ಚಿಕ್ಕಬಳ್ಳಾಪುರ: ರಕ್ತದಾನದಲ್ಲಿ ಮಾದರಿಯಾದ ಶಿರಸ್ತೆದಾರ ಮಂಜುನಾಥ್ ಮತ್ತು ಟಿ.ಟಿ ನರಸಿಂಹ


Team Udayavani, Jun 14, 2021, 3:25 PM IST

ಚಿಕ್ಕಬಳ್ಳಾಪುರ: ರಕ್ತದಾನದಲ್ಲಿ ಮಾದರಿಯಾದ ಶಿರಸ್ತೆದಾರ ಮಂಜುನಾಥ್ ಮತ್ತು ಟಿ.ಟಿ ನರಸಿಂಹ

ಚಿಕ್ಕಬಳ್ಳಾಪುರ:  ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಿ ಎಂದು ವ್ಯಾಪಕವಾಗಿ ಅರಿವು ಮತ್ತು ಜಾಗೃತಿ ಮೂಡಿಸಲಾಗುತ್ತಿದೆ ಆದರೂ ಸಹ ರಕ್ತದಾನ ಮಾಡಲು ಜನ ಹಿಂದೆ ಮುಂದೆ ನೋಡುವುದು ಸಹಜ. ಆದರೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕಂದಾಯ ಇಲಾಖೆಯಲ್ಲಿ ಶಿರಸ್ತೇದಾರರಾಗಿ ಸೇವೆ ಸಲ್ಲಿಸುತ್ತಿರುವ ಮಂಜುನಾಥ್ ಹಾಗೂ ಆರೋಗ್ಯ ಇಲಾಖೆಯಲ್ಲಿ ಲ್ಯಾಬ್ ಟೆಕ್ನೀಷಿಯನ್ ಆಗಿರುವ ಟಿ.ಟಿ ನರಸಿಂಹ ಅವರು ತಲಾ 50 ಮತ್ತು 45 ಬಾರಿಗೆ ರಕ್ತದಾನ ಮಾಡಿ ಮಾದರಿಯಾಗಿದ್ದಾರೆ.

ಜೂನ್ 14 ರಂದು ವಿಶ್ವದಲ್ಲಿ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಕೋವಿಡ್ ಸೋಂಕಿನ ಪ್ರಭಾವದಿಂದ ರಕ್ತದಾನಿಗಳ ಕೊರತೆಯೂ ಪ್ರಸಕ್ತ ಸಾಲಿನಲ್ಲಿ ಕಾಡುತ್ತಿದೆ. ಜೊತೆಗೆ ಕೋವಿಡ್-19 ಲಸಿಕೆ ಪಡೆದುಕೊಂಡ ಬಳಿಕ ಕನಿಷ್ಠ 2 ತಿಂಗಳವರೆಗೆ ರಕ್ತದಾನ ಮಾಡಲು ಸಾಧ್ಯವಿಲ್ಲದಂತಾಗಿದೆ. ಇದರಿಂದ ಜಿಲ್ಲೆಯಲ್ಲಿ ಭಾರತೀಯ ರೆಡ್‍ಕ್ರಾಸ್ ರಕ್ತನಿಧಿ ಕೇಂದ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ರಕ್ತ ಸಂಗ್ರಹ ಆಗುತ್ತಿಲ್ಲ. ಈ ಮಧ್ಯೆ ಜಿಲ್ಲೆಯಲ್ಲಿ ಶಿಡ್ಲಘಟ್ಟ ನಗರದ ತಾಲೂಕು ಕಚೇರಿಯಲ್ಲಿ ಹಕ್ಕುದಾಖಲೆ ವಿಭಾಗ ದಲ್ಲಿ ಶಿರಸ್ತೆದಾರ ಆಗಿ ಸೇವೆ ಸಲ್ಲಿಸುತ್ತಿರುವ ಕೆ.ಎನ್.ಎಂ ಮಂಜುನಾಥ್ ರಕ್ತದಾನಿಗಳಿಗೆ ಮಾದರಿಯಾಗಿದ್ದಾರೆ. ಹೌದು, ಇವರು ಇದುವರೆಗೆ ಸುಮಾರು 50 ಬಾರಿ ರಕ್ತದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಕೋಲಾರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಹೆರಿಗೆಗೆಂದು ದಾಖಲಾಗಿದ್ದ ಗರ್ಭಿಣಿಗೆ ರಕ್ತದ ಕೊರತೆ ಕಂಡಬಂದ ಹಿನ್ನೆಲೆಯಲ್ಲಿ ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ಮೊಟ್ಟಮೊದಲ ಬಾರಿಗೆ ರಕ್ತದಾನ ಮಾಡಿದ ಶಿರಸ್ತೇದಾರ ಮಂಜುನಾಥ್ ನಂತರ ವಿವಿಧಡೆ ಕಾರ್ಯ ನಿರ್ವಹಿಸಿ ಇದುವರೆಗೆ 50 ಬಾರಿ ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಿರುವ ನಿಜವಾದ ಹೀರೋ ಆಗಿದ್ದಾರೆ. ರಕ್ತದಾನ ಮಾಡುವುದು ಬಡವರ ಸೇವೆಯಿಂದ ಸಿಗುವ ತೃಪ್ತಿ ಬೇರೆ ಯಾವುದರಲ್ಲಿ ಸಿಗುವುದಿಲ್ಲ ಎನ್ನುತ್ತಾರೆ ಮಂಜುನಾಥ್.

ಶಿಡ್ಲಘಟ್ಟ ತಾಲೂಕಿನ ಆರೋಗ್ಯ ಇಲಾಖೆಯಲ್ಲಿ ಲ್ಯಾಬ್ ಟೆಕ್ನೇಷಿಯನ್ ಆಗಿ ಪ್ರಸ್ತುತ ಕೆ.ಮುತ್ತಕದಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿಯೋಜನೆಗೆ ಮೇರೆಗೆ ಸೇವೆ ಸಲ್ಲಿಸುತ್ತಿರುವ ಟಿ.ಟಿ ನರಸಿಂಹ ಈಗಾಗಲೇ 45 ಬಾರಿ ರಕ್ತದಾನ ಮಾಡಿದ್ದಾರೆ. ತಾಲೂಕು ಸರ್ಕಾರಿ ನೌಕರರ ಸಂಘದ ಕ್ರೀಡಾ ಕಾರ್ಯದರ್ಶಿ ಟಿಟಿ ನರಸಿಂಹ ಅವರು ಬಿಎ ವ್ಯಾಸಂಗ ಮಾಡುವ ವೇಳೆಯಲ್ಲಿ ಪ್ರಥಮ ಬಾರಿ ರಕ್ತದಾನ ಮಾಡಿದ್ದರು. 9 ತರಗತಿ ಎನ್.ಸಿ.ಸಿಯಲ್ಲಿ ಸೇರಿಕೊಂಡಾಗ ಅವರ ಕಾಲಿಗೆ ಪೆಟ್ಟು ಬಿದ್ದಿತ್ತು ಚಿಕ್ಕಬಳ್ಳಾಪುರದ ಸಿ.ಎಸ್.ಐ ಆಸ್ಪತ್ರೆಯಲ್ಲಿ ದಾಖಲೆ ಆಗಿದ್ದಾಗ ರಕ್ತದಾನ ಮಾಡಲು ಹಿಂಜರಿದಿದ್ದರು. ಅದರಿಂದ ಪ್ರಭಾವಿತರಾಗಿ ರಕ್ತದಾನ ಮಾಡಲು ಆರಂಭ ಮಾಡಿದ್ದು, ರಕ್ತದಾನದ ಮಹತ್ವದ ಕುರಿತು ಯುವಕರು, ಸರ್ಕಾರಿ ನೌಕರರು ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ:ಜೂ.14 ವಿಶ್ವ ರಕ್ತದಾನಿಗಳ ದಿನ; ಜೀವ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಲಿ

ವರ್ಷಕ್ಕೆ ಅಥವಾ 2 ವರ್ಷಕ್ಕೆ ಒಮ್ಮೆ ರಕ್ತದಾನ ಮಾಡುತ್ತಿದ್ದರು. ನಂತರ 6 ತಿಂಗಳಿಗೆ ಒಂದು ಬಾರಿಗೆ ಕೊಡುತ್ತಿದ್ದರು. ಆ ಮೇಲೆ 3 ತಿಂಗಳಿಗೆ ಒಮ್ಮೆ ರಕ್ತ ಕೊಡುವ ಅಭ್ಯಾಸ ಮಾಡಿಕೊಂಡಿದ್ದಾರೆ. ಕೆ.ಮುತ್ತದಕಹಳ್ಳಿ ಪಿಹೆಚ್‍ಸಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಶೆಟಲ್ ಬ್ಯಾಡ್ಮಿಂಟನ್‍ನಲ್ಲಿ ರಾಜ್ಯ ಮಟ್ಟದಲ್ಲಿ ಸ್ಪರ್ಧೆ ಮಾಡಿದರು. ಚೆಸ್‍ನಲ್ಲಿ ಮೂರು ಬಾರಿ ರಾಜ್ಯ ಮಟ್ಟಕ್ಕೆ ಹೋಗಿ ತಾಲೂಕಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಒಟ್ಟಾರೇ ಶಿಡ್ಲಘಟ್ಟ ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು ಸರ್ಕಾರಿ ನೌಕರರು ಮಾತ್ರ ಬೇರೆಯವರ ಜೀವಗಳನ್ನು ಉಳಿಸುವ ಕೆಲಸವನ್ನು ಮಾಡುತ್ತಿರುವ ಇವರ ಕಾರ್ಯವೈಖರಿಯನ್ನು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮನುಷ್ಯದ ದೇಹದಲ್ಲಿ ಮಾತ್ರ ರಕ್ತ ಉತ್ಪಾದನೆಯಾಗುತ್ತದೆ. ಸಮಾಜದಲ್ಲಿ ಆರೋಗ್ಯವಾಗಿರುವ ಪ್ರತಿಯೊಬ್ಬರು ರಕ್ತದಾನ ಮಾಡುವ ಮನೋಭಾವ ಬೆಳೆಸಿಕೊಂಡು ಅಮೂಲ್ಯ ಜೀವಗಳನ್ನು ಉಳಿಸಿಬೇಕು. ಅದರಲ್ಲೂ ವಿಶೇಷವಾಗಿ ಯುವಕರು ಮತ್ತು ವಿದ್ಯಾರ್ಥಿಗಳು ಇಂತಹ ಒಳ್ಳೆಯ ಕಾರ್ಯದಲ್ಲಿ ಪಾಲ್ಗೊಂಡು ಸಮಾಜದಲ್ಲಿ ಮಾದರಿಯಾಗಬೇಕು.

-ಕೆ.ಎನ್.ಎಂ ಮಂಜುನಾಥ್

ಒಬ್ಬರು ರಕ್ತದಾನ ಮಾಡಿದರೆ ನಾಲ್ಕು ಜನರ ಜೀವಗಳನ್ನು ಉಳಿಸಿಬಹುದಾಗಿದೆ ಅದೊಂದು ಸಂತೋಷವಾಗುತ್ತದೆ. ರಕ್ತ ಪಡೆದವರು ಪ್ರೇರಿರತಾಗಿ ಅವರು ಸಹ ರಕ್ತದಾನ ಮಾಡಲು ಮುಂದಾಗುತ್ತಾರೆ. ಆರೋಗ್ಯವಂತರು ರಕ್ತದಾನ ಮಾಡಬೇಕು. ಅದರಲ್ಲೂ ಕೊರೊನಾ ಸಂದರ್ಭದಲ್ಲಿ ರಕ್ತ ಮಾಡಬೇಕೆಂದು ಮನವಿ ಮಾಡುತ್ತೇನೆ. ರಕ್ತದಾನಿಗಳ ಗುಂಪು ಮಾಡಿಕೊಂಡಿದ್ದೇವೆ ಯಾರಿಗಾದರೂ ತುರ್ತ ರಕ್ತ ಬೇಕು ಎಂದರೇ ಪೂರೈಕೆ ಮಾಡಲು ಸಿದ್ದರಿದ್ದೇವೆ.

-ಟಿ.ಟಿ.ನರಸಿಂಹಪ್ಪ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.