![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-415x237.jpg)
ಮ್ಯೂಸಿಯಂ, ಬಳೇಮಂಟಪ ಸುತ್ತ ಸರ್ವೆ ನಡೆಸಿ
Team Udayavani, Feb 5, 2022, 2:12 PM IST
![ಮ್ಯೂಸಿಯಂ, ಬಳೇಮಂಟಪ ಸುತ್ತ ಸರ್ವೆ ನಡೆಸಿ](https://www.udayavani.com/wp-content/uploads/2022/02/Untitled-2-7-620x372.jpg)
ಯಳಂದೂರು: ಪಟ್ಟಣದಲ್ಲಿರುವ ಐತಿಹಾಸಿಕ ಬಳೇಮಂಟಪ, ಗೌರೇಶ್ವರ ದೇಗುಲ ಹಾಗೂ ದಿವಾನ್ ಪೂರ್ಣಯ್ಯ ವಸ್ತು ಸಂಗ್ರಹಾಲಯಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಶುಕ್ರವಾರ ಭೇಟಿ ನೀಡಿ ಇದರ ಸುತ್ತಲೂ ಇರುವ ಸ್ಥಳವನ್ನು ಸರ್ವೆ ನಡೆಸಿ, ವರದಿ ನೀಡಬೇಕು ಎಂದು ತಹಶೀಲ್ದಾರ್ಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪ್ರಾಚ್ಯ ಇಲಾಖೆಯ ವ್ಯಾಪ್ತಿಯಲ್ಲಿರುವ ದಿವಾನ್ ಪೂರ್ಣಯ್ಯ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿ, ಇಲ್ಲಿ ಸಂಗ್ರಹಿಸಿರುವ ವಸ್ತುಗಳನ್ನು ವೀಕ್ಷಿಸಿ ಮಾಹಿತಿ ಪಡೆದರು. ಇದರ ಮುಂಭಾಗ ದಲ್ಲಿರುವ ಖಾಲಿ ಸ್ಥಳವು ನ್ಯಾಯಾಲಯದಲ್ಲಿದೆ. ಪಕ್ಕದಲ್ಲಿರುವ ಖಾಲಿ ನಿವೇಶನದ ತೀರ್ಪು ಸರ್ಕಾರದ ಪರವಾಗಿದೆ ಎಂದು ಪ್ರಾಚ್ಯ ಇಲಾಖೆಯ ಸುನೀಲ್ ಕುಮಾರ್ ಮಾಹಿತಿ ನೀಡಿದರು.
ನಂತರ ಪಕ್ಕದಲ್ಲಿರುವ ಗೌರೇಶ್ವರ ದೇಗುಲ ಹಾಗೂ ಬಳೇಮಂಪಟವನ್ನು ವೀಕ್ಷಿಸಿ ಮಾಹಿತಿ ಪಡೆದರು. ಇಲ್ಲಿನ ಅರ್ಚಕ ಮಹೇಶ್ ಚಂದ್ರಮೌಳಿ ದೀಕ್ಷೀತ್, ಇದರ ಮುಂಭಾಗದಲ್ಲಿರುವ ರಾಷ್ಟ್ರೀಯ ಹೆದ್ದಾರಿ 209 ಎತ್ತರಿಸಿದ ಬಳಿಕೆ ದೇಗುಲ ಕೆಳಕ್ಕೆ ಇದೆ. ಇದನ್ನು ವೀಕ್ಷಿಸಲು ಬರುವ ವೃದ್ಧರು ಹಾಗೂ ಮಹಿಳೆಯರು, ಮಕ್ಕಳು ಕಷ್ಟ ಪಡುವ ಸ್ಥಿತಿ ಇದೆ. ಹೀಗಾಗಿ ಇದಕ್ಕೆ ಮೆಟ್ಟಿಲುಗಳನ್ನು ನಿರ್ಮಿಸಿಕೊಡಬೇಕೆಂದು ಕೋರಿದರು.
ಕೂಡಲೇ ನಗರೋತ್ಥಾನ ಇಲಾಖೆಯ ಯೋಜನಾ ನಿರ್ದೇಶಕ ಸುರೇಶ್ ಅವರಿಗೆ ಈ ಬಗ್ಗೆ ಪಪಂ ಎಂಜಿನಿಯರ್ ಬಳಿ ಚರ್ಚಿಸಿ ಇದಕ್ಕೆ ಮೆಟ್ಟಿಲು ನಿರ್ಮಿಸಲು ಕೂಡಲೇ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಪಟ್ಟಣದ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 209ರ ನಡುವೆ ಇರುವ ಖಾಸಗಿವ್ಯಕ್ತಿಯೊಬ್ಬರ ಕಟ್ಟಡವನ್ನು ತೆರವುಗೊಳಿಸಿಲ್ಲ. ಇದರ ಬಗ್ಗೆ ನ್ಯಾಯಾಲಯವೂ ಆದೇಶಿಸಿದ್ದರೂ ಕ್ರಮವಹಿಸಿಲ್ಲ. ಇದರಿಂದ ಈ ಭಾಗದಲ್ಲಿ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿದ್ದು ಕೂಡಲೇ ಈ ಬಗ್ಗೆ ಕ್ರಮವಹಿಸಬೇಕು ಎಂದು ಮೀರೆಸಿದ್ದರಾಜು ಸೇರಿದಂತೆ ಕೆಲವು ಮನವಿ ಮಾಡಿದರು. ಈ ಬಗ್ಗೆ ಪರಿಶೀಲಿಸಿಕ್ರಮ ವಹಿಸುವ ಭರವಸೆಯನ್ನು ಜಿಲ್ಲಾಧಿಕಾರಿ ನೀಡಿದರು.
ಈ ವೇಳೆ ತಹಶೀಲ್ದಾರ್ ಆನಂದಪ್ಪ ನಾಯಕ್, ಪಪಂ ರಾಜಸ್ವ ನಿರೀಕ್ಷಕ ನಂಜುಂಡಶೆಟ್ಟಿ,ಆರೋಗ್ಯಾಧಿಕಾರಿ ಮಹೇಶ್ಕುಮಾರ್,ಪರಶಿವಮೂರ್ತಿ, ಮಲ್ಲಿಕಾರ್ಜುನ, ಮುಖಂಡರಾದ ನಿಂಗರಾಜು ಸೇರಿಂದತೆ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-415x237.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Road Mishap: ಕೆಎಸ್ಆರ್ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ ; ಇಬ್ಬರ ಸಾವು](https://www.udayavani.com/wp-content/uploads/2024/07/road-mishap-11-1-150x79.jpg)
Road Mishap: ಕೆಎಸ್ಆರ್ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ; ಇಬ್ಬರ ಸಾವು
![Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ](https://www.udayavani.com/wp-content/uploads/2024/07/chamaraja-nagara-150x113.jpg)
Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ
![suicide (2)](https://www.udayavani.com/wp-content/uploads/2024/06/suicide-2-2-150x81.jpg)
kollegala; ಬೈಕ್ ಗೆ ಅಡ್ಡ ಬಂದ ನವಿಲು: ಸವಾರ ಸ್ಥಳದಲ್ಲೇ ಸಾವು
![1-wqeqwe](https://www.udayavani.com/wp-content/uploads/2024/06/1-wqeqwe-150x109.jpg)
Gundlupete: ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು
![Bandipur: ರಿಲ್ಯಾಕ್ಸ್ ಮೂಡ್ನಲ್ಲಿದ್ದ ವ್ಯಾಘ್ರನನ್ನೇ ಅಟ್ಟಾಡಿಸಿದ ಗಜರಾಜ…](https://www.udayavani.com/wp-content/uploads/2024/06/tiger-1-150x92.jpg)
Bandipur: ರಿಲ್ಯಾಕ್ಸ್ ಮೂಡ್ನಲ್ಲಿದ್ದ ವ್ಯಾಘ್ರನನ್ನೇ ಅಟ್ಟಾಡಿಸಿದ ಗಜರಾಜ…
MUST WATCH
ಹೊಸ ಸೇರ್ಪಡೆ
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
![7-sirsi](https://www.udayavani.com/wp-content/uploads/2024/07/7-sirsi-150x90.jpg)
ತುಂಬಿ ಹರಿಯುತ್ತಿರುವ ಚಂಡಿಕಾನದಿ;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ಮಾರ್ಗ ವ್ಯವಸ್ಥೆ
![Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ](https://www.udayavani.com/wp-content/uploads/2024/07/ayodhya-150x84.jpg)
Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ
![PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?](https://www.udayavani.com/wp-content/uploads/2024/07/Darshan-150x94.jpg)
PavithraGowda ದರ್ಶನ್ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್ ಗೆ ಬರೆದ ಪತ್ರದಲ್ಲೇನಿದೆ?
![6-belthangady](https://www.udayavani.com/wp-content/uploads/2024/07/6-belthangady-150x90.jpg)
Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.