಂಭವಾಗಿದೆ ಎಂದರು.

ರಾಜ್ಯದ ನಾಲ್ಕು ಕಡೆಗಳಿಂದ ವಿಜಯ ಸಂಕಲ್ಪ ಯಾತ್ರೆ ಆರಂಭವಾಗುತ್ತಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲೂ ಈ ಯಾತ್ರೆ ನಡೆಯಲಿದೆ. 75 ಸಾರ್ವಜನಿಕ ಸಭೆಗಳು, 150ಕ್ಕೂ ಹೆಚ್ಚು ರೋಡ್ ಶೋಗಳನ್ನು ನಡೆಸಲಿದೆ. ಬೆಳಗಾವಿಯಲ್ಲಿ ದೇಶದ ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಹಾಗೂ ಇನ್ನೆರಡು ಕಡೆ ದೇಶದ ಗೃಹ ಸಚಿವ ಅಮಿತ ಶಾ ಅವರು ಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದರು.

ನಮಗೆ ವಿಶ್ವಾಸವಿದೆ, ಕರ್ನಾಟಕದ ಜನತೆ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ದೇಶವು ಅತ್ಯಂತ ವೇಗದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ. ಕಾಂಗ್ರೆಸ್ ಪಕ್ಷವು ಜಾತಿವಾದ, ಕುಟುಂಬವಾದಗಳಿಂದ ಒಡೆದು ಆಳುತ್ತಿತ್ತು. ಇಂದು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಲ್ಲರ ವಿಶ್ವಾಸ ಪಡೆದು ಎಲ್ಲರ ಭಾರತವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲಾಗುತ್ತಿದೆ. ಜಗತ್ತಿನ ಅಗ್ರಮಾನ್ಯ ದೇಶವಾಗುವತ್ತ ಭಾರತ ಮುನ್ನಡೆಯುತ್ತಿದೆ. ನರೇಂದ್ರಮೋದಿಯವರು ಪ್ರಧಾನಿಯಾಗುವ ಮೊದಲು ಜಗತ್ತಿನಲ್ಲಿ 10ನೇ ಸ್ಥಾನದಲ್ಲಿದ್ದ ಭಾರತ, ಈಗ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. ಆಟೋಮೊಬೈಲ್, ಮೊಬೈಲ್, ಕೈಗಾರಿಕಾ ಮತ್ತಿತರ ಕ್ಷೇತ್ರಗಳಲ್ಲಿ ದೇಶ ಪ್ರಗತಿ ಸಾಧಿಸಿದೆ. ನಮ್ಮನ್ನು ಆಳಿದ ಬ್ರಿಟಿಷ್ ಸರ್ಕಾರವನ್ನು ಹಿಂದಿಕ್ಕಿ ಭಾರತ ಮುನ್ನಡೆಯುತ್ತಿದೆ ಎಂದು ಬಣ್ಣಿಸಿದರು.

ಇಲ್ಲಿರುವ ಸೋದರಿಯರ ಮಾತನ್ನು ಆಲಿಸಿದ್ದೇನೆ. ನಾನು ಇಲ್ಲಿ ಕೇವಲ ಸಂವಾದ ಮಾಡಲು ಮಾತ್ರ ಬಂದಿಲ್ಲ. ಈ ಪ್ರದೇಶದ ಚಿತ್ರಣವನ್ನು ಬದಲು ಮಾಡುವ ಸಂಕಲ್ಪದೊಂದಿಗೆ ಬಂದಿದ್ದೇನೆ. ಅದನ್ನು ಮಾಡಿಯೇ ಸಿದ್ಧ ಎಂಬ ಆಶ್ವಾಸನೆ ನೀಡುವೆ ಎಂದರು.

ಭಾರತದ ರಾಷ್ಟ್ರಪತಿಯಾಗಿ ಓರ್ವ ವನವಾಸಿ ಬುಡಕಟ್ಟು ಮಹಿಳೆ ಆಯ್ಕೆಯಾಗಲು, ಈ ದೇಶದ ಅತ್ಯುನ್ನತ ಸ್ಥಾನಕ್ಕೆ ಬರಲು ನರೇಂದ್ರ ಮೋದಿಯವರು ಕಾರಣ. ದೇಶದ ಪ್ರತಿಯೊಂದು ಸಮುದಾಯಕ್ಕೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದಲ್ಲ ಒಂದು ಯೋಜನೆಗಳನ್ನು ನೀಡುತ್ತಿದೆ.

ವನವಾಸಿ, ಬುಡಕಟ್ಟು ಜನರು, ಪ.ಜಾತಿ, ಪ.ಪಂಗಡ, ಯುವಕರು, ಮಹಿಳೆಯರು ಹಿಂದುಳಿದ ವರ್ಗ ಎಲ್ಲರ ಬಾಳಿನಲ್ಲಿ ಬೆಳಕಾಗುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತಿವೆ. ವಾಜಪೇಯಿ ಸರ್ಕಾರದಲ್ಲಿ ವನವಾಸಿ ಜನರಿಗೆ ವಿಶೇಷ ಸ್ಥಾನ ಮಾನವನ್ನು ನೀಡಿದೆ. ನರೇಂದ್ರ ಮೋದಿಯವರ ಸರ್ಕಾರ ನೀಡಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಹಿಂದೂ ಧರ್ಮ ರಕ್ಷಿಸಲು ಆಂಧ್ರದಲ್ಲಿ 2 ಸಾವಿರ ದೇವಾಲಯಗಳ ನಿರ್ಮಾಣ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.