Biligiri Rangana Betta: ಬಿಳಿಗಿರಿರಂಗನ ಬೆಟ್ಟದಲ್ಲಿ ಶುದ್ಧ ನೀರಿಗೆ ಪರದಾಟ


Team Udayavani, Dec 13, 2023, 3:20 PM IST

Biligiri Rangana Betta: ಬಿಳಿಗಿರಿರಂಗನ ಬೆಟ್ಟದಲ್ಲಿ ಶುದ್ಧ ನೀರಿಗೆ ಪರದಾಟ

ಯಳಂದೂರು: ತಾಲೂಕಿನ ಪ್ರಮುಖ ಪ್ರವಾಸಿ ತಾಣ, ಪುಣ್ಯ ಕ್ಷೇತ್ರವೂ ಆದ ಬಿಳಿಗಿರಿರಂಗನಬೆಟ್ಟಕ್ಕೆ ನಾಡಿನಾದ್ಯಂತ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಸಮರ್ಪಕ ಕುಡಿ ಯುವ ನೀರಿನ ವ್ಯವಸ್ಥೆ ಮಾಡದಿರುವುದು ಅಧಿಕಾರಿ ಗಳ ನಿರ್ಲಕ್ಷ್ಯಕ್ಕೆ ಹಿಡಿತ ಕೈಗನ್ನಡಿಯಾಗಿದೆ.

ಬೆಟ್ಟದಲ್ಲಿ ಒಂದು ಶುದ್ಧ ಕುಡಿಯುವ ನೀರಿನ ಘಟಕವಿಲ್ಲ. ಜತೆಗೆ ಇಲ್ಲಿರುವ ಕುಡಿಯುವ ನೀರಿನ ತೊಟ್ಟಿಗಳು ಪಾಚಿ ಕಟ್ಟಿ, ಸುತ್ತಲೂ ಕೊಳಚೆ ನೀರು ನಿಂತಿದೆ. ಈ ನೀರು ಕುಡಿಯಲು ನಗರ ಪ್ರದೇಶದಿಂದ ಬರುವ ಪ್ರವಾಸಿಗರು ಹಿಂದೇಟು ಹಾಕುತ್ತಾರೆ. ಇತ್ತ ಪಂಚಾಯ್ತಿಯು ಗಮನಹರಿಸುತ್ತಿಲ್ಲ. ಇದರಿಂದ ಈ ನೀರನ್ನು ಕುಡಿಯಲು ಭಕ್ತರು, ಪ್ರವಾಸಿಗರು ಹಿಂದೇಟು ಹಾಕುತ್ತಾರೆ. ಇಲ್ಲಿ ಆಗಾಗ ವಿದ್ಯುತ್‌ ವ್ಯತ್ಯಯ ಆಗುತ್ತಿರುತ್ತದೆ. ಇಲ್ಲಿ ಕರೆಂಟ್‌ನ ಸಮಸ್ಯೆಯಾದರೆ ಕುಡಿಯುವ ನೀರಿಗೆ ಪರದಾಡುವ ಸಂಭವ ಹೆಚ್ಚಾಗಿದೆ. ಇತ್ತ ಪ್ಲಾಸ್ಟಿಕ್‌ ಬಾಟಲ್‌ ನೀರನ್ನು ಸೇವಿಸೋಣ ಎಂದರೆ ಅದಕ್ಕೂ ನಿಷೇಧ ಹೇರಲಾಗಿದೆ. ಇದರಿಂದ ಪ್ರವಾಸಿಗರು ಪರದಾಡುವಂತೆ ಆಗಿದೆ.

ಗ್ರಾಪಂನಿಂದ ಶುದ್ಧ ಕುಡಿಯುವ ನೀರಿಲ್ಲ: ಬಿಳಿಗಿರಿ ರಂಗನಬೆಟ್ಟ ಪ್ರತ್ಯೇಕ ಪಂಚಾಯ್ತಿ ಆಗಿ ಹಲವು ವರ್ಷಗಳೇ ಕಳೆದಿವೆ. ಇದೊಂದು ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಪ್ರಕೃತಿಯನ್ನು ವೀಕ್ಷಿಸಲು, ಇಲ್ಲಿರುವ ಪುರಾತನ ಬಿಳಿಗಿರಿರಂಗನಾಥಸ್ವಾಮಿ ದೇಗುಲ, ಸ್ವಾಮಿ ದರ್ಶನ ಪಡೆಯಲು ದಿನನಿತ್ಯ ಸಾವಿರಾರು ಭಕ್ತರು ಇಲ್ಲಿಗೆ ಭೇಟಿ ನೀಡುತ್ತಾರೆ. ಆದರೆ, ಅವರಿಗೆ ಸೂಕ್ತ ಸೌಲಭ್ಯವಿಲ್ಲ.

ನಾಲ್ಕೈದು ಕಡೆ ಶುದ್ಧ ನೀರು ಒದಗಿಸಬೇಕು: ಬಸ್‌ ನಿಲ್ದಾಣ, ದೇಗುಲದ ಬಳಿ, ತೇರಿನ ಬೀದಿ, ಗಂಗಾಧ ರೇಶ್ವರ ದೇಗುಲದ ಬಳಿ ಇರುವ ಸರ್ಕಲ್‌ನಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ನಿರ್ಮಿಸಿ ಭಕ್ತರಿಗೆ ಅನುಕೂಲ ಮಾಡಿಕೊಡಬೇಕು ಎಂಬುದು ಭಕ್ತರಾದ ಗೋವಿಂದ, ರಮ್ಯಾ, ರಕ್ಷಿತಾರ ಆಗ್ರಹವಾಗಿದೆ.

ಬೆಟ್ಟಕ್ಕೆ ಪ್ರತಿವಾರ ದೇಶವಿದೇಶಗಳಿಂದಲೂ ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ, ಇಲ್ಲಿ ಯಾವುದೇ ಶುದ್ಧ ಕುಡಿಯುವ ನೀರಿನ ಘಟಕಗಳು ಇಲ್ಲ. ಬಾಟಲಿ ನೀರು ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಹಾಗಾಗಿ ಬರುವ ಪ್ರವಾಸಿಗರು ಕುಡಿಯಲು ನೀರು ಇಲ್ಲದೆ ಪ್ರಯಾಸ ಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. -ವೆಂಕಟೇಶ್‌, ಸ್ಥಳೀಯ ನಿವಾಸಿ

ಬಿಆರ್‌ಟಿ ಹುಲಿರಕ್ಷಿತ ಅರಣ್ಯ ಪ್ರದೇಶ ವಾಗಿದೆ. ಇದು ಪ್ಲಾಸ್ಟಿಕ್‌ ನಿಷೇಧ ಪ್ರದೇಶವಾಗಿ ಘೋಷಿಸಲಾಗಿದೆ. ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರನ್ನು ಚೆಕ್‌ ಪೋಸ್ಟ್‌ನಲ್ಲೇ ಪರಿಶೀಲಿಸಿ ಪ್ಲಾಸ್ಟಿಕ್‌ ಬಾಟಲಿ ಕೊಂಡೊಯ್ಯದಂತೆ ಜಾಗೃತಿ ಮೂಡಿಸಲಾಗುತ್ತಿದೆ. ಈಗಾಗಲೇ ಇಲ್ಲಿನ ಗ್ರಾಪಂ, ದೇಗುಲದ ಆಡಳಿತ ಮಂಡಳಿಗೆ ಕುಡಿಯುವ ನೀರಿನ ಸೌಲಭ್ಯಕ್ಕೆ ಒದಗಿಸಲು ಮೌಖೀಕವಾಗಿ ಮನವಿ ಮಾಡಿದ್ದೇವೆ. -ನಾಗೇಂದ್ರ ನಾಯಕ, ಆರ್‌ಎಫ್ಒ ಯಳಂದೂರು ವಲಯ

-ಫೈರೋಜ್‌ ಖಾನ್‌

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.