ಜಿಲ್ಲೆಯಲ್ಲಿ 5ರಿಂದ ಅದಾಲತ್‌

7ರವರೆಗೆಕಾರ್ಯಕ್ರಮ | ರಾಜ್ಯಾದ್ಯಂತ ನಡೆಸಲು ತೀರ್ಮಾನ: ಶಿವಶಂಕರ್‌

Team Udayavani, Oct 2, 2020, 1:48 PM IST

ಜಿಲ್ಲೆಯಲ್ಲಿ 5ರಿಂದ ಅದಾಲತ್‌

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಪ್ರಥಮ ಬಾರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ 06 ತಾಲೂಕುಗಳಲ್ಲಿ ಅಕ್ಟೋಬರ್‌ 5 ರಿಂದ 7ವರೆಗೆ ರಾಜ್ಯ ಆಹಾರ ಆಯೋಗದಿಂದ ಅದಾಲತ್‌ ನಡೆಸಲಾಗುತ್ತಿದ್ದು, ನಾಗರಿಕರು ಈ ಕಾರ್ಯಕ್ರಮವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎಚ್‌ .ವಿ.ಶಿವಶಂಕರ್‌ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರ ಆಯೋಗ ರಾಷ್ಟ್ರೀಯ ಭದ್ರತಾ ಕಾಯ್ದೆ 2013 ರ ಅಡಿಯಲ್ಲಿ ಬರುವ ಆಹಾರ ಇಲಾಖೆ, ಅಂಗನವಾಡಿಗಳು, ಆಹಾರ ಗೋದಾಮುಗಳು, ಆಸ್ಪತ್ರೆಗಳಿಗೆ ಮಾತ್ರ ಭೇಟಿ ನೀಡಲಾಗುತ್ತಿತ್ತು. ಆದರೆ ಪ್ರಥಮ ಬಾರಿಗೆ ರಾಜ್ಯಾದ್ಯಂತ ಅದಾಲತ್‌ ನಡೆಸಲು ತೀರ್ಮಾನಿಸಿ, ಮೊದಲು ಚಿಕಬಳ್ಳಾಪುರಜಿಲ್ಲೆಯಿಂದ ಪ್ರಾರಂಭ ಮಾಡಲಾಗುತ್ತದೆ ಎಂದು ತಿಳಿಸಿದರು.

ಪಿಂಚಣಿ, ಕೃಷಿ, ನೀರಾವರಿ: ಅದಾಲತ್‌ ನಡೆಸಲು ಆಹಾರ ನಾಗರಿಕ ಸರಬರಾಜು ಇಲಾಖೆ, ಸಾಮಾಜಿಕಬದ್ರತಾ ಮತ್ತು ಪಿಂಚಣಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಅದಾಲತ್‌ ನಡೆಸಲು ಆಯೋಗ ತೀರ್ಮಾನಿಸಲಾಗಿದೆ. ಭದ್ರತಾ ಕಾಯ್ದೆ ಶೆಡ್ಯೂಲ್‌ 3 ರಲ್ಲಿ ಬರುವ ಪಿಂಚಣಿ, ಕೃಷಿ, ನೀರಾವರಿಯನ್ನು ಆದ್ಯತೆ ಮೇರೆಗೆ ತೆಗೆದುಕೊಳ್ಳಲಾಗಿದೆ ಎಂದರು. 5,469 ಫಲಾನುಭವಿಗಳು: ಸಾಮಾಜಿಕ ಭದ್ರತಾ ಮತ್ತು ಪಿಂಚಣಿ ನಿರ್ದೇಶನಾಲಯದಿಂದ ಒಟ್ಟು 12 ಯೋಜನೆಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 5,469 ಫಲಾನುಭವಿಗಳಿದ್ದಾರೆ ಹಾಗೂ ಸಾಮಾಜಿಕ ಭದ್ರತಾ ಮತ್ತು ಪಿಂಚಣಿ ನಿರ್ದೇಶನಾಲಯದಲ್ಲಿ 2,129 ಅರ್ಜಿಗಳು ಬಾಕಿ ಇವೆ ಮತ್ತು ವಿಲಕಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯಲ್ಲಿ 816 ಜನ ಫಲಾನುಭವಿಗಳಿದ್ದಾರೆ. ಅದಾಲತ್‌ ಕಾರ್ಯಕ್ರಮ ವ್ಯಾಪಕವಾಗಿ ಪ್ರಚಾರ ಮಾಡುವ ಮೂಲಕ ಸಮಾಜದ ಕಟ್ಟಕಡೆಯವ್ಯಕ್ತಿಗೂ ತಲುಪಿ ಇದರ ಪ್ರಯೋಜನ ಪಡೆದುಕೊಳ್ಳುವಂತಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಆಹಾರ ಆಯೋಗದ ಸದಸ್ಯರಾದ ಬಿ.ಎ ಮಹಮ್ಮದ್‌ ಅಲಿ, ಮಂಜುಳಾ ಆರ್‌ ಸಾತನೂರ್‌, ಜಿಲ್ಲಾ—ಕಾರಿ ಆರ್‌ ಲತಾ, ಜಿಲ್ಲಾ ಪಂಚಾಯತ್‌ ಸಿಇಒ ಪಿ. ಶಿವಶಂಕರ್‌, ಅಪರ ಜಿಲ್ಲಾ—ಕಾರಿ ಎಚ್‌ ಅಮರೇಶ್‌, ಆಹಾರ, ನಾಗರಿಕ ಸರಬರಾಜ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ಸವಿತಾ, ಮಹಿಳಾ ಮತ್ತು

ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾ—ಕಾರಿಗಳಾದ ಜ್ಯೋತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

ಅದಾಲತ್‌ ವಿವರ :  ಅಕ್ಟೋಬರ್‌5 ರಂದು ಗೌರಿಬಿದನೂರು ತಾಲೂಕಿನ ತಾಪಂ ಸಭಾಂಗಣದಲ್ಲಿ ಬೆಳಗ್ಗೆ 10 ರಿಂದ12 ಗಂಟೆಯವರೆಗೆ, ಮಧ್ಯಾಹ್ನ2ರಿಂದ 4 ಗಂಟೆಯವರೆಗೆ ಗುಡಿಬಂಡೆ  ತಾಲೂಕಿನ ತಾಲೂಕುಕಚೇರಿ ಸಭಾಂಗಣದಲ್ಲಿ,6 ರಂದು ಬಾಗೇಪಲ್ಲಿ ತಾ. ತಾಪಂ ಸಭಾಂಗಣದಲ್ಲಿ ಬೆಳಗ್ಗೆ 10 ರಿಂದ12 ಗಂಟೆ, ಮಧ್ಯಾಹ್ನ2ರಿಂದ4 ಗಂಟೆಯವರೆಗೆ ಚಿಕ್ಕಬಳ್ಳಾಪುರ ನಗರದ

ಡಾ ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ, ಅ.7 ರಂದು ಶಿಡÛಘಟ್ಟ ತಾಲೂಕಿನ ತಾಲೂಕು ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 10 ರಿಂದ12 ಗಂಟೆಯವರೆಗೆ, ಮಧ್ಯಾಹ್ನ2ರಿಂದ4 ಗಂಟೆಯವರೆಗೆ ಚಿಂತಾಮಣಿ ತಾಲೂಕಿನ ತಾಪಂ ಸಭಾಂಗಣದಲ್ಲಿ ಅದಾಲತ್‌ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಎಚ್‌.ವಿ.ಶಿವಶಂಕರ್‌ ತಿಳಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

Chikkaballapura: ಹೋಟೆಲ್ ಗೆ ನುಗ್ಗಿದ ಟಿಪ್ಪರ್; ಇಬ್ಬರು ಸಾವು

ಅತ್ಯಾಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

Chikkaballapura: ಅತ್ಯಾ*ಚಾರಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

1-asaas

Sidlaghatta; ಚರಂಡಿಗೆ ಉರುಳಿದ ಸರಕಾರಿ ಬಸ್: ತಪ್ಪಿದ ಅವಘಡ

1-aaaa

Chikkaballapura: ಮರು ಮದುವೆ ಒಪ್ಪಿ ವ್ಯಕ್ತಿಗೆ 7.40 ಲಕ್ಷ ರೂ. ವಂಚಿಸಿದ್ದ ಮಹಿಳೆ, ಬಂಧನ

1-PE-a1

Pradeep Eshwar; ರಾಜಕಾರಣದಲ್ಲಿ ತುಂಬಾ ಜನರನ್ನ ಡ್ಯಾನ್ಸ್ ಮಾಡಿಸಿದ್ದೀನಿ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.