Chintamani: ಖಾಸಗಿ ಬಸ್ ಬೊಲೆರೋ ವಾಹನದ ನಡುವೆ ಡಿಕ್ಕಿ; ಓರ್ವ ಸಾವು
Team Udayavani, Sep 10, 2024, 4:14 PM IST
ಚಿಂತಾಮಣಿ (ಚಿಕ್ಕಬಳ್ಳಾಪುರ): ಖಾಸಗಿ ಬಸ್ ಮತ್ತು ಟೊಮೆಟೋ ಸಾಗಾಣೆಕೆ ಮಾಡುವ ಬೊಲೆರೋ ವಾಹನದ ನಡುವೆ ಡಿಕ್ಕಿ ಸಂಭವಿಸಿ ಬೊಲೆರೋ ವಾಹನದ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿಂತಾಮಣಿ-ಚೇಳೂರು ರಸ್ತೆಯ ಸಿದ್ದೇಪಲ್ಲಿ ಕ್ರಾಸ್ ಬಳಿ ಬೆಳಿಗ್ಗೆ ಸುಮಾರು 7 ಗಂಟೆ ಸಮಯದಲ್ಲಿ ನಡೆದಿದೆ.
ಅಪಘಾತದಲ್ಲಿ ಸಾವನ್ನಪ್ಪಿರುವ ಟೊಮೆಟೋ ಸಾಗಾಣೆಕೆ ಮಾಡುವ ಬೊಲೆರೋ ವಾಹನದ ಚಾಲಕನನ್ನು ಚೇಳೂರು ತಾಲ್ಲೂಕು ಪಾತಪಾಳ್ಯ ಸಮೀಪದ ಶಿವಪುರ ಗ್ರಾಮದ 35 ವರ್ಷದ ರೆಡ್ಡಪ್ಪ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಖಾಸಗಿ ಬಸ್ಸಿನ ಚಾಲಕ ಕಿರಣ್ ಗೆ ಗಾಯವಾಗಿದ್ದು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾನೆ. ಬಸ್ಸಿನಲ್ಲಿದ್ದ ಕೆಲ ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊರ ರೋಗಿಗಳಿಗೆ ಚಿಕಿತ್ಸೆ ಪಡೆದುಕೊಂಡು ವಾಪಸ್ಸಾಗಿದ್ದಾರೆ.
ಖಾಸಗಿ ಬಸ್ ಚಿಂತಾಮಣಿಯಿಂದ ನೆರೆ ಆಂಧ್ರಪ್ರದೇಶದ ಬಿ.ಕೊತ್ತಕೋಟೆ ಕಡೆ ಹೋಗುತ್ತಿದ್ದರೆ ಬೊಲೆರೋ ವಾಹನ ನೆರೆ ಆಂಧ್ರಪ್ರದೇಶದಿಂದ ಚಿಂತಾಮಣಿ ಎಪಿಎಂಸಿಸಿ ಟೊಮೆಟೋ ಮಾರುಕಟ್ಟೆಗೆ ಬರುತ್ತಿತ್ತು ಎನ್ನಲಾಗಿದೆ.
ಅಪಘಾತದ ರಭಸಕ್ಕೆ ಬೊಲೆರೋ ವಾಹನ ಮತ್ತು ಬಸ್ಸಿಗೆ ಸಿಕ್ಕಿ ಹಾಕಿಕೊಂಡಿತ್ತು. ಜೆಸಿಬಿ ಮೂಲಕ ಸಾರ್ವಜನಿಕರ ನೆರವಿನಿಂದ ಎರಡು ವಾಹನಗಳನ್ನು ಬೇರ್ಪಡಿಸಿದ್ದಾರೆ.
ಬೊಲೆರೋ ವಾಹನದಲ್ಲಿದ್ದ ಟೊಮೆಟೋ ಕ್ರೇಟ್ ಗಳು ಇಡೀ ರಸ್ತೆಗೆ ಬಿದ್ದ ಪರಿಣಾಮ ಸಂಚಾರ ಅಸ್ಥವ್ಯಸ್ಥವಾಗಿದ್ದು, ಸ್ಥಳಕ್ಕೆ ಅಗಮಿಸಿದ ಕೆಂಚಾರ್ಲಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಬಂದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!
Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!
Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!
Chikkaballapur ನಗರಸಭೆ ಚುನಾವಣೆ; ಇಬ್ಬರು ಸದಸ್ಯರು ಕಾಣುತ್ತಿಲ್ಲ: ಜೆಡಿಎಸ್ ಅಳಲು!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
UV Fusion: ಪ್ರಕೃತಿಯನ್ನು ಮರೆತ ನಮ್ಮ ಉಳಿವು ಅಸಾಧ್ಯ
Rummy Aata Movie: ಸೆ.20ರಿಂದ ರಮ್ಮಿ ಆಟ ಶುರು
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.