ಸಾಲೂರು ಮಠದ ಉತ್ತಾರಾಧಿಕಾರಿಯಾಗಿ ಶಾಂತಮಲ್ಲಿಕಾರ್ಜುನಸ್ವಾಮಿ ಪಟ್ಟಾಭಿಷೇಕ


Team Udayavani, Aug 8, 2020, 6:02 PM IST

ಸಾಲೂರು ಮಠದ ಉತ್ತಾರಾಧಿಕಾರಿ ಶಾಂತಮಲ್ಲಿಕಾರ್ಜುನಸ್ವಾಮಿ ಪಟ್ಟಾಭಿಷೇಕ

ಹನೂರು (ಚಾಮರಾಜನಗರ): ಸಾಲೂರು ಮಠಕ್ಕೆ ಶತಮಾನಗಳ ಶ್ರೀ ಪರಂಪರೆಯಿದ್ದು ಹೆಚ್ಚು ಸಾಮಾಜಿಕ ಸೇವೆಗಳನ್ನು ಕೈಗೊಳ್ಳುವ ಮೂಲಕ ಮಠದ ಏಳ್ಗೆಗೆ ಒತ್ತು ನೀಡಬೇಕು ಎಂದು ಸುತ್ತೂರು ವೀಸಿಂಹಾಸನ ಮಹಾಸಂಸ್ಥಾನಮಠದ ದೇಶಿಕೇಂದ್ರ ಮಹಾಸ್ವಾಮಿಗಳು ತಿಳಿಸಿದರು.

ತಾಲೂಕಿನ ಪ್ರಸಿದ್ಧ ಧಾರ್ಮಿಕ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಉತ್ತರಾಧಿಕಾರಿಯಾಗಿ ಆಯ್ಕೆಯಾದ ವಟು ನಾಗೇಂದ್ರ ಅವರಿಗೆ ಪಟ್ಟಾಭೀಷೇಕ ಕಾರ್ಯಕ್ರಮ ಮತ್ತು ಧಾರ್ಮಿಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಸಭೆಯಲ್ಲಿ ಮಾತನಾಡಿದ ಸುತ್ತೂರು ಶ್ರೀಗಳು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ನಾನಾಕಡೆಯಿಂದ ಭಕ್ತರು ಆಗಮಿಸುತ್ತಾರೆ. ಇಲ್ಲಿಗೆ ಆಗಮಿಸುವ ಭಕ್ತರಿಗೂ ಸಾಲೂರು ಬೃಹನ್ಮಠಕ್ಕೂ ಅವಿನಾಭಾವ ಸಂಬಂಧವಿದ್ದು ಐತಿಹಾಸಿಕ ಹಿನ್ನೆಲೆಯಿದೆ. ಅಲ್ಲದೆ ಶ್ರೀ ಕ್ಷೇತ್ರದಲ್ಲಿ ಜರುಗುವ ವಿವಿಧ ಪೂಜಾ ಕೈಂಕರ್ಯಗಳಲ್ಲಿ ಮಠದ ರ್ಶರೀಗಳು ಭಾಗವಹಿಸುವುದು ಹಿರಿಮೆಯಾಗಿದೆ. ಆದುದರಿಂದ ಮಠದ ಸಂಪ್ರದಾಯದ ಜೊತೆಗೆ ಹೆಚ್ಚಿನ ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮಠದ ಕೀರ್ತಿಯನ್ನು ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ಕಿವಿಮಾತು ಹೇಳಿದರು.

ಸಾಲೂರು ಮಠದಲ್ಲಿ ಪಟ್ಟದ ಗುರುಸ್ವಾಮಿಗಳಿಗೆ ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಿದ್ದ ಹಿನ್ನೆಲೆ ಮಠದ ಭಕ್ತರು ತಮ್ಮ ಬಳಿ ಬಂದು ಉತ್ತರಾಧಿಕಾರಿ ಆಯ್ಕೆ ಮಾಡಿಕೊಡುವಂತೆ ಮನವಿ ಮಾಡಿದರು. ಈ ಹಿನ್ನೆಲೆ 9 ಪದಾಧಿಕಾರಿಗಳ ಆಯ್ಕೆ ಸಮಿತಿಯನ್ನು ರಚನೆ ಮಾಡಲಾಗಿತ್ತು. ಈ ಸಮಿತಿಯು ಉತ್ತರಾಧಿಕಾರಿ ಸ್ಥಾನಕ್ಕೆ ವಟು ನಾಗೇಂದ್ರ ಅವರೇ ಸೂಕ್ತ ಎಂದು ಅಂತಿಮ ವರದಿ ನೀಡಿದ ಹಿನ್ನೆಲೆ ಪಟ್ಟಾಭಿಷೇಕ ನೆರವೇರಿಸಲಾಗುತ್ತಿದೆ ಎಂದು ತಿಳಿಸಿದರು.

ಸಾಲೂರು ಮಠ

ಕಾರ್ಯಕ್ರಮದಲ್ಲಿ ಶಾಸಕ ನರೇಂದ್ರ ಮಾತನಾಡಿ ಸಾಲೂರು ಮಠದ ಪಟ್ಟದ ಗುರುಸ್ವಾಮಿಗಳ ಆರೋಗ್ಯ ಕ್ಷೀಣಿಸಿದ್ದ ಹಿನ್ನೆಲೆ ಮಠದ ಸಾಮಾಜಿಕ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಮಂಕು ಕವಿದಂತಾಗಿತ್ತು. ಇದೀಗ ಉತ್ತರಾಧಿಕಾರಿ ಆಯ್ಕೆಯಾಗಿರುವುದರಿಂದ ಆ ಮಂಕು ಸರಿದಂತಾಗಿದೆ. ಮುಂದಿನ ದಿನಗಳಲ್ಲಿ ಮಠದ ಶೈಕ್ಷಣಿಕ ಸಂಸ್ಥೆ ವತಿಯಿಂದ ಮಹದೇಶ್ವರ ಬೆಟ್ಟ ಸುತ್ತಮುತ್ತಲ 26 ಹಳ್ಳಿಗಳ ಮಕ್ಕಳಿಗೆ ಉತ್ತಮ ವಿದ್ಯಾದಾನ ನೀಡಬೇಕು. ಈ ಮೂಲಕ ಮಠವನ್ನು ಇನ್ನೂ ಉತ್ತುಂಗಕ್ಕೆ ಕೊಂಡೊಯ್ಯಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ಸಿದ್ಧಗಂಗಾ ಕ್ಷೇತ್ರದ ಸಿದ್ದಲಿಂಗ ಮಹಾಸ್ವಾಮಿಗಳು, ಕನಕಪುರ ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಮಾತನಾಡಿದರು.

ಈ ಸಂದರ್ಭದಲ್ಲಿ ಗುಂಡ್ಲುಪೇಡೆ ಶಾಸಕ ನಿರಂಜನ್‍ಕುಮಾರ್, ಮಾಜಿ ಶಾಸಕಿ ಪರಿಮಳಾ ನಾಗಪ್ಪ, ಪಟ್ಟದ ಗುರುಸ್ವಾಮಿಗಳು, ಉತ್ತರಾಧಿಕಾರಿ ಆಯ್ಕೆ ಸಮಿತಿ ಅಧ್ಯಕ್ಷ ಶಾಗ್ಯ ರವಿ, ನಿರ್ದೇಶಕ ತೋಟೇಶ್ ಪದಾಧಿಕಾರಿಗಳು, ವಿವಿಧ ಮಠಗಳ ಮಠಾಧೀಶರು ಮತ್ತು ಭಕ್ತ ಸಮೂಹ ಭಾಗವಹಿಸಿದ್ದರು.

ಪಟ್ಟಾಭಿಷೇಕ ಕಾರ್ಯಕ್ರಮ: ಉತ್ತರಾಧಿಕಾರಿಗೆ ಪಟ್ಟಾಭಿಷೇಕ ಮಹೋತ್ಸವ ಹಿನ್ನೆಲೆ ಶನಿವಾರ ಬೆಳ್ಳಂ ಬೆಳಗ್ಗೆಯೇ ಬ್ರಾಹ್ಮಿ ಮುಹೂರ್ತದಲ್ಲಿ ಪೂಜಾ ಕೈಂಕರ್ಯಗಳನ್ನು ವಿಧಿವಿಧಾನಗಳೊಂದಿಗೆ ನೆರವೇರಿಸಲಾಯಿತು. ಬೆಳಗ್ಗೆಯೇ ಪಂಚಕಳಸ ಪೂಜೆ, ಶ್ರೀಕರ್ತೃ ಗದ್ದುಗೆಗಳಿಗೆ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಅಷ್ಟೋತ್ತರ ಶತನಾಮಾವಳಿಗಳು ಜರುಗಿದವು. ಈ ವೇಳೆ ವಟು ನಾಗೇಂದ್ರ ಅವರು ನಾಡಿನ 3 ಮಠಗಳಾದ ಸುತ್ತೂರು ಶ್ರೀ, ಸಿದ್ಧಗಂಗಾ ಶ್ರೀ ಮತ್ತು ಕನಕಪುರದ ದೇಗುಲ ಮಠದ ಶ್ರೀಗಳಿಗೆ ಪೂಜೆ ನೆರವೇರಿಸಿದರು. ಬಳಿಕ ಸಾಂಪ್ರದಾಯಿಕವಾಗಿ ದೀಕ್ಷೆ ನೀಡಿ ಶಾಂತಮಲ್ಲಿಕಾರ್ಜುನಸ್ವಾಮಿ ಎಂದು ನಾಮಕರಣ ಮಾಡಲಾಯಿತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.