ಜಿಲ್ಲೆಯ 900 ಗ್ರಾಮಗಳಿಗಿಲ್ಲ ಶುದ್ಧ ನೀರು


Team Udayavani, Aug 10, 2023, 3:56 PM IST

tdy-15

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕುಡಿಯುವ ನೀರಿನಲ್ಲಿ ಅಪಾಯಕಾರಿ ಲವಣಾಂಶ ಗಳು ಕಂಡು ಬರುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಆದರೆ, ಜಿಲ್ಲೆಯಲ್ಲಿನ ಅರ್ಧದಷ್ಟು ಗ್ರಾಮಗಳಿಗೆ ಇಂದಿಗೂ ಕೂಡ ಶುದ್ಧ ಕುಡಿಯುವ ನೀರಿನ ಖಾತ್ರಿ ಇಲ್ಲದೇ ಜನ ಪತಾಳಕ್ಕೆ ಕುಸಿದಿರುವ ಅಂತರ್ಜಲ ದಿಂದ ಬರುವ ಅಪಾಯಕಾರಿ ಜೀವ ನೀರು ಬಳಸುವ ದುಸ್ಥಿತಿ ಎದುರಾಗಿದೆ.

ಹೌದು… ಜಿಲ್ಲೆಯಲ್ಲಿ 1800 ಕ್ಕೂ ಹೆಚ್ಚು ಗ್ರಾಮಗಳಿದ್ದರೂ ಇಲ್ಲಿವರೆಗೂ ಸರ್ಕಾರ ಕೇವಲ ಅರ್ಧದಷ್ಟು ಗ್ರಾಮಗಳಿಗೆ ಮಾತ್ರ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪಿಸಿದ್ದು, ಉಳಿದಂತೆ ಸುಮಾರು 900 ಕ್ಕೂ ಹೆಚ್ಚು ಗ್ರಾಮಗಳಿಗೆ ಶುದ್ದ ಕುಡಿಯುವ ನೀರಿನ ಘಟಕಗಳ ಸ್ಥಾಪನೆ ಕಾರ್ಯ ನನೆಗುದಿಗೆ ಬಿದ್ದಿವೆ.

ಜಿಲ್ಲೆಗೆ ಅನ್ಯಾಯ:  ಹೇಳಿ ಕೇಳಿ ಬಯಲು ಸೀಮೆ ಜಿಲ್ಲೆಗಳ ವ್ಯಾಪ್ತಿಗೆ ಬರುವ ಚಿಕ್ಕಬಳ್ಳಾಪುರ ಜಿಲ್ಲೆಯು ದಶಕಗಳ ಮಳೆ, ಬೆಳೆ ಕೊರತೆಯಿಂದ ಹನಿ ಹನಿ ನೀರಿಗೂ ಪರದಾಟ ನಡೆಸಿದ್ದು, ಇಂದಿಗೂ ಶಾಶ್ವತ ನೀರಾವರಿ ಇಲ್ಲದೇ ಕುಡಿ ಯುವ ನೀರಿಗೆ ಅಂತರ್ಜಲವನ್ನೆ ಅಶ್ರಯಿಸಿಕೊಂಡಿವೆ. ಬರಗಾಲ ಬಂತು ಅಂದರೆ ಅಂತರ್ಜಲ ಇನ್ನಷ್ಟು ಕ್ಷೀಣಿಸುವ ಪರಿಸ್ಥಿತಿಗೆ ಹೋಗುತ್ತದೆ. ಆದರೆ ಜಿಲ್ಲೆಯಲ್ಲಿ ಮಾತ್ರ ಜನರಿಗೆ ದಶಕಗಳಿಂದಲೂ ಕುಡಿಯುವ ನೀರು ಶುದ್ಧೀಕರಣ ವಿಚಾರದಲ್ಲಿ ಆನ್ಯಾಯವಾಗುತ್ತಲೇ ಇದ್ದು, ಜನ ಅನಿರ್ವಾಯವಾಗಿ ಸ್ಥಳೀಯವಾಗಿ ಗ್ರಾಪಂಗಳು ನೀಡುವ ಕೊಳವೆ ಬಾವಿ ನೀರನ್ನೆ ಕುಡಿಯಲು ಬಳಸುವಂತಾಗಿದೆ.

ಜಿಲ್ಲೆಯನ್ನು ದಶಕಗಳ ಕಾಲ ಕಾಡಿದ ಬರದಿಂದ ಜಿಲ್ಲೆಯಲ್ಲಿ ಅಧಿಕ ಪ್ರಮಾಣದಲ್ಲಿ ಕೊರೆಸಿದ ಕೊಳವೆ ಬಾವಿಗಳಿಂದಾಗಿ ಜಿಲ್ಲೆಯ ಅಂತರ್ಜಲ ಪತಾಳಕ್ಕೆ ಕುಸಿದಿದ್ದು, ಇದರಿಂದಾಗಿ ಜಿಲ್ಲೆಯ ಕುಡಿಯುವ ನೀರಿನಲ್ಲಿ ಜನರ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುವ ಪ್ಲೋರೈಡ್‌ ಜತೆಗೆ ಇತ್ತೀಚೆಗೆ ಇತ್ತೀಚೆಗೆ ಭಾರತೀಯ ವಿಜ್ಞಾನ ಸಂಸ್ಥೆ ನಡೆಸಿದ ಅಧ್ಯಯನ ವರದಿಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಬಳಸುವ ಅಂತರ್ಜದಲ್ಲಿ ಅಪಾಯಕಾರಿ ಯೋರೇನಿಯಂ ಅತ್ಯಧಿಕ ಪ್ರಮಾಣದಲ್ಲಿ ಇರುವುದನ್ನು ದೃಢಪಡಿಸಿದೆ.

920 ಶುದ್ಧ ನೀರಿನ ಘಟಕಗಳು:  ಜಿಲ್ಲೆಯಲ್ಲಿ ಒಟ್ಟು 920 ಶುದ್ದ ಕುಡಿಯುವ ನೀರಿನ ಘಟಕಗಳು ಇದ್ದು ಆವುಗಳ ಪೈಕಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಇಲಾಖೆ ವ್ಯಾಪ್ತಿಯಲ್ಲಿಯೆ ಬರೋಬರಿ 758 ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಉಳಿದಂತೆ 162 ಘಟಕಗಳು ಕೋಚಿಮುಲ್‌, ಟಿಎಪಿಸಿಎಂಎಸ್‌, ವಿವಿಎಸ್‌ಎನ್‌ ಸೇರಿದಂತೆ ಹಲವು ಸಹಕಾರಿ ಸಂಘ ಸಂಸ್ಥೆಗಳು ಮುಂದೆ ಬಂದು ಶುದ್ಧ ನೀರಿನ ಘಟಕಗಳು ಸ್ಥಾಪಿಸಿವೆ. ಆದರೆ ಬಹುತೇಕ ಶುದ್ಧ ನೀರಿನ ಘಟಕಗಳು ಸೂಕ್ತ ನಿರ್ವಹಣೆ ಇಲ್ಲದೇ ಸೊರಗುವಂತಾಗಿವೆ. ಕೆಲವೊಂದು ದುರಸ್ತಿಗೆ ಬಂದು ತಿಂಗಳಗಳೇ ಕಳೆದರೂ ನಿರ್ವಹಣೆ ಹೊಣೆ ಹೊತ್ತ ಸಂಸ್ಥೆಗಳು ಕಾಳಜಿವಹಿಸಿ ರಿಪೇರಿ ಮಾಡಿಸುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ. ಗ್ರಾಪಂಗಳಿಗೂ ಈ ಬಗ್ಗೆ ಸರ್ಕಾರದಿಂದ ಸೂಕ್ತ ನಿರ್ದೇಶನ ಇಲ್ಲದ ಕಾರಣ ಗ್ರಾಪಂಗಳ ಅಧಿಕಾರಿಗಳು ಕೂಡ ಶುದ್ಧ ನೀರಿನ ಘಟಕಗಳಿಗೆ ನೀರು ಸರಬರಾಜು ಮಾಡುವುದು ಬಿಟ್ಟರೆ ರಿಪೇರಿ ಬಂದಾಗ ಅವುಗಳ ಕಡೆ ತಲೆ ಹಾಕುತ್ತಿಲ್ಲ. ಹೀಗಾಗಿ  ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನಲ್ಲಿ ಪ್ಲೋರೈಡ್‌ ಮತ್ತಿತರ ಅಪಾಯಕಾರಿ ಅಂಶಗಳು ಇರುವ ಕಡೆ ಸ್ಥಾಪಿಸಿರುವ ಶುದ್ಧ ನೀರಿನ ಘಟಕಗಳು ಕೂಡ ಕೇವಲ ಹೆಸರಿಗಷ್ಟೇ ಇದ್ದು, ಜನ ಅನಿವಾರ್ಯಯವಾಗಿ ಸ್ಥಳೀಯವಾಗಿ ಸಿಗುವ ಜೀವ ಜಲವನ್ನೇ ಬಳಕೆ ಮಾಡುವ ಮೂಲಕ ಗೊತ್ತಿಲ್ಲದೇ ರೋಗ ರುಜನಗಳಿಗೆ ತುತ್ತಾಗುತ್ತಿದ್ದಾರೆ.

ಜಲ ಜೀವನ್‌ ಕಾಮಗಾರಿಗೆ ಗುತ್ತಿಗೆದಾರರ ನಿರಾಸಕ್ತಿ! :

ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮನೆ ಮನೆಗೆ ನಳದ ಮೂಲಕ ಶುದ್ಧ ನೀರು ಪೂರೈಸುವ ಜಲ ಜೀವನ್‌ ಮಿಷನ್‌ ಯೋಜನೆ ಅನುಷ್ಠಾನಕ್ಕೆ ಗುತ್ತಿಗೆದಾರರರು ನಿರಾಸಕ್ತಿ ವಹಿಸಿದ್ದಾರೆ. ಜಲ ಜೀವನ್‌ ಮಿಷನ್‌ ಯೋಜನೆಯಡಿ ಸುಮಾರು 1500 ಕ್ಕಿಂತ ಹೆಚ್ಚು ಗ್ರಾಮಗಳಲ್ಲಿ ಯೋಜನೆ ಅನುಷ್ಠಾನಗೊಳ್ಳಬೇಕಿದ್ದು, ಕೇವಲ ಇಲ್ಲಿವರೆಗೂ 700 ಗ್ರಾಮಗಳಲ್ಲಿ ಮಾತ್ರ ಯೋಜನೆ ಅನುಷ್ಠಾನಗೊಂಡಿದೆ. ಇನ್ನೂ ಸುಮಾರು 750 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಟೆಂಡರ್‌ ಕರೆದರೂ ಟೆಂಡರ್‌ನಲ್ಲಿನ ಭಾಗವಹಿಸುವಿಕೆಗೆ ಜಿಲ್ಲೆಯ ಗುತ್ತಿಗೆದಾರರ ಹಿಂದೇಟು ಹಾಕುತ್ತಿರುವುದು ಜಲ ಜೀವನ್‌ ಮಿಷನ್‌ ಯೋಜನೆ ಅನುಷ್ಠಾನಕ್ಕೆ ದೊಡ್ಡ ಸವಾಲಾಗಿದೆ. ಇದನ್ನು ಅರಿತು ಜಿಲ್ಲೆಯ ಉಸ್ತುವಾರಿ ಸಚಿವರಾದ ಡಾ.ಎಂ.ಸಿ.ಸುಧಾಕರ್‌ ಜಿಲ್ಲೆಯ ಗುತ್ತಿಗೆದಾರರೊಂದಿಗೆ ಮುಂದಿನ ವಾರದಲ್ಲಿ ಸಭೆ ಕರೆಯಲು ಮುಂದಾಗಿದ್ದಾರೆ.

ಅನೇಕ ರೋಗ ರುಜನಗಳಿಗೆ ಜನ ತುತ್ತು!:

ಜಿಲ್ಲೆಯಲ್ಲಿ ಕುಡಿಯುವ ನೀರಿನಲ್ಲಿ ಶುದ್ಧತೆಯ ಕೊರತೆಯಿಂದಾಗಿ ವಿಶೇಷವಾಗಿ ಗ್ರಾಮೀಣ ಜನರು ಸಾಕಷ್ಟು ರೋಗ ರುಜನಗಳಿಗೆ ತುತ್ತಾಗಿ ತಮಗೆ ಅರಿವು ಇಲ್ಲದಂತೆ ಅನೇಕ ಸಂಕಟಗಳಿಗೆ ತುತ್ತಾಗುವಂತಾಗಿದೆ. ವಿಶೇಷವಾಗಿ ಜಿಲ್ಲೆಯ ಬಾಗೇಪಲ್ಲಿ, ಗುಡಿಬಂಡೆ, ಚಿಂತಾಮಣಿ ತಾಲೂಕುಗಳಲ್ಲಿ ಪ್ಲೋರೈಡ್‌ ಪರಿಣಾಮ ಪ್ಲೋರೋಸಿಸ್‌ ಹಾಗೂ ಮಹಿಳೆಯರು ಗರ್ಭಕೋಶದತಂಹ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತ, ರಾಜ್ಯ ಸರ್ಕಾರ ಜಿಲ್ಲೆಯ ಪ್ರತಿ ಗ್ರಾಮಕ್ಕೂ ಶುದ್ದ ನೀರಿನ ಘಟಕಗಳನ್ನು ತೆರೆದು ಅವುಗಳನ್ನು ಸಮರ್ಪಕವಾಗಿ ನಿರ್ವಹಿಸುವ ಹೊಣೆ ಹೊರಬೇಕಿದೆ.

ಜಿಲ್ಲೆಯಲ್ಲಿ 1,847 ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕುಡಿಯುವ ನೀರಿನ ಶುದ್ಧೀಕರಣ ಘಟಕಗಳ ಅಗತ್ಯವಿದ್ದು, ಈ ಪೈಕಿ 920 ಘಟಕಗಳನ್ನು ಈಗಾಗಲೇ ಸ್ಥಾಪಿಸಲಾಗಿದ್ದು, ಇನ್ನುಳಿದ ಸುಮಾರು 924 ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕಗಳ ಸ್ಥಾಪಿಸಬೇಕಿದೆ. ಈಗಾಗಲೇ ಸ್ಥಾಪಿಸಲಾಗಿರುವ ಶುದ್ಧ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿ ಸುತ್ತಿಲ್ಲ . ಪದೇ ಪದೆ ದುರಸ್ತಿಗೆ ಬರುತ್ತಿವೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದ್ದು, ಈ ಬಗ್ಗೆ ಸಮಗ್ರ ಪರಿಶೀಲನೆ ನಡೆಯಬೇಕಿದೆ.-ಡಾ.ಎಂ.ಸಿ.ಸುಧಾಕರ್‌, ಜಿಲ್ಲಾ ಉಸ್ತುವಾರಿ ಸಚಿವರು.

ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಅಂರ್ತಜಲದಲ್ಲಿ ಅಪಾಯಕಾರಿ ರಾಸಾಯನಿಕ ಪತ್ತೆ ಆಗಿದೆ. ಈ ಬಗ್ಗೆ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳು ನಡೆಸಿದ ಅಧ್ಯಯನ ವರದಿ ಕೇಂದ್ರದ ಜಲಶಕ್ತಿ ಸಚಿವರ ಗಮನಕ್ಕೂ ಬಂದಿದೆ. ಸರ್ಕಾರ ಜಿಲ್ಲೆಗೆ ಶುದ್ಧ ಕುಡಿಯುವ ನೀರು ಕೊಡದೇ ಆನ್ಯಾಯವೆಸಗುತ್ತಿದೆ. ಜಿಲ್ಲೆಯ ಕೆರೆಗಳಿಗೆ ತುಂಬಿಸುತ್ತಿರುವ ಹೆಚ್‌ಎನ್‌ ವ್ಯಾಲಿ ನೀರನ್ನು ಕೂಡ ಮೂರನೇ ಹಂತದಲ್ಲಿ ಶುದ್ಧೀಕರಣ ಮಾಡಬೇಕು.-ಆರ್‌.ಆಂಜನೇಯರೆಡ್ಡಿ, ಜಿಲ್ಲಾಧ್ಯಕ್ಷರು, ಶಾಶ್ವತ ನೀರಾವರಿ ಹೋರಾಟ ಸಮಿತಿ.

-ಕಾಗತಿ ನಾಗರಾಜಪ್ಪ

 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.