ಕೀಳರಿಮೆ ಬಿಟ್ಟು ಉತ್ತಮ ಶೈಕ್ಷಣಿಕ ಸಾಧನೆ ಮಾಡಿ


Team Udayavani, Jun 7, 2022, 4:34 PM IST

ಕೀಳರಿಮೆ ಬಿಟ್ಟು ಉತ್ತಮ ಶೈಕ್ಷಣಿಕ ಸಾಧನೆ ಮಾಡಿ

ಚಿಂತಾಮಣಿ: ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ಎಲ್ಲಾ ರೀತಿಯ ಸೌಲಭ್ಯಗಳು ದೊರೆಯುತ್ತಿದ್ದು, ಕೀಳರಿಮೆ ಬಿಟ್ಟು ಸೌಲಭ್ಯವನ್ನು ಪಡೆದು ಸಾಧನೆ ಮಾಡಿ ಉತ್ತಮ ಫ‌ಲಿತಾಂಶವನ್ನು ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೈಕೋರ್ಟಿನ ಹಿರಿಯ ವಕೀಲ ಶ್ರೀರಾಮರೆಡ್ಡಿ ಸರ್ಕಾರಿ ಶಾಲೆಯ ಮಕ್ಕಳಿಗೆ ತಿಳಿ ಹೇಳಿದರು.

ಚಿಂತಾಮಣಿ ತಾಲೂಕು ಚಿಲಕಲನೇಪುì ಹೊಬಳಿ ನಂದನ ಹೊಸಹಳ್ಳಿ, ಅಮಿಟಹಳ್ಳಿ, ರಂಗೇನಹಳ್ಳಿ, ಕಸಬಾ ಹೊಬಳಿ ಗೋಪಸಂದ್ರ, ದೊಡ್ಡಗಂಜೂರು ಹಾಗೂ ಬಿಟ್ಟಗಾನಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಹೈಕೊರ್ಟನ ಖ್ಯಾತ ವಕೀಲ ಶ್ರೀ ರಾಮರೆಡ್ಡಿ ಪರಿವಾರದಿಂದ ಉಚಿತ ವಾಗಿ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು.

ಬಳಿಕ ಮಾತನಾಡಿದ ಅವರು, ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ಸಂದರ್ಭದಲ್ಲಿ ತಾನೂ ಹಲವಾರು ರೀತಿಯ ಕಷ್ಟಗಳನ್ನು ಎದುರಿಸಿ, ಗುಣಮಟ್ಟದ ಶಿಕ್ಷಣವನ್ನು ಪಡೆದು, ಇಂದು ಉತ್ತಮ ಸ್ಥಾನದಲ್ಲಿದ್ದೇನೆ. ಸರ್ಕಾರಿ ಶಾಲೆ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ತೊಂದರೆಯಾಗಬಾರದು ಎಂಬ ಉದ್ದೇಶದಿಂದ 17 ವರ್ಷದಿಂದ ಲೇಖನ ಸಾಮಗ್ರಿ ವಿತರಿಸುತ್ತಾ ಬಂದಿರುವುದಾಗಿ ತಿಳಿಸಿದರು.

ರೋಟರಿ ಬೆಂಗಳೂರು ಅಲಸೂರು ಸಂಸ್ಥೆ ಸಂತೋಷ್‌ ಮಾತನಾಡಿ, ತಮ್ಮ ಸಂಸ್ಥೆುಂದ ಸರಕಾರಿ ಶಾಲೆಗಳಲ್ಲಿನ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಲವಾರು ರೀತಿಯ ಸೌಲಭ್ಯಗಳನ್ನು ಒದಿಗಿಸುತ್ತಿದ್ದು, ವಿದ್ಯಾರ್ಥಿಗಳು ಈ ಎಲ್ಲಾ ಸೌಲಭ್ಯಗಳನ್ನು ಪಡೆದು ಉತ್ತಮ ಗುಮಟ್ಟ ಶಿಕ್ಷ ಪಡೆಯಬೇಕು ಎಂದು ಹೇಳಿದರು. ಬಿಇಒ ವೆಂಕಟೇಶಪ್ಪ ಮಾತನಾಡಿ, ಶಿಕ್ಷಣ ಇಲಾಖೆ ಸಾರ್ವಜನಿಕರ ಸ್ವತ್ತು. ಬೇರೆ ಇಲಾಖೆಗಳಿಗೆ ಹೋಲಿಸಿದರೆ ಶಿಕ್ಷಣ ಇಲಾಖೆ ಮನುಷ್ಯನ ಮದುಳು ಇದ್ದಂತೆ ಇದನ್ನು ಸರಿಯಾಗಿ ಬಳಸಿಕೊಂಡರೆ ಸಮಾಜಕ್ಕೆ ಉತ್ತಮ ಭವಿಷ್ಯವಿದೆ. ಸರಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ಬಹುತೇಕ ಮಕ್ಕಳು ಬಡ ಮಕ್ಕಳಾಗಿದ್ದು, ಸರ್ಕಾರ ಹಾಗೂ ದಾನಿಗಳು ನೀಡುವ ಸೌಲಭ್ಯಗಳನ್ನು ಪಡೆದು ಸಮಾಜಕ್ಕೆ ಒಳ್ಳೆಯ ಹೆಸರು ತನ್ನಿ ಎಂದು ಹೇಳಿದರು.

ಸ್ಕೋಪ್‌, ಗ್ರೀನ್‌ ಬೋರ್ಡ್‌, ಯುಪಿಎಸ್‌ ಸೇರಿದಂತೆ ಹಲವು ಸಾಮಗ್ರಿಗಳನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ವಿತರಣೆ ಮಾಡಲಾಯಿತು. ಬಿಇಒ ವೆಂಕಟೇಶಪ್ಪ, ರೋಟರಿ ಬೆಂಗಳೂರು ಅಲಸೂರು ಸಂಸ್ಥೆಯ ಸಂತೋಷ್‌, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ನಂದನ ಹೊಸಹಳ್ಳಿ ಪ್ರೌಡಶಾಲೆ ಪ್ರಭಾರ ಮುಖ್ಯಶಿಕ್ಷಕ ಜನಾರ್ದನರೆಡ್ಡಿ, ಇಸಿಓ ರಾಜ, ಕುಸಮ, ರೋಟರಿ ಸಂಸ್ಥೆಯ ಬಸವರಾಜ್‌, ವರ್ಷ, ಸುಗು, ಸಂತಾನಲಕ್ಷ್ಮೀ, ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಶ್ರೀರಾಮಪ್ಪ, ಅಮಿಟಿಹಳ್ಳಿ ಶಾಲೆಯ ಮುಖ್ಯಶಿಕ್ಷಕ, ಸತ್ಯನಾರಾಯಸ್ವಾಮಿ, ಶಿಕ್ಷಕರಾದ ರಾಜಗೋಪಾಲ್‌, ಶ್ವೇತಾ, ನಾಗೇಶ್‌, ಕೇಶವ ಡಿ, ಶ್ರೀಹರಿ, ರಂಗೇನಹಳ್ಳಿ ಶಾಲೆಯ ಅನುಷಾ. ಪದ್ಮ. ವೆಂಕಟರೆಡ್ಡಿ, ನಾಗರಾಜ್‌ ಇತರರಿದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.