Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!


Team Udayavani, Oct 10, 2024, 6:36 PM IST

0528

ಚಿಕ್ಕಬಳ್ಳಾಪುರ: ನಗರದ ಬೀದಿ ಬದಿ ವ್ಯಾಪಾರಿಗಳು ನಗರಸಭೆಗೆ ಪಾವತಿಸುವ ನೆಲ ಸುಂಕವನ್ನು ನಾವು ಪಾವತಿಸುವುದಾಗಿ ಹೇಳಿದ್ದ ಕ್ಷೇತ್ರದ ಜನಪ್ರತಿನಿಧಿಗಳು ನುಡಿದಂತೆ ನಡೆಯದ ಕಾರಣ ನಗರಸಭೆ ಅ.15ಕ್ಕೆ ನೆಲ ಸುಂಕ ವಸೂಲಾತಿಗೆ ಬಹಿರಂಗ ಹರಾಜಿಗೆ ಟೆಂಡರ್‌ ಕರೆದಿದೆ.

ಪಾವತಿಸುವ ನೆಲ ಸುಂಕವನ್ನು ವ್ಯಾಪಾರಿಗಳಿಗೆ ಹೊರೆಯಾಗದಂತೆ ನಾವೇ ಪಾವತಿಸುವುದಾಗಿ ಶಾಸಕ ರಾದ ಆರಂಭದಲ್ಲಿ ಪ್ರದೀಪ್‌ ಈಶ್ವರ್‌ ಘೊಷಿಸಿದ್ದರು. ಆದರೆ ಅದು ಕಾರ್ಯಗತ ಆಗಲೇ ಇಲ್ಲ. ಸದ್ಯ ನಗರಸಭೆ ತನ್ನ ಆದಾಯ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ನೆಲ ಸುಂಕ ವಸೂಲಾತಿಗೆ ಬಹಿರಂಗ ಟೆಂಡರ್‌ ಕರೆದಿದೆ. ಆ ಮೂಲಕ ಇನ್ನು ಮುಂದೆ ನಗರದ ಬೀದಿ ಬದಿ ವ್ಯಾಪಾರಿಗಳಿಗೆ ಸುಂಕ ಕಟ್ಟುವುದು ಅನಿರ್ವಾಯವಾಗಲಿದೆ. ಈ ಮೊದಲು ಶಾಸಕರಾಗಿದ್ದ ಡಾ.ಕೆ.ಸುಧಾಕರ್‌ ಹಲವು ವರ್ಷಗಳ ಕಾಲ ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ತಮ್ಮ ಟ್ರಸ್ಟ್‌ ಮೂಲಕ ನೆಲ ಸುಂಕ ಪಾವತಿ ಮಾಡಿ ನೆರವಾಗಿದ್ದರು. ಬಳಿಕ ಕ್ಷೇತ್ರದ ಶಾಸಕರಾದ ಪ್ರದೀಪ್‌ ಈಶ್ವರ್‌ ಬೀದಿ ಬದಿ ವ್ಯಾಪಾರಿಗಳ ನೆಲ ಸುಂಕವನ್ನು ತಾವೇ ಭರಿಸುವುದಾಗಿ ಹೇಳಿದ್ದರು. ಆದರೆ ನಗರಸಭೆಗೆ ಶಾಸಕರ ಕಡೆಯಿಂದ ನೆಲ ಸುಂಕ ಪಾವತಿ ಆಗಿರಲಿಲ್ಲ. ಇದೀಗ ನಗರಸಭೆ ಬಹಿರಂಗ ಹರಾಜು ಕರೆದಿರುವುದು ನಗರದ ಪುಟ್‌ಪಾತ್‌ ವ್ಯಾಪಾರಿಗಳಲ್ಲಿ ನೆಲ ಸುಂಕ ಕಟ್ಟಬೇಕಾದ ಅನಿರ್ವಾಯತೆ ಇದೆ. ಇನ್ನೂ ನಗರಸಭೆ ಮಾರ್ಗಸೂಚಿ ಪ್ರಕಾರ ನೆಲ ಸುಂಕ ವಸೂಲಿಗೆ ಟೆಂಡರ್‌ ಕರೆಯುವುದು ಕಡ್ಡಾಯ. ಟೆಂಡರ್‌ ಮೂಲಕವಾದರೂ ನಗರದ ಬೀದಿ ಬದಿ ವ್ಯಾಪಾರಿಗಳ ನೆರವಿಗೆ ಕ್ಷೇತ್ರದ ಚುನಾಯಿತ ಜನಪ್ರತಿನಿಧಿಗಳು ಬರುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಸದ್ಯ ಯಾವದೇ ಚುನಾವಣೆ ಇಲ್ಲದೇ ಇರುವುದರಿಂದ ಕ್ಷೇತ್ರದ ಜನ ಪ್ರತಿನಿಧಿಗಳು ಕೊಟ್ಟ ಮಾತಿನಂತೆ ನಗರದ ಬೀದಿ ಬದಿ ವ್ಯಾಪಾರಿಗಳಿಗೆ ತಾವೇ ಹರಾಜು ಮೂಲಕ ನೆಲ ಸುಂಕ ಪಾವತಿಗೆ ಮುಂದಾಗುತ್ತಾರೋ ಅಥವ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ.

ನಗರಸಭೆಯಿಂದ 15.50 ಲಕ್ಷ ರೂ.ನೆಲ ಸುಂಕ ನಿಗದಿ: ಸ್ಥಳೀಯ ನಗರಸಭೆ 2024-25ನೇ ಸಾಲಿಗೆ ನೆಲ ಸುಂಕವನ್ನು ಜಿಎಸ್‌ಟಿ ಹೊರತುಪಡಿಸಿ 15.50 ಲಕ್ಷ ರೂ. ನಿರೀಕ್ಷಿಸಿದೆ. ಇಷ್ಟು ಮೊತ್ತವನ್ನು ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲವಾಗಲು ಕ್ಷೇತ್ರದ ಚುನಾಯಿತ ಜನಪ್ರತಿನಿಧಿಗಳು ಭರಿಸಿ ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗುತ್ತಾರ ಎಂಬುದನ್ನು ಕಾದು ನೋಡಬೇಕಿದೆ.

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

police crime

Delhi; 2000 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ!!: ಪೊಲೀಸರ ಭಾರೀ ಬೇಟೆ

1-vij

BJP; ಹುಡುಕಿದರೂ ರಮೇಶ್ ಜಾರಕಿಹೊಳಿ ಸಿಗುತ್ತಿಲ್ಲ: ವಿಜಯೇಂದ್ರ ಮಾರ್ಮಿಕ ಹೇಳಿಕೆ

GOA: ಪ್ರವಾಸಿ ಬೋಟ್ ಮುಗುಚಿ ಇಬ್ಬರಿಗೆ ಗಾಯ; 13 ಪ್ರವಾಸಿಗರ ರಕ್ಷಣೆ

GOA: ಪ್ರವಾಸಿ ಬೋಟ್ ಮುಗುಚಿ ಇಬ್ಬರಿಗೆ ಗಾಯ; 13 ಪ್ರವಾಸಿಗರ ರಕ್ಷಣೆ

1-aa-2-bg

Ratan Tata; ಪಾರ್ಸಿ ಸಂಪ್ರದಾಯದಂತೆ ರತನ್ ಟಾಟಾ ಅಂತ್ಯಕ್ರಿಯೆ: ಸರ್ವ ಧರ್ಮ ಪ್ರಾರ್ಥನೆ

Terror 2

Hizb-Ut-Tahrir ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

Vijayendra (2)

Congress ಸರಕಾರದಲ್ಲಿ ಗುದ್ದಲಿ ಪೂಜೆ ಅಲ್ಲ,ಗುದ್ದಲಿ ಕೂಡ ಕಾಣದ ಸ್ಥಿತಿ: ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

police crime

Delhi; 2000 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ!!: ಪೊಲೀಸರ ಭಾರೀ ಬೇಟೆ

1-vij

BJP; ಹುಡುಕಿದರೂ ರಮೇಶ್ ಜಾರಕಿಹೊಳಿ ಸಿಗುತ್ತಿಲ್ಲ: ವಿಜಯೇಂದ್ರ ಮಾರ್ಮಿಕ ಹೇಳಿಕೆ

kr

Udupi: ಆಟೋರಿಕ್ಷಾಕ್ಕೆ ಟೆಂಪೋ ಢಿಕ್ಕಿ: ಐವರಿಗೆ ಗಾಯ

1-deee

Chikkamagaluru: ಬಂದೂಕಿನಿಂದ ಗುಂಡು ಹಾರಿಸಿ ಕೊ*ಲೆ: ಆರೋಪಿಗೆ ಜೀವಾವಧಿ

GOA: ಪ್ರವಾಸಿ ಬೋಟ್ ಮುಗುಚಿ ಇಬ್ಬರಿಗೆ ಗಾಯ; 13 ಪ್ರವಾಸಿಗರ ರಕ್ಷಣೆ

GOA: ಪ್ರವಾಸಿ ಬೋಟ್ ಮುಗುಚಿ ಇಬ್ಬರಿಗೆ ಗಾಯ; 13 ಪ್ರವಾಸಿಗರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.