Chikkaballapura: ಮರು ಮದುವೆ ಒಪ್ಪಿ ವ್ಯಕ್ತಿಗೆ 7.40 ಲಕ್ಷ ರೂ. ವಂಚಿಸಿದ್ದ ಮಹಿಳೆ, ಬಂಧನ

ಶಿವಮೊಗ್ಗ ಮೂಲದ ಬಂಧಿತ ಕೋಮಲಾಳಿಂದ ಕುಂದಾಪುರ ನಿವಾಸಿಗೂ ಮೋಸ, ಆ್ಯಪಲ್ ಪೋನ್, 20,940 ರೂ. ನಗದು ವಶ

Team Udayavani, Aug 30, 2024, 11:23 PM IST

1-aaaa

ಚಿಕ್ಕಬಳ್ಳಾಪುರ: ಮರು ಮದುವೆ ಮಾಡಿಕೊಳ್ಳಲು ಕಲ್ಯಾಣ್ ಮ್ಯಾಟ್ರಿಮೋನಿ.ಕಾಮ್‌ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದ ಜಿಲ್ಲೆಯ ವ್ಯಕ್ತಿಗೆ ಮದುವೆ ಮಾಡಿಕೊಳ್ಳಲು ಒಪ್ಪಿ ಮೇಸೆಜ್ ಕಳಿಸಿ ಬಳಿಕ ಆತನಿಂದ 7.40 ಲಕ್ಷ ರೂ. ಹಣ ಪಡೆದು ವಂಚಿಸಿದ್ದ ಶಿವಮೊಗ್ಗ ಮೂಲದ ಮಹಿಳೆಯನ್ನು ಜಿಲ್ಲೆಯ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮಹಿಳೆಯನ್ನು ಶಿವಮೊಗ್ಗ ಮೂಲದ ಕೋಮಲಾ ಎಂದು ಗುರುತಿಸಲಾಗಿದೆ. ಮಹಿಳೆಯಿಂದ  ಆ್ಯಪಲ್ ಪೋನ್, 20,940 ರೂಪಾಯಿ ನಗದನ್ನು ಪೊಲೀಸರು ವಶಪಡಿಸಿದ್ದಾರೆ.  ಈಕೆಯ ಪತಿ ಕೆಪಿಟಿಸಿಎಲ್ ನೌಕರರಾಗಿ 2017 ರಲ್ಲಿ ಮೃತಪಟ್ಟಿದ್ದು, ಬಳಿಕ ಆಕೆಯು ಬೆಂಗಳೂರಿನಲ್ಲಿ ನೆಲೆಸಿ ತನ್ನ ವಿಲಾಸಿ ಜೀವನಕ್ಕಾಗಿ ಹಲವು ಪುರುಷರಿಗೆ ಇದೇ ರೀತಿ ವಂಚನೆ ಮಾಡಿ ಲಕ್ಷಾಂತರ ರೂಪಾಯಿ ಹಣ ಪಡೆದಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಜಿಲ್ಲೆಯ ಗೌರಿಬಿದನೂರಿನ ಸುಮಂಗಲಿ ಬಡಾವಣೆ ನಿವಾಸಿ ರಾಘವೇಂದ್ರ ಬಿನ್ ದೊಡ್ಡಲಿಂಗಪ್ಪ (35) ಮರು ಮದುವೆಯಾಗಲು ಕಲ್ಯಾಣ್ ಮ್ಯಾಟ್ರಿಮೋನಿ.ಕಾಮ್ ನಲ್ಲಿ, ರಿಜಿಸ್ಟರ್ ಮಾಡಿದ್ದು ಕೋಮಲ ಕೂಡ ಮಾಟ್ರಿಮೋನಿ ಐಡಿಗೆ ರಿಕ್ವೆಸ್ಟ್‌ ಕಳುಹಿಸಿದ್ದಾಳೆ.

ಬಳಿಕ ಮೊಬೈಲ್‌ನಿಂದ ರಾಘವೇಂದ್ರಗೆ ಮೆಸೇಜ್ ಮಾಡಿ ತನ್ನ ಗಂಡ ತೀರಿ ಹೋಗಿದ್ದು ಮಕ್ಕಳಿಲ್ಲ ನಾನು ನಿನ್ನ ಜೊತೆ ಮದುವೆ ಆಗುತ್ತೇನೆಂದು ನಂಬಿಸಿ ನನ್ನ ಗಂಡನು ಮೃತ ಪರಿಹಾರ ಹಣ 6 ಕೋಟಿ ರೂಪಾಯಿಗಳು ತೆರಿಗೆ ಕಟ್ಟದ ಕಾರಣ ನನ್ನ ಬ್ಯಾಂಕ್ ಖಾತೆಯಲ್ಲಿ ಬ್ಲಾಕ್‌ ಆಗಿದ್ದು, ತೆರಿಗೆ  ಹಣ ಕಟ್ಟಲು  7,40,000 ರೂ.ಗಳನ್ನು ಬೇಕೆಂದು ಆಕೆಯ ತಾಯಿ ರಾಧಾ ಎಂಬವರ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡು ನಂತರ ಮಹಿಳೆ ರಾಘವೇಂದ್ರ ಅವರ ಫೇಸ್ ಬುಕ್ ಮತ್ತು ಇನ್ಸ್ಟಾಗ್ರಾಮ್ ನಲ್ಲಿ ಬ್ಲಾಕ್ ಮಾಡಿದ್ದಾಳೆ. ಈ ಬಗ್ಗೆ ರಾಘವೇಂದ್ರ ಸೈಬರ್ ಠಾಣೆಗೆ ದೂರು ನೀಡಿದ್ದರು.

ಕುಂದಾಪುರ ನಿವಾಸಿಗೂ ಮೋಸ:
ಬಂಧಿತ ಕೋಮಲಾ ಈ ಹಿಂದೆ ಗುಜರಾತ್ ನಲ್ಲಿ ನೆಲೆಸಿರುವ ಕುಂದಾಪುರದ ನಿವಾಸಿ ರಾಘವೇಂದ್ರ ಎಂಬವರಿಗೆ ಮೋಸ ಮಾಡಿ 25,000 ರೂ. ಹಣ ಹಾಕಿಸಿಕೊಂಡಿದ್ದಳು. ಇದೇ ರೀತಿ ಬೆಂಗಳೂರು ನಗರದ ವಾಸಿಯಾದ ನಾಗರಾಜು ಕೂಡ ಮೋಸ ಮಾಡಿ 1,50,000 ರೂ. ಹಣ ಹಾಕಿಸಿಕೊಂಡಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗೆ ಈಗಾಗಲೇ 20 ವರ್ಷದ ಗಂಡು ಮಗ ಮತ್ತು 16 ವರ್ಷದ ಮಗಳಿದ್ದು ಈಕೆಯ ಗಂಡ ರಮೇಶ್ ಶಿವಮೊಗ್ಗದಲ್ಲಿ ಕೆ.ಪಿ.ಟಿ.ಸಿ.ಎಲ್. ನೌಕರನಾಗಿದ್ದು 2017 ರಲ್ಲಿ ನಿಧನರಾಗಿದ್ದಾರೆ. ತನ್ನ ವಿಲಾಸಿ ಜೀವನಕ್ಕಾಗಿ ಬೆಂಗಳೂರಿನಲ್ಲಿ ಬಾಡಿಗೆ ಮನೆ ಮಾಡಿಕೊಂಡು ಈಕೆ ಜನರಿಗೆ ಮೋಸ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆಂದು ಎಸ್ಪಿ ಕುಶಾಲ್ ಚೌಕ್ಸೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Mamath2

Doctors Protest: ಇದು ನನ್ನ ಕಡೇ ಪ್ರಯತ್ನ, ನಿಮ್ಮ ಅಕ್ಕನಾಗಿ ಬಂದಿರುವೆ ಎಂದ ಸಿಎಂ ಮಮತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

1-jds

Chikkaballapur ನಗರಸಭೆ ಚುನಾವಣೆ; ಇಬ್ಬರು ಸದಸ್ಯರು ಕಾಣುತ್ತಿಲ್ಲ: ಜೆಡಿಎಸ್ ಅಳಲು!

WhatsApp Image 2024-09-10 at 21.18.28

BJP ಯೋಜನೆಗಳಿಗೆ ಕಾಂಗ್ರೆಸ್‌ ಟೇಪ್‌ ಕತ್ತರಿಸುತ್ತಿದೆ: ಸಂಸದ ಸುಧಾಕರ್‌

Chintamani: ಖಾಸಗಿ ಬಸ್ ಬೊಲೆರೋ ವಾಹನದ ನಡುವೆ ಡಿಕ್ಕಿ; ಓರ್ವ ಸಾವು

Chintamani: ಖಾಸಗಿ ಬಸ್ ಬೊಲೆರೋ ವಾಹನದ ನಡುವೆ ಡಿಕ್ಕಿ; ಓರ್ವ ಸಾವು

373 ಶಾಲೆಗಳಲ್ಲಿ ಆಂಗ್ಲ ತರಗತಿ ಆರಂಭಕ್ಕೆ ಅಸ್ತು; 2ನೇ ಹಂತದ ತರಗತಿ ಆರಂಭಕ್ಕೆ ಅಂಗೀಕಾರ

373 ಶಾಲೆಗಳಲ್ಲಿ ಆಂಗ್ಲ ತರಗತಿ ಆರಂಭಕ್ಕೆ ಅಸ್ತು; 2ನೇ ಹಂತದ ತರಗತಿ ಆರಂಭಕ್ಕೆ ಅಂಗೀಕಾರ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

16

Kumble: ವಿದ್ಯಾರ್ಥಿಗೆ ಹಲ್ಲೆ

15

Belthangady: ನೇಣುಬಿಗಿದು ವ್ಯಕ್ತಿ ಸಾವು

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Duleep Trophy: ಪ್ರಥಮ್‌ ಸಿಂಗ್‌, ತಿಲಕ್‌ ವರ್ಮ ಶತಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.