WayanadLandslide; ಮನೆಯವರ ಪ್ರಾಣ ಕಾಪಾಡಿ ಪ್ರವಾಹದಲ್ಲಿ ಕೊಚ್ಚಿಹೋದ ಹಸು…!


Team Udayavani, Jul 30, 2024, 9:26 PM IST

Wayanad landslides

ಚಾಮರಾಜನಗರ: ಹಸುವೊಂದು ಅಂಬಾ ಎಂದು ಅರಚಿಕೊಂಡು ಮನೆಯಲ್ಲಿದ್ದವರನ್ನು ರಕ್ಷಿಸಿ ತಾನು ನೀರಿನಲ್ಲಿ ಕೊಚ್ಚಿಕೊಂಡು ಹೋದ ಹೃದಯ ವಿದ್ರಾವಕ ಘಟನೆ ಕೇರಳ ವಯನಾಡು ಜಿಲ್ಲೆ ಗುಡ್ಡ ಕುಸಿತ ಪ್ರಕರಣದಲ್ಲಿ ನಡೆದಿದ್ದು, ಅಲ್ಲಿ ಪಾರಾದವರು ಚಾಮರಾಜನಗರ ಪಟ್ಟಣದ ಉಪ್ಪಾರ ಬೀದಿಯವರ ಹತ್ತಿರದ ಸಂಬಂಧಿಗಳಾಗಿದ್ದಾರೆ.

ಚಾಮರಾಜನಗರ ಪಟ್ಟಣದ ಉಪ್ಪಾರ ಬೀದಿಯ ಲಕ್ಷ್ಮಮ್ಮ ಅವರು ವಯನಾಡು ಜಿಲ್ಲೆಯ ಮೇಪ್ಪಾಡಿಯ ಕೃಷ್ಣಾ ಎಂಬುವವರನ್ನು ಮದುವೆಯಾಗಿದ್ದಾರೆ. ಲಕ್ಷ್ಮಮ್ಮ ಅವರ ಮಗಳು ಪ್ರವೀದಾ ಅವರು ಮೇಪ್ಪಾಡಿಯಿಂದ 4 ಕಿ.ಮೀ. ದೂರದ  ಚೂರಲ್‌ಮಲಾದ ವಿನೋದ್ ಅವರನ್ನು ವಿವಾಹವಾಗಿದ್ದಾರೆ.

ಹೆರಿಗೆಗೆಂದು ಮೆಪ್ಪಾಡಿಯಲ್ಲಿನ ತಾಯಿ ಮನೆಗೆ ಪ್ರವೀದಾ ಬಂದಿದ್ದರು. ಪ್ರವೀದಾ ಪತಿ ವಿನೋದ್ ಚೂರಲ್‌ಮಲಾದಲ್ಲೇ ಇದ್ದರು. ಸೋಮವಾರ ಮಧ್ಯರಾತ್ರಿ ವಿನೋದ್ ಅವರ ಕೊಟ್ಟಿಗೆಯಲ್ಲಿದ್ದ ಹಸು ಒಂದೇ ಸಮನೆ ಅರಚಿಕೊಂಡಿದೆ. ಆಗ ನಿದ್ದೆಯಿಂದ ಎಚ್ಚರಗೊಂಡ ವಿನೋದ್ ಕೊಟ್ಟಿಗೆಗೆ ಹೋಗಿ ನೋಡಿದ್ದಾರೆ. ಕೊಟ್ಟಿಗೆಗೆ ನೀರು ತುಂಬಿಕೊಳ್ಳುತ್ತಿರುವುದನ್ನು ನೋಡಿದ ವಿನೋದ್ ತಕ್ಷಣ ತಮ್ಮ ಕುಟುಂಬದವರನ್ನು ಎತ್ತರದ ಗುಡ್ಡ ಕ್ಕೆ ಕರೆದೊಯ್ದು ಅಪಾಯದಿಂದ ಪಾರಾಗಿದ್ಧಾರೆ. ಈ ಸಂದರ್ಭದಲ್ಲಿ ಹಸು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

ಚೂರಲ್‌ಮಲಾದಿಂದ ನಾಲ್ಕು ಕಿ.ಮೀ. ದೂರದ ಮೆಪ್ಪಾಡಿಯಲ್ಲಿದ್ದ ಪ್ರವೀದಾ ಈ ಘಟನೆಯ ಬಳಿಕ ತನ್ನ ತಂದೆ ತಾಯಿಯೊಡನೆ ತಾಯಿಯ ಊರಾದ ಚಾಮರಾಜನಗರಕ್ಕೆ ಮರಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವೀದಾ, ಗುಡ್ಡದಲ್ಲಿ ಸಿಲುಕಿರುವ ತಮ್ಮ ಪತಿಯನ್ನು ರಕ್ಷಿಸಿ ಕರೆತರಬೇಕು ಎಂದು ಮನವಿ ಮಾಡಿದರು. ವಿನೋದ್ ತಮ್ಮ ಜೊತೆ ಫೋನ್ ಸಂಪರ್ಕದಲ್ಲಿದ್ದಾರೆ. ಆ ಗುಡ್ಡದಲ್ಲಿ ವಿನೋದ್ ಅವರ ಜೊತೆ ಇನ್ನೂ ಹಲವಾರು ಜನರಿದ್ದಾರೆಂದು ತಿಳಿಸಿದ್ದಾರೆ. ಗುಡ್ಡ ಕುಸಿತವಾದ ಚೂರಲ್‌ಮಲಾದಲ್ಲಿ ಸಾವಿರಾರು ಜನ ವಾಸವಿದ್ದರು ಎಂದು ಪ್ರವೀದಾ ತಿಳಿಸಿದರು.

ಇದನ್ನೂ ಓದಿ:Wayanad landslides; ಪ್ರಕೃತಿಯ ಮುನಿಸಿಗೆ ಒಂದು ಪಟ್ಟಣವೇ ಕೊಚ್ಚಿ ಹೋಗಿದೆ…

ದಂಪತಿಗಳಿಬ್ಬರ ರಕ್ಷಣೆ- ಇನ್ನೊಂದು ಜೋಡಿ ಕಾಣೆ

ಚೂರಲ್‌ಮಲಾದಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ನಗರ ಮೂಲದ ದಂಪತಿಯನ್ನು ರಕ್ಷಿಸಲಾಗಿದ್ದು, ತಾಲೂಕಿನ ಇರಸವಾಡಿ ಗ್ರಾಮದ ದಂಪತಿ ಕಾಣೆಯಾಗಿದ್ದಾರೆ.

ನಗರದ ಉಪ್ಪಾರ ಬೀದಿಯ ನಿವಾಸಿಗಳಾಗಿದ್ದು, ಚೂರಲ್‌ಮಲಾದಲ್ಲಿ ಉದ್ಯೋಗಕ್ಕೆಂದು ವಲಸೆ ಹೋಗಿದ್ದ ಮಹದೇವಸ್ವಾಮಿ ಮತ್ತು ಸುಜಾತಾ ದಂಪತಿಯನ್ನು ಎನ್‌ಡಿಆರ್‌ಎಫ್ ತಂಡ ರಕ್ಷಿಸಿದೆ. ಇಬ್ಬರನ್ನೂ ಮೇಪ್ಪಾಡಿಯ ಶಾಲೆಯಲ್ಲಿ ತೆರೆಯಲಾಗಿರುವ ಶಿಬಿರಕ್ಕೆ ಕಳುಹಿಸಲಾಗಿದೆ. ಈ ವಿಷಯನ್ನು ಮಹದೇವಸ್ವಾಮಿ ಬಂಧುಗಳು ತಿಳಿಸಿದ್ದಾರೆ.

ಇಬ್ಬರು ದಂಪತಿ ಕಾಣೆ

ಘಟನೆಯಲ್ಲಿ ತಾಲೂಕಿನ ಇರಸವಾಡಿ ಮೂಲದ, ವಯನಾಡು ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ವಾಸವಿದ್ದ ರಾಜೇಂದ್ರ (55) ಹಾಗೂ ರತ್ನಮ್ಮ (45) ಕಾಣೆಯಾಗಿದ್ದಾರೆಂದು ತಿಳಿದುಬಂದಿದೆ. ಈ ದಂಪತಿ ಕೆಲವು ವರ್ಷಗಳ ಹಿಂದೆ ನಾಗವಳ್ಳಿಯಲ್ಲಿ ಪೆಟ್ಟಿಗೆ ಅಂಗಡಿ ಇಟ್ಟುಕೊಂಡಿದ್ದರು. ಕೆಲಸಕ್ಕಾಗಿ ಕೇರಳಕ್ಕೆ ವಲಸೆ ಹೋಗಿದ್ದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.