ಪ್ರತಿ ತಾಲೂಕಿಗೆ 100 ಕೋಟಿ ರೂ. ಸಾಲ
Team Udayavani, Dec 31, 2021, 7:22 PM IST
ಬೇತಮಂಗಲ: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರತಿ ತಾಲೂಕಿಗೆ 100 ಕೋಟಿ ರೂ. ಸಾಲ ನೀಡುವ ಗುರಿ ಹೊಂದಿರುವುದಾಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು.
ಗ್ರಾಮದ ಸಮೀಪದ ಸುಂದರಪಾಳ್ಯ ಗ್ರಾಮದಲ್ಲಿ ರಾಮಸಾಗರ, ವೆಂಗಸಂದ್ರ, ಎನ್.ಜಿ.ಹುಲ್ಕೂರು ಗ್ರಾಪಂ ವ್ಯಾಪ್ತಿಯ ರೈತರೊಂದಿಗೆ ಡಿಸಿಸಿ ಬ್ಯಾಂಕ್ನಿಂದ ಸಾಲ ವಿತರಣೆ ಸಭೆ ನಡೆಸಿ ಮಾತನಾಡಿದ ಅವರು, ಸಮಾಜದ ಕಟ್ಟ-ಕಡೆಯ ರೈತನಿಗೂ ಡಿಸಿಸಿ ಬ್ಯಾಂಕ್ನಿಂದ ಸಾಲ ಸೌಲಭ್ಯ ಒದಗಿಸುವ ಮೂಲಕ ಆರ್ಥಿಕವಾಗಿ ರೈತರಿಗೆ ಬಲ ತುಂಬುವ ಕಾರ್ಯ ಮಾಡಲಾಗುವುದು, ರೈತ ಉಳಿದರೆ ಒಂದು ದೇಶವೇ ಉಳಿದಂತೆ ಎಂದು ನುಡಿದರು.
ಸುಂದರಪಾಳ್ಯ ಸೊಸೈಟಿಯಿಂದ ಈಗಾಗಲೇ 3 ಕೋಟಿ ರೈತರ ಸಾಲ ಮನ್ನಾ ಆಗಿದೆ, ಸಾಲದ ಅಗತ್ಯ ಇರುವ ಪ್ರತಿಯೊಬ್ಬರಿಗೂ ಯಾವುದೇ ಲಂಚ ಇಲ್ಲದೆ, ಸಾಲವನ್ನು ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು. ಹೈನುಗಾರಿಕೆಗೆ 10 ಲಕ್ಷ ರೂ.: 5 ಎಕರೆ ಜಮೀನು ಹೊಂದಿರುವ ರೈತರು ಕುರಿ, ಕೋಳಿ, ಮೇಕೆ, ಹಂದಿ ಸಾಕಾಣಿಕೆಗೆ 10 ಲಕ್ಷ ರೂ. ಸಾಲ ನೀಡಲಾಗುವುದು, ಕಡಿಮೆ ಜಮೀನು ಇರುವ ರೈತರಿಗೂ ಬೆಳೆ ಸಾಲ ನೀಡುವುದಾಗಿ ತಿಳಿಸಿದರು.
ಸೊಸೈಟಿ ಸಿಬ್ಬಂದಿ ವಿರುದ್ಧ ಗರಂ: ರೈತರ ಜಮೀನು ಮಾಡ್ಗೆàಜ್ ಮಾಡಿಕೊಂಡು ವರ್ಷ ಕಳೆದರೂ ಸಾಲ ನೀಡದಿರುವ ಬಗ್ಗೆ ಏಕೆ ತಮ್ಮ ಗಮನಕ್ಕೆ ತಂದಿಲ್ಲ ಎಂದು ಸೊಸೈಟಿ ಸಿಬ್ಬಂದಿ ಹಾಗೂ ಸ್ಥಳೀಯ ಮುಖಂಡರ ವಿರುದ್ಧ ಗರಂ ಅದರು. ಸಾಲ ಸಮಯಕ್ಕೆ ಪಾವತಿ ಮಾಡದವರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.
ಸಾಲ ಸದ್ಬಳಕೆ ಮಾಡಿಕೊಳ್ಳಿ: ಡಿಸಿಸಿ ಬ್ಯಾಂಕ್ನಿಂದ ಪಡೆದುಕೊಂಡಿರುವ ಮಹಿಳಾ ಸಂಘಗಳ ಸದಸ್ಯರು ಹಾಗೂ ರೈತರು ಸರಿಯಾದ ಸಮಯಕ್ಕೆ ಸಾಲ ಪಾವತಿ ಮಾಡುವ ಮೂಲಕ ಪುನಃ ಹೆಚ್ಚು ಸಾಲವನ್ನು ಪಡೆದುಕೊಳ್ಳಬೇಕೆಂದು ಶಾಸಕಿ ಡಾ. ಎಂ.ರೂಪಕಲಾ ಸಲಹೆ ನೀಡಿದರು. ಸೊಸೈಟಿಗಳಿಗೆ ಶಕ್ತಿ ತುಂಬಿದ: ಸುಂದರಪಾಳ್ಯ ಸೊಸೈಟಿ ಅಧ್ಯಕ್ಷ ಮುನಿಸ್ವಾಮಿ ಮಾತನಾಡಿ, ಸೊಸೈಟಿಗಳಿಂದ ಕೇವಲ ಅಕ್ಕಿ ನೀಡಲಾಗುತ್ತಿತ್ತು, ಬ್ಯಾಲಹಳ್ಳಿ ಗೋವಿಂದಗೌಡ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಮೇಲೆ ರೈತರು, ಮಹಿಳೆಯರಿಗೆ ಸಾಲ ನೀಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…
Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ
Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್ ಪರದಾಟ!
Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ
Government Order: ಪೊಲೀಸರಿಗೆ ಅರ್ಧ ಕೋಟಿ ರೂ. ಜೀವವಿಮೆ! ವಿಮಾ ಮೊತ್ತ ಇಲಾಖೆಯಿಂದಲೇ ಪಾವತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.