Body camera: ಪೊಲೀಸರಿಗೆ ಬಾಡಿ ಕ್ಯಾಮರಾ ಕಣ್ಗಾವಲು!


Team Udayavani, Jan 6, 2024, 4:29 PM IST

Body camera: ಪೊಲೀಸರಿಗೆ ಬಾಡಿ ಕ್ಯಾಮರಾ ಕಣ್ಗಾವಲು!

ಚಿಕ್ಕಬಳ್ಳಾಪುರ: ಕೇವಲ ಮಹಾ ನಗರಗಳಲ್ಲಿ ಅದರಲ್ಲೂ ಸಂಚಾರಿ ಪೊಲೀಸರು ಮಾತ್ರ ಬಳಸುತ್ತಿದ್ದ ಬಾಡಿ ಕ್ಯಾಮರಾ ಇದೀಗ ಜಿಲ್ಲಾ, ತಾಲೂಕು ಹಂತಕ್ಕೂ ಬಂದು ತಲುಪಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ದಿಸೆಯಲ್ಲಿ ಜಿಲ್ಲೆಯ ಪೊಲೀಸರಲ್ಲಿ ನೇತಾಡುವ ಬಾಡಿ ಕ್ಯಾಮರಾಗಳು ಕಣ್ಗಾವಲು ಇಡಲಿವೆ.

ಹೌದು, ಪೊಲೀಸ್‌ ಇಲಾಖೆ ಯಲ್ಲಿ ಇನ್ನಷ್ಟು ಪಾರದರ್ಶಕತೆ ತರುವ ದಿಕ್ಕಿನಲ್ಲಿ ಜಿಲ್ಲೆಯ ಪ್ರತಿ ಪೊಲೀಸ್‌ ಠಾಣೆಗೂ ಒಂದೊಂದು ಬಾಡಿ ಕ್ಯಾಮರಾ ರವಾನಿಸಲಾಗಿದ್ದು, ಅಧಿಕಾರಿಗಳು ತಮ್ಮ ಕರ್ತವ್ಯದ ವೇಳೆ ಬಾಡಿ ಕ್ಯಾಮರಾಗಳನ್ನು ಚಾಚು ತಪ್ಪದೇ ಧರಿಸಿ ಕೆಲಸ ಮಾಡುವುದು ಕಡ್ಡಾಯವಾಗಿದೆ.

ಕರ್ತವ್ಯದ ಅವಧಿಯಲ್ಲಿ ಬಳಕೆ ಕಡ್ಡಾಯ: ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹೊಣೆ ಹೊತ್ತಿರುವ ಪೊಲೀಸರು ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರ ಮೇಲೆ ಅನುಚಿತವಾಗಿ ವರ್ತಿಸುವುದು, ಕ್ಷುಲ್ಲಕ ಕಾರಣಗಳಿಗೆ ದೌರ್ಜನ್ಯ ನಡೆಸುವುದು ಅವಾಚ್ಯ ಶಬ್ದಗಳ ಬಳಕೆ ಮಾಡಿ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುವ ಆರೋಪಗಳು ಹೆಚ್ಚಾಗಿ ವರದಿ ಆಗುತ್ತಿವೆ. ಅದೇ ರೀತಿ ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲಿರುಳು ಕೆಲಸ ಮಾಡುವ ಪೊಲೀಸರ ಮೇಲೆಯು ಸಾರ್ವಜನಿಕರು, ಕೆಲ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ರಾಜಕೀಯ ಪುಡಾರಿಗಳು ವಿಶೇಷವಾಗಿ ವಾಹನ ಸವಾರರು ವಾಹನಗಳ ತಪಾಸಣೆ ವೇಳೆ ಅಥವಾ ಇನ್ನಿತರೇ ಸಂದರ್ಭಗಳಲ್ಲಿ ಪೊಲೀಸರ ಮೇಲೆ ಏಕಾಏಕಿ ಹಲ್ಲೆ ನಡೆಸಿ ಪರಾರಿ ಆಗುವುದು ನಡೆಯುತ್ತಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಪೊಲೀಸ್‌ ವ್ಯವಸ್ಥೆಯನ್ನು ಇನ್ನಷ್ಟು ಜನಸ್ನೇಹಿ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಪೊಲೀಸರಿಗೆ ಬಾಡಿ ಕ್ಯಾಮರಾಗಳನ್ನು ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ನೀಡಲಾಗಿದೆ.

ಈ ಬಾಡಿ ಕ್ಯಾಮರಾಗಳು ಪೊಲೀಸರು ಕಡ್ಡಾಯವಾಗಿ ಭುಜಕ್ಕೆ ಸರಿಯಾಗಿ ನೇತಾಕಿ ಕೊಳ್ಳಬೇಕು, ಕೆಲಸದ ಅವಧಿಯಲ್ಲಿ ಕಡ್ಡಾವಾಗಿ ಬಳಸಬೇಕು, ಪ್ರತಿ ದಿನ ಸೆರೆಯಾಗುವ ದೃಶ್ಯಗಳನ್ನು ಭದ್ರಪಡಿಸಬೇಕೆಂದು ಸೂಚಿಸಲಾಗಿದೆ.

ಪ್ರತಿ ಠಾಣೆಗೂ ಒಂದೊಂದು ಕ್ಯಾಮರಾ: ಮೊದಲ ಹಂತದಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಪೊಲೀಸ್‌ ಠಾಣೆಗಳಿಗೂ ತಲಾ ಒಂದೊಂದು ಬಾಡಿ ಕ್ಯಾಮರಾವನ್ನು ವಿತರಿಸಲಾಗಿದೆ. ಪ್ರತಿ ದಿನ ಅದನ್ನು ಇಲಾಖೆ ಅಧಿಕಾರಿಗಳು ಕಾನೂನು ಸುವ್ಯವಸ್ಥೆ ಕಾಪಾಡುವ ವೇಳೆ ಧರಿಸಬೇಕು, ಪ್ರತಿ ದಿನ ಆಯಾ ದಿನದಲ್ಲಿ ಕ್ಯಾಮರಾ ಮೂಲಕ ಸೆರೆಯಾದ ದೃಶ್ಯಾವಳಿಗಳಿಗಳನ್ನು ತಪ್ಪದೇ ಒಂದು ಕಡೆ ಸಂಗ್ರಹಿಸಿ ಇಡಬೇಕೆಂದು ಕಟ್ಟನಿಟ್ಟಿನ ಸೂಚನೆಗಳನ್ನು ನೀಡಿ, ಬಾಡಿ ಕ್ಯಾಮರಾ ಕಾರ್ಯ ಚಟುವಟಿಕೆಗಳ ಕುರಿತು ಪೊಲೀಸ್‌ ಇಲಾಖೆ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಆರೋಪಿಗಳ ಬಂಧನ, ವಾಹನಗಳ ತಪಾಸಣೆ ವೇಳೆ ಕಡ್ಡಾಯವಾಗಿ ಕ್ಯಾಮರಾ ಧರಿಸಬೇಕು : ಇನ್ನೂ ವಾಹನಗಳ ತಪಾಸಣೆ ವೇಳೆ ಬಾಡಿ ಕ್ಯಾಮರಾವನ್ನು ಕಡ್ಡಾಯವಾಗಿ ಧರಿಸಿಯೆ ವಾಹನಗಳ ತಪಾಸಣೆ ನಡೆಸಬೇಕೆಂದು ಇಲಾಖೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ. ಜೊತೆಗೆ ಯಾವುದೇ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವಾಗ ಇಲಾಖೆ ನಿಯಾವಳಿಗಳಂತೆ ಹಲವು ಮಾರ್ಗಸೂಚಿಗಳನ್ನು ಪಾಲಿಸಬೇಕಿ ರುವುದರಿಂದ ಕಡ್ಡಾಯವಾಗಿ ಪೊಲೀಸರು ಆರೋಪಿಗಳನ್ನು ಬಂಧಿಸಿದಾಗ ಬಾಡಿ ಕ್ಯಾಮರಾ ಧರಿಸರಬೇಕೆಂದು ಸೂಚಿಸಲಾಗಿದೆ.

ಎಸ್‌ಪಿ ಹೇಳಿದ್ದೇನು? : ಕಾನೂನು ಸುವ್ಯವಸ್ಥೆ ಕಾಪಾಡುವ ವಿಚಾರ ದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಡಿಜಿ ರವರು ಸುತ್ತೋಲೆಯಂತೆ ಜಿಲ್ಲೆಯ ಪ್ರತಿ ಠಾಣೆಗೂ ಒಂದೊಂದು ಬಾಡಿ ಕ್ಯಾಮರಾ ವನ್ನು ಕೊಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕ್ಯಾಮರಾಗಳನ್ನು ತರಿಸಿಕೊಂಡು ಪೂರೈಕೆ ಮಾಡಲಾಗುವುದು. ವಾಹನಗಳ ತಪಾಸಣೆ ವೇಳೆ ಹಾಗೂ ಆರೋಪಿಗಳ ಬಂಧನದ ವೇಳೆ ಬಾಡಿ ಕ್ಯಾಮರಾ ಕಡ್ಡಾಯವಾಗಿ ಹಾಕಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆಯೆಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಎಲ್‌. ನಾಗೇಶ್‌ ಶುಕ್ರವಾರ ಉದಯವಾಣಿಗೆ ತಿಳಿಸಿದರು.

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.