10 ಟೇಬಲ್‌, 26 ಸುತ್ತುಗಳಲ್ಲಿ ಮತ ಎಣಿಕೆ


Team Udayavani, Dec 8, 2019, 3:00 AM IST

10table

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ನಗರದ ಬಿಬಿ ರಸ್ತೆಯಲ್ಲಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಡಿ.9 ರಂದು ನಡೆಯಲಿದ್ದು, 10 ಟೇಬಲ್‌ಗ‌ಳಲ್ಲಿ ಒಟ್ಟು 26 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಮತ ಎಣಿಕೆ ಕಾರ್ಯದ ಪೂರ್ವ ಸಿದ್ಧತೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮತ ಎಣಿಕೆ ಕೇಂದ್ರಕ್ಕೆ ಅವಶ್ಯ ಮೂಲ ಸೌಕರ್ಯಗಳಾದ ಕುಡಿಯುವ ನೀರು ಮತ್ತಿತರ ಸೌಲಭ್ಯಗಳನ್ನು ಕಲ್ಪಿಸುವಂತೆ ನಗರಸಭೆ ಆಯುಕ್ತರಿಗೆ ಡೀಸಿ ಸೂಚಿಸಿದರು.

ಮತ ಎಣಿಕೆ ಕಟ್ಟುನಿಟ್ಟಾಗಿ ನಡೆಸಿ: ಮತ ಎಣಿಕೆಯ ದಿನ ಅಹಿತಕರ ಘಟನೆಗಳು ನಡೆಯದಂತೆ ಸುಸ್ಥಿರ ವಾತಾವರಣ ಕಾಪಾಡಲು ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಗೊಂದಲಗಳಿಗೆ ಅವಕಾಶ ಇಲ್ಲದಂತೆ ಎಣಿಕೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮತ ಎಣಿಕೆಗಾಗಿ ನಿಯೋಜಿಸಲಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು. ಕ್ಷೇತ್ರ ವ್ಯಾಪ್ತಿಯಲ್ಲಿ ಸೆಕ್ಷನ್‌ 144 ರಂತೆ ನಿಷೇಧಾಜ್ಞೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು.

ಮತ ಎಣಿಕೆ ಮೇಲ್ವಿಚಾರಕರು, ಮತ ಎಣಿಕೆ ಸಹಾಯಕ ಅಧಿಕಾರಿಗಳು ಹಾಗೂ ಮೈಕ್ರೋ ವೀಕ್ಷಕರನ್ನು ಈಗಾಗಲೇ ಮತ ಎಣಿಕೆ ಕಾರ್ಯಕ್ಕೆ ನೇಮಕ ಮಾಡಲಾಗಿದ್ದು, ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಂದು ಬೆಳಗ್ಗೆ 6 ಗಂಟೆಯೊಳಗೆ ಮತ ಎಣಿಕೆ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ಚುನಾವಣೆಗೆ ನಿಯೋಜಿಸಿದ ಎಲ್ಲರಿಗೂ ಬೆಳಗ್ಗೆ ಉಪಾಹಾರ ಮತ್ತು ಊಟದ ವ್ಯವಸ್ಥೆ ಏರ್ಪಡಿಸಲಾಗಿದೆ ಎಂದರು.

ಗುರುಚಿನ ಚೀಟಿ ಕಡ್ಡಾಯ: ಮತ ಎಣಿಕೆಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಕೇಂದ್ರದಲ್ಲಿ ಮಾಡಲಾಗಿದೆ. ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಕೇಂದ್ರದೊಳಗೆ ಕಡ್ಡಾಯವಾಗಿ ಚುನಾವಣಾ ಆಯೋಗ ನೀಡಿರುವ ಗುರುತಿನ ಪತ್ರ ಇದ್ದವರಿಗೆ ಮಾತ್ರ ಒಳಗೆ ಪ್ರವೇಶವಿರುತ್ತದೆ.

ಮತ ಎಣಿಕೆಗೆ ಅವಶ್ಯವಿರುವ ಸಾಮಗ್ರಿಗಳನ್ನು ವಿತರಿಸುವ ಬಗ್ಗೆ ಮೇಲ್ವಿಚಾರಕರು ಎಚ್ಚರದಿಂದ ನೋಡಿಕೊಳ್ಳಬೇಕು. ಮತ ಎಣಿಕೆ ಕೇಂದ್ರಕ್ಕೆ ಅಧಿಕಾರಿಗಳು, ಸಿಬ್ಬಂದಿಗಳ ಮತ್ತು ಅಭ್ಯರ್ಥಿಗಳು ಎಣಿಕೆ ಮೇಲ್ವಿಚಾರಕರು ಮೊಬೈಲ್‌ ಫೋನ್‌ಗಳ ಬಳಕೆ ಹಾಗೂ ತರುವುದನ್ನು ನಿಷೇಧಿಸಲಾಗಿದೆ ಎಂದರು.

ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ ಕಾರ್ಯನಿರ್ವಹಿಸುವ ಮೂಲಕ ಮತ ಎಣಿಕೆ ಕಾರ್ಯವನ್ನು ಯಶಸ್ವಿಗೊಳಿಸಬೇಕು. ಕೇಂದ್ರದ ಸುತ್ತಮುತ್ತ ಸ್ವತ್ಛತೆ ಕಾಪಾಡಬೇಕು. ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ನಗರಸಭೆ ಆಯುಕ್ತರಿಗೆ ಜಿಲ್ಲಾಧಿಕಾರಿ ಆರ್‌.ಲತಾ ಸೂಚಿಸಿದರು.

ಪೂರ್ವ ಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರತಿ, ಉಪವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಎ.ಎನ್‌. ರಘುನಂದನ್‌, ಚಿಕ್ಕಬಳ್ಳಾಪುರ ಉಪ ವಿಭಾಗದ ಡಿವೈಎಸ್‌ಪಿ ರವಿಶಂಕರ್‌, ಜಿಪಂ ಉಪ ಕಾರ್ಯದರ್ಶಿ ನೋಮೇಶ್‌ಕುಮಾರ್‌, ಸಹಾಯಕ ಚುನಾವಣಾ ಅಧಿಕಾರಿಗಳಾದ ಕೆ.ನರಸಿಂಹಮೂರ್ತಿ, ಶ್ರೀನಿವಾಸ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮತ ಎಣಿಕೆ ಮೇಲ್ವಿಚಾರಕರಿಗೆ ತರಬೇತಿ: ಮತ ಎಣಿಕೆ ಕಾರ್ಯದಲ್ಲಿ ಭಾಗವಹಿಸಲಿರುವ ಮೇಲ್ವಿಚಾರಕರು ಸಹಾಯಕ ಹಾಗೂ ಸೂಕ್ಷ್ಮ ವೀಕ್ಷಕರಿಗೆ ಶನಿವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮತ ಎಣಿಕೆ ಬಗ್ಗೆ ಸಮಗ್ರ ತರಬೇತಿಯನ್ನು ರಾಜ್ಯ ಮಟ್ಟದ ಮಾಸ್ಟರ್‌ ತರಬೇತುದಾರರಾದ ಶಂಕರ ರೆಡ್ಡಿ ಸಿ.ಎನ್‌. ಸಮಗ್ರ ತರಬೇತಿ ನೀಡಿದರು.

ಇವಿಎಂ ಹಾಗೂ ವಿವಿಪ್ಯಾಟ್‌ಗಳನ್ನು ತೆರೆಯುವುದರಿಂದ ಹಿಡಿದು ಚಲಾವಣೆಗೊಂಡಿರುವ ಮತಗಳನ್ನು ಸವಿವರವಾಗಿ ಪಡೆಯುವ ಬಗ್ಗೆ ತರಬೇತುದಾರರು, ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನವನ್ನು ಪ್ರಾತ್ಯಕ್ಷಿಕೆ ಮೂಲಕ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್‌.ಲತಾ, ಚುನಾವಣಾಧಿಕಾರಿ ರಘುನಂದನ್‌, ಜಿಲ್ಲಾ ಉದ್ಯೋಗಾಧಿಕಾರಿ ಪ್ರಸಾದ್‌, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಅಶೋಕ್‌ ಉಪಸ್ಥಿತರಿದ್ದರು.

ಚಿಕ್ಕಬಳ್ಳಾಪುರ ಬಿಬಿ ರಸ್ತೆಯಲ್ಲಿರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಸೋಮವಾರ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭಗೊಳ್ಳಲಿದ್ದು, 10 ಟೇಬಲ್‌ಗ‌ಳಲ್ಲಿ 26 ಸುತ್ತುಗಳಲ್ಲಿ ಎಣಿಕೆ ಕಾರ್ಯ ನಡೆಯಲಿದೆ. ಪಾರದರ್ಶಕವಾಗಿ ಮತ ಎಣಿಕೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
-ಆರ್‌.ಲತಾ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.