ಅಂಗನವಾಡಿ ಮುಂದಿರುವ ಟ್ರಾನ್ಸ್‌ಫಾರ್ಮರ್‌ನಿಂದ ಅಪಾಯ


Team Udayavani, May 11, 2019, 3:00 AM IST

anganavadi

ಕೊಳ್ಳೇಗಾಲ: ತಾಲೂಕಿನ ಹರಳೆ ಗ್ರಾಮದಲ್ಲಿ ಶರಣ ಹರಳಯ್ಯ ಗದ್ದುಗೆ ಹೊಂದಿರುವ ಪವಿತ್ರವಾದ ಗ್ರಾಮದಲ್ಲಿ ಮಕ್ಕಳ ಕಲಿಕೆಗೆ ಅಂಗನವಾಡಿ ಕೇಂದ್ರವೊಂದನ್ನು ತೆರೆಯಲಾಗಿದ್ದು, ಕೇಂದ್ರದ ಮುಂಭಾಗವೇ ಸೆಸ್ಕ್ ನಿಗಮದ ವತಿಯಿಂದ ವಿದ್ಯುತ್‌ ಪರಿಕರ ಜೋಡಣೆ ಮಾಡಲಾಗಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಬೇರೆಡೆಗೆ ಸ್ಥಳಾಂತರಿಸಿ ಪುಟ್ಟ ಮಕ್ಕಳಿಗಾಗುವ ಅಪಾಯ ತಪ್ಪಿಸಬೇಕಿದೆ.

ಇಲ್ಲಿನ ಅಂಗನವಾಡಿ ಕೇಂದ್ರದಲ್ಲಿ ನೋಂದಣಿಗೊಂಡಿರುವ 22 ಮಕ್ಕಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುವ ಉಚಿತ ಶಿಕ್ಷಣ ಮತ್ತು ಇನ್ನಿತರ ಆಹಾರ ಸಾಮಗ್ರಿಗಳನ್ನು ಪಡೆದು ಆಟೋಟವನ್ನು ಆಡುವ ಹಸುಳೆಗಳಿಗೆ ಕೇಂದ್ರದ ಮುಂಭಾಗ ಇರುವ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ನಿಂದ ಆಡಚಣೆ ಉಂಟಾಗುವ ಪರಿಸ್ಥಿತಿ ಎದುರಾಗಿದ್ದು, ಕೂಡಲೇ ಸೆಸ್ಕ್ ನಿಗಮದ ಅಧಿಕಾರಿಗಳು ಇತ್ತ ಗಮನ ಹರಿಸಿ ಅಪಾಯವಾಗುವ ಮುನ್ನವೇ ಟಾನ್ಸ್‌ಫಾರ್ಮರ್‌ ಅನ್ನು ಬೇರೆಡೆಗೆ ಸ್ಥಳಾಂತರಿಸಿ ಹಸುಳೆಗಳ ರಕ್ಷಣೆಗೆ ಮುಂದಾಗಬೇಕು.

ಸೆಸ್ಕ್ ಅಧಿಕಾರಿಗಳೇ ಜವಾಬ್ದಾರಿ: ಅಂಗನವಾಡಿ ಕೇಂದ್ರದ ಮುಂಭಾಗವೇ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಇದ್ದು, ಮಕ್ಕಳು ಆಟವಾಡುವ ವೇಳೆ ಯಾವುದಾದರೂ ಅಪಾಯ ಏರ್ಪಟ್ಟ ಸಂದರ್ಭದಲ್ಲಿ ಅದರಿಂದ ಉಂಟಾಗುವ ಅನಾವುತಕ್ಕೆ ನಿಗಮದ ಅಧಿಕಾರಿಗಳೇ ಹೊಣೆಗಾರರು ಆಗಬೇಕಾಗುತ್ತದೆ ಎಂದು ಗ್ರಾಮಸ್ಥರ ಎಚ್ಚರಿಸಿದ್ದಾರೆ.

ಅನಾವುತ ಕಟ್ಟಿಟ್ಟ ಬುತ್ತಿ: ಅಂಗನವಾಡಿ ಕೇಂದ್ರದ ಬಳಿ ಅನಾವುತ ಸಂಭವಿಸುವ ಮೊದಲೇ ಅಧಿಕಾರಿಗಳು ವಿದ್ಯುತ್‌ ಟ್ರಾನ್ಸ್‌ಫಾರ್ಮರನ್ನು ಬದಲಾಯಿಸುವ ಮೂಲಕ ಮುಂದೊಂದು ದಿನ ಸಂಭವಿಸಬಹುದಾದ ಅನಾವುತವನ್ನು ತಪ್ಪಿಸಬೇಕೆಂದು ಗ್ರಾಮದ ಯುವ ಮುಖಂಡ ಗಣೇಶ್‌ ಒತ್ತಾಯಿಸಿದ್ಧಾರೆ.

ಅಧಿಕಾರಿಗಳಿಗೆ ಮನವಿ: ಕೇಂದ್ರದ ಮುಂಭಾಗ ವಿದ್ಯುತ್‌ ನಿಗಮದ ಅಧಿಕಾರಿಗಳು ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಅಳವಡಿಸಿದ್ದು, ಇದರಿಂದ ಮಕ್ಕಳಿಗೆ ಅಪಾಯ ಎದುರಾಗುವುದರಿಂದ ಕೂಡಲೇ ಮಹಿಳಾ ಮತ್ತು ಮಕ್ಕಳು ಕಲ್ಯಾಣ ಅಭಿವೃದ್ಧಿ ಇಲಾಖಾ ಅಧಿಕಾರಿಗಳ ಗಮನಕ್ಕೆ ತಂದು ಅದನ್ನು ತೆರುವುಗೊಳಿಸುವಂತೆ ಮನವಿ ಮಾಡಲಾಗುವುದೆಂದು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸುಂದ್ರಮ್ಮ “ಉದಯವಾಣಿ’ಗೆ ತಿಳಿಸಿದ್ದಾರೆ.

ಹರಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಂಗನವಾಡಿ ಕೇಂದ್ರದ ಮುಂಭಾಗ ಅಳವಡಿಸಿರುವ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ಬದಲಾಯಿಸುವಂತೆ ದೂರು ನೀಡಿದ ಪಕ್ಷದಲ್ಲಿ ಕೂಡಲೇ ಸ್ಥಳಾಂತರ ಮಾಡಲಾಗುವುದು.
-ಲಿಂಗರಾಜು, ಸೆಸ್ಕ್ ನಿಗಮದ ಎಇಇ

* ಡಿ.ನಟರಾಜು

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.