ಮಡಹಳ್ಳಿ: ಅಧಿಕ ಭಾರಹೊತ್ತ ಟಿಪ್ಪರ್‌ಗಳ ಸಂಚಾರ


Team Udayavani, Dec 25, 2022, 5:02 PM IST

tdy-13

ಗುಂಡ್ಲುಪೇಟೆ: ಪಟ್ಟಣದ ಮಡಹಳ್ಳಿ ಮಾರ್ಗದ ಪೊಲೀಸ್‌ ಠಾಣೆ ಮುಂಭಾಗದ ರಸ್ತೆಯಲ್ಲಿ ಅಧಿಕ ಭಾರ ಹೊತ್ತ ಟಿಪ್ಪರ್‌ ಲಾರಿಗಳು ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ಮಾಡುತ್ತಿದೆ. ಇದರಿಂದ ರಸ್ತೆ ಸಂಪೂರ್ಣವಾಗಿ ಹಾಳಾಗಿದೆ. ಹೀಗಿದ್ದರೂ ಸಹ ಪೊಲೀಸರು ಕ್ರಮಕ್ಕೆ ಮುಂದಾಗದೆ ಜಾಣಮೌನ ವಹಿಸಿದ್ದಾರೆ.

ಮಡಹಳ್ಳಿ ರಸ್ತೆಯೂ ಉತ್ತಂಗೆರೆಹುಂಡಿ, ಹುಲಸ ಗುಂದಿ, ಮೂಖಹಳ್ಳಿ, ಬರಗಿ, ದೇಶಿಪುರ ಸೇರಿದಂತೆ ಇನ್ನಿತರ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸಿರುವ ಹಿನ್ನೆಲೆ ಪ್ರತಿನಿತ್ಯ ಈ ಮಾರ್ಗವಾಗಿ ಸಾವಿರಾರು ವಾಹನಗಳು ಸಂಚಾರ ಮಾಡುತ್ತಿವೆ. ಜೊತೆಗೆ ಕ್ರಷರ್‌ ಗಳು ಇರುವ ಕಾರಣ ಟಿಪ್ಪರ್‌ ಲಾರಿ ಅಧಿಕ ಭಾರಹೊತ್ತು ಜಲ್ಲಿಕಲ್ಲಿ ತುಂಬಿಕೊಂಡು ತೆರಳುತ್ತಿವೆ.

ಇನ್ನೂ ಮಧ್ಯೆ ಕೆಂಪು ಮಣ್ಣು ಲಾರಿಗಳ ಹಾವಳಿಯೂ ಕೂಡ ಹೆಚ್ಚಿದ್ದು, ನಿಗದಿಗಿಂತ ಅಧಿಕ ಭಾರ ತುಂಬಿಕೊಂಡು ಬರುವುದರಿಂದ ರಸ್ತೆ ಸಂಪೂರ್ಣ ಹಾಳಾಗಿದೆ. ಅನೇಕ ಕಡೆ ಬೃಹದಾಕಾರದ ಗುಂಡಿಗಳು ಬಿದ್ದು, ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ.

ರಸ್ತೆ ಮಾರ್ಗದಲ್ಲಿ ಹಲವು ಇಲಾಖೆ, ಶಾಲೆ ಹಾಗೂ ಕೋರ್ಟ್‌: ಮಡಹಳ್ಳಿ ರಸ್ತೆಯಲ್ಲಿ ಮಾರ್ಗವಾಗಿ ಕೋರ್ಟ್‌, ಜೆಎಸ್‌ಎಸ್‌ ಮಹಾ ವಿದ್ಯಾಲಯ, ಸಮಾಜ ಕಲ್ಯಾಣ ಇಲಾಖೆ ಕಚೇರಿ, ಬಿಸಿಎಂ ವಿದ್ಯಾರ್ಥಿನಿಲಯ, ಮಾನಸ ಶಾಲೆ ಸೇರಿದಂತೆ ಹಲವು ಸರ್ಕಾರಿ ಕಚೇರಿಗಳಿದ್ದರೂ ಸಹ ರಾಜಾ ರೋಷವಾಗಿ ಎಗ್ಗಿಲ್ಲದೆ ಟಿಪ್ಪರ್‌ ಲಾರಿಗಳು ಸಂಚಾರ ಮಾಡುತ್ತಿದೆ. ಇದರಿಂದ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಗೆ ಕಿರಿಕಿರಿ ಹೆಚ್ಚಿದೆ.

ಮಳೆ ಬಂದರೆ ಸಂಚಾರ ದುಸ್ತರ: ಮಡಹಳ್ಳಿ ರಸ್ತೆಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಅಲ್ಪ ಪ್ರಮಾಣದಲ್ಲಿ ಮಳೆ ಬಂದರೂ ಸಹ ಮಳೆ ನೀರು ಮಡಹಳ್ಳಿ ವೃತ್ತದಲ್ಲಿ ನಿಂತು ಕೆರೆಯಂತೆ ಮಾರ್ಪಾಡಾಗುತ್ತಿದೆ. ಸಮಸ್ಯೆ ಹಲವು ವರ್ಷ ಗಳಿಂದ ಇದ್ದರೂ ತಾಲೂಕು ಆಡಳಿತ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾತ್ರ ರಸ್ತೆ ದುರಸ್ತಿ ಪಡಿಸಿ ಶಾಶ್ವತ ಪರಿಹಾರ ನೀಡುವ ಗೋಜಿಗೆ ಹೋಗಿಲ್ಲ. ಇದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಶಾಸಕರೇ ಇತ್ತ ಗಮನಿಸಿ : ಹಲವು ವರ್ಷಗಳಿಂದಲೂ ರಸ್ತೆ ಕಿತ್ತುಹೋಗಿ ಗುಂಡಿಮಯವಾಗಿದೆ. ಟಿಪ್ಪರ್‌ ಲಾರಿಗಳ ಸಂಖ್ಯೆ ಅಧಿಕ ಸಂಖ್ಯೆಯಲ್ಲಿ ಹೆಚ್ಚಿನ ಭಾರ ಹೊತ್ತು ಸಂಚಾರ ಮಾಡುತ್ತಿವೆ. ಇದರ ಅರಿವಿದ್ದರೂ ಸಹ ಸ್ಥಳೀಯ ಶಾಸಕ ಸಿ.ಎಸ್‌.ನಿರಂಜನಕುಮಾರ್‌ ರಸ್ತೆ ದುರಸ್ತಿ ಪಡಿಸಲು ಆಶಕ್ತಿ ತೋರುತ್ತಿಲ್ಲ. ಜೊತೆಗೆ ಟಿಪ್ಪರ್‌ ಲಾರಿಗಳ ಸಂಚರಿಸುತ್ತಿದ್ದರೂ ಸಹ ಯಾವುದೇ ಕ್ರಮವಾಗಿಲ್ಲ. ಇನ್ನಾದರೂ ಸಹ ಎಚ್ಚೆತ್ತು ರಸ್ತೆ ದುರಸ್ತಿಗೊಳಿಸಿ ಟಿಪ್ಪರ್‌ ಸಂಚಾರಕ್ಕೆ ಕಡಿವಾಣ ಹಾಕಲು ಸ್ಥಳೀಯರು ಆಗ್ರಹಿಸಿದ್ದಾರೆ.

ಮಳೆ ಬಂದರೆ ಮಡಹಳ್ಳಿ ರಸ್ತೆಯಲ್ಲಿ ನೀರು ನಿಂತು ಕರೆಯಂತೆ ನಿರ್ಮಾಣವಾಗುತ್ತಿದೆ.  ಹಲವು ವರ್ಷಗಳಿಂದಲೂ ಸಮಸ್ಯೆ ಇದ್ದರೂ ಸಹ ಶಾಶ್ವತ ಪರಿಹಾರ ಸಿಕ್ಕಿಲ್ಲ. ಜೊತೆಗೆ ಈ ಮಾರ್ಗವಾಗಿ ಅಧಿಕ ಭಾರ ಹೊತ್ತ ಟಿಪ್ಪರ್‌ ಲಾರಿಗಳು ಸಂಚಾರ ಮಾಡುತ್ತಿರುವ ಹಿನ್ನೆಲೆ ರಸ್ತೆ ತುಂಬಾ ಗುಂಡಿಬಿದ್ದು, ಸಂಚಾರಕ್ಕೆ ತೊಂದರೆಯಾಗಿದೆ. ಸಂಬಂಧಪಟ್ಟವರು ಈ ಬಗ್ಗೆ ಕ್ರಮ ವಹಿಸಿ ಟಿಪ್ಪರ್‌ ಲಾರಿಗಳ ಸಂಚಾರಕ್ಕೆ ಕಡಿವಾಣ ಹಾಕಿ ರಸ್ತೆ ದುರಸ್ತಿಗೆ ಮುಂದಾಗಲಿ. – ರಾಜ್‌ಗೋಪಾಲ್‌, ಪುರಸಭೆ ಸದಸ್ಯ

ಮಡಹಳ್ಳಿ ರಸ್ತೆಯಲ್ಲಿ ಬಿದ್ದಿರುವ ಗುಂಡಿ ಮುಚ್ಚಲಿ ಟೆಂಡರ್‌ ಆಗಿದೆ. ಶೀಘ್ರವಾಗಿ ಕೆಲಸ ಆರಂಭಿಸಿ ಗುಂಡಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು.- ರಾಮಚಂದ್ರು, ಎಇಇ, ಪಿಡೂಬ್ಲ್ಯೂಡಿ ಇಲಾಖೆ  

-ಬಸವರಾಜು ಎಸ್‌.ಹಂಗಳ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.