ಸಂಘ, ಸಂಸ್ಥೆಗಳಿಗೆ ಆರಂಭದ ಶೂರತ್ವ ಬೇಡ


Team Udayavani, Jul 1, 2019, 3:00 AM IST

sangha-sam

ಚಿಕ್ಕಬಳ್ಳಾಪುರ: ಪ್ರಾರಂಭದಲ್ಲಿ ಶೂರತ್ವ ಮೆರೆದು ಹುಟ್ಟಿಕೊಳ್ಳುವ ಕೆಲವು ಸಂಘ ಸಂಸ್ಥೆಗಳು ಬಳಿಕ ಕೆಲವೇ ದಿನಗಳಲ್ಲಿ ಶೂನ್ಯತ್ವ ತಲುಪಿ ಚಟುವಟಿಕೆಗಳಿಲ್ಲದೇ ಮುಚ್ಚಿಕೊಳ್ಳುತ್ತಿದೆ. ಇದರಿಂದಾಗಿ ಸಂಘ ಸಂಸ್ಥೆಗಳನ್ನು ಸಮಾಜದಲ್ಲಿ ಬೇಸರ ಹಾಗೂ ಅನುಮಾನದಿಂದ ನೋಡುವಂತಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷೆ ಗೀತಾ ಜಯೇಂದರ್‌ ತಿಳಿಸಿದರು.

ಜಿಲ್ಲೆಯ ಗೌರಿಬಿದನೂರು ನಗರದ ಡಾ.ಎಚ್‌.ಎನ್‌.ಪ್ರಾಥಮಿಕ ಶಾಲೆಯ ಆವರಣದಲ್ಲಿ ಶ್ರೀಗೌರಿ ಸೇವಾ ಟ್ರಸ್ಟ್‌ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಜನಪರ ಕಾರ್ಯಗಳನ್ನು, ಸಾಂಸ್ಕೃಕ ಚಟುವಟಿಕೆಗಳನ್ನು ನಡೆಸಲು ಸಂಸ್ಥೆಗಳು ಬೇಕಾಗಿದೆ. ಆದರೆ ಆರ್ಥಿಕ ಸೌಲಭ್ಯವನ್ನು ಹೆಚ್ಚಾಗಿಸಿಕೊಳ್ಳುವ ಉದ್ದೇಶವನ್ನು ಹೊಂದಿದಲ್ಲಿ ಸಂಸ್ಥೆಗಳು ನೆಲಕಚ್ಚುವುದು ಸಾಮಾನ್ಯದ ಸಂಗತಿ ಎಂದು ಮಾರ್ಮಿಕವಾಗಿ ಸಂಘ, ಸಂಸ್ಥೆಗಳ ಕಾರ್ಯವೈಖರಿಯನ್ನು ವಿಶ್ಲೇಷಿಸಿದರು.

ಹೆಮ್ಮರವಾಗಿ ಬೆಳೆಯಲಿ: ಗೌರಿಬಿದನೂರು ನಗರದಲ್ಲಿ ಕಳೆದ 2-3 ದಶಕಗಳ ಹಿಂದೆ ಮಾಜಿ ಶಾಸಕ ಮುಖ್ಯಮಂತ್ರಿ ಚಂದ್ರು, ಟಿ.ಎನ್‌.ಸೀತಾರಾಮ್‌, ಪಿ.ಟಿ.ಕೃಷ್ಣಮೂರ್ತಿ ಮತ್ತಿತರಿಂದ ನಾಟಕೋತ್ಸವ, ಕ್ತೀಡೋತ್ಸವ ಹಾಗೂ ಹಲವಾರು ಸಾಂಸ್ಕೃತಿ ಕಾರ್ಯಗಳು ಜರುಗುತ್ತಿದ್ದವು.

ವಿಪರ್ಯಾಸವೆಂದರೆ ಇತ್ತೀಚಿನ ದಿನಗಳಲ್ಲಿ ಕಲಾಪ್ರಕಾರಗಳನ್ನು ನಡೆಸುವ ಸಂಘಗಳು ವಾಣಿಜ್ಯೀಕರಣಕ್ಕಾಗಿ ಗಮನ ಹರಿಸುತ್ತಿದೆ. ಸಾಂಸ್ಕೃತಿಕ ಚಟುವಟಿಕೆಗಳು ಪರಂಪರೆಯನ್ನು ಕಳೆದುಕೊಳ್ಳುತ್ತಿರುವುದರಿಂದ ಸಂಘಗಳು ಕಣ್ಮರೆಯಾಗುತ್ತಿವೆ. ಆದ್ದರಿಂದ ಆರಂಭಿದಲ್ಲಿದ್ದ ಶೂರತ್ವವನ್ನು ಹೆಮ್ಮರವಾಗಿ ಬೆಳೆಸಿಕೊಳ್ಳಲು ಶ್ರಮಿಸಬೇಕೆಂದರು.

ಕಲೆಗೆ ವಯಸ್ಸು ಜಾತಿ ಇಲ್ಲ: ಬೆಂಗಳೂರಿನ ರಿಸರ್ವ್‌ ಬ್ಯಾಂಕ್‌ನ ವ್ಯವಸ್ಥಾಪಕ ಹಾಗೂ ಯಕ್ಷಗಾನ ಕಲಾವಿದ ಶ್ರೀನಿವಾಸ ಸಸ್ತಾನ ಮಾತನಾಡಿ, ಯಾವುದೇ ಕಲೆಗಳನ್ನು ಕಲಿಯಲು ಜಾತಿ, ಕುಲ, ಮತ, ಪ್ರದೇಶ, ವಯಸ್ಸಿನ ಭೇದವಿಲ್ಲ.

ಕಲಿಯಲು ಛಲ ಮತ್ತು ಗುರಿ ಇರಬೇಕು. ಯಕ್ಷಗಾನ ಎಂಬುದು ದಕ್ಷಿಣಕನ್ನಡ, ಉಡುಪಿ, ಕಾರವಾರ ಜಿಲ್ಲೆಗಳಿಗೆ ಸೀಮಿತ ಎನ್ನುವುದು ತಪ್ಪು. ಸದರಿ ಜಿಲ್ಲೆಗಳಲ್ಲಿ ಪ್ರಚಲಿತದಲ್ಲಿದ್ದು ಕಲಿಯುವವರ ಸಂಖ್ಯೆಯು ಹೆಚ್ಚಾಗಿದೆ. ಕಲೆಗಳನ್ನು ಕಲಿಯಲು ಗಮನಹರಿಸಿದಲ್ಲಿ ಮನೆಗಳಲ್ಲಿ ಮೊಬೈಲ್‌ ವೀಕ್ಷಿಸುವ ದುರಾಭ್ಯಾಸದಿಂದ ತಪ್ಪಿಸಬಹುದಾಗಿದೆ ಎಂದರು.

ಕಸಾಪ ತಾಲೂಕು ಅಧ್ಯಕ್ಷ ಎಲ್‌ಐಸಿ ರವೀಂದ್ರನಾಥ್‌, ನ್ಯಾಷನಲ್‌ ಕಾಲೇಜಿ ಕನ್ನಡ ಉಪನ್ಯಾಸಕಿ ಡಾ.ಶೈಲಜಾ ಸಪ್ತಗಿರಿ, ಅಲಕಾಪುರದ ಜಾ`ನೋದಯ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಚಂದ್ರಮೌಳಿ, ಕರುನಾಡ ಕನ್ನಡಿಗರ ರಕ್ಷಣಾ ವೇದಿಕೆಯ ಅಧ್ಯಕ್ಷ ಜಿ.ಬಾಲಾಜಿ, ಡಾ.ಎಚ್‌.ಎನ್‌.ಪ್ರಾಥಮಿಕ ಶಾಲೆಯ ಪ್ರಾಂಶುಪಾಲ ದಸ್ತಗೀರ್‌ಸಾಬ್‌ ಮಾತನಾಡಿದರು.

ಮಯೂರಿ ಕಲಾನಿಕೇತನ ವಿದ್ಯಾರ್ಥಿನಿಯರಿಂದ ಏರ್ಪಡಿಸಿದ್ದ ಭರತನಾಟ್ಯವು ಸಭಿಕರನ್ನು ಆಕರ್ಷಿಸಿತು. ಕಾರ್ಯಕ್ರಮದಲ್ಲಿ ಶಿಲ್ಪ, ವೇದಾವತಿ, ಜಯಂತಿ, ಸೌಮ್ಯ, ಮೂಕಾಂಬಿಕ ಮತ್ತಿತರರು ಉಪಸ್ಥಿತರಿದ್ದರು.

ನವೆಂಬರ್‌ಗೆ ಹಂಸಲೇಖ ಆಗಮನ: ಈ ವರ್ಷದ ನವೆಂಬರ್‌ ತಿಂಗಳಲ್ಲಿ ಕರುನಾಡ ಕನ್ನಡಿಗರ ರಕ್ಷಣಾ ವೇದಿಕೆಯ ಆಶ್ರಯದಲ್ಲಿ 3 ದಿನಗಳ ಕಾಲ 25 ನೇ ಕನ್ನಡ ನಾಡೋತ್ಸವವನ್ನು ಹಮ್ಮಿಕೊಂಡಿದ್ದ ಖ್ಯಾತ ಚಲನ ಚಿತ್ರ ಸಂಗೀತ ನಿರ್ದೇಶಕ ಹಂಸಲೇಖ, ಹರಿಕೃಷ್ಣ ಮತ್ತು ಜನಪದ ಗಾಯಕಿ ಅನನ್ಯಭಟ್‌ರಿಂದ ವಾದ್ಯಗೋಷ್ಠಿ ಏರ್ಪಡಿಸಲಾಗಿದೆ ಎಂದು ಕರುನಾಡ ಕನ್ನಡಿಗರ ರಕ್ಷಣಾ ವೇದಿಕೆಯ ಅಧ್ಯಕ್ಷ ಜಿ.ಬಾಲಾಜಿ ತಿಳಿಸಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.