ಎಪಿಎಂಸಿಯಲ್ಲಿ ಸ್ವಚ್ಛತೆ ಮರೀಚಿಕೆ


Team Udayavani, Oct 14, 2019, 3:00 AM IST

apmc-yalli

ಚಿಂತಾಮಣಿ: ಎಪಿಎಂಸಿ ಮಾರುಕಟ್ಟೆಯಲ್ಲಿ ಸ್ವಚ್ಛತೆ, ಮೂಲಭೂತ ಸೌಲಭ್ಯಗಳಿಲ್ಲದೇ ರೈತರು ಪರದಾಡುತ್ತಿದ್ದು, ಕೂಡಲೇ ಮಾರುಕಟ್ಟೆಯಲ್ಲಿ ಸಮಸ್ಯೆಗಳನ್ನು ಈಡೇರಿಸಿ ರೈತರಿಗೆ ಅನುಕೂಲ ಮಾಡಿಕೊಡಲು ಕ್ರಮ ಕೈಗೊಳ್ಳಬೇಕಿದೆ ಎಂದು ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಮಾರುಕಟ್ಟೆ ಕಾರ್ಯದರ್ಶಿ ಉಮಾ ಅವರನ್ನು ಒತ್ತಾಯಿಸಿದ್ದಾರೆ.

ಸ್ವಚ್ಛತೆ ಮರೀಚಿಕೆ: ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಎಪಿಎಂಸಿ ಮಾರುಕಟ್ಟೆಗೆ ತರಕಾರಿ ಮತ್ತು ಟೊಮೆಟೋ ಹಾಗೂ ಗೋಡಂಬಿ ಸೇರಿದಂತೆ ಇತರೆ ತರಕಾರಿಗಳ ಹರಾಜಿಗೆ ರಾಜ್ಯದ ವಿವಿಧ ಕಡೆಗಳಿಂದ ಬಂದ ರೈತರು ಹರಾಜಿನಲ್ಲಿ ತಮ್ಮ ಬೆಳೆಗಳನ್ನು ಮಾರಾಟ ಮಾಡಿಕೊಳ್ಳುತ್ತಾರೆ. ಇದರಿಂದ ಮಾರುಕಟ್ಟೆಗೆ ಲಕ್ಷಾಂತರ ರೂ. ಆದಾಯ ಬರುತ್ತಿದ್ದರೂ ಮಾರುಕಟ್ಟೆಯಲ್ಲಿ ಮಾತ್ರ ಸ್ವಚ್ಛತೆ ಮರೀಚಿಕೆಯಾಗಿದೆ. ಕಸ ಕಡ್ಡಿ ಎಲ್ಲೆಂದರಲ್ಲಿ ಬಿಸಾಡಿದ ಪರಿಣಾಮ ಕೊಳಚೆ ನೀರು ನಿಂತು ಮಾರುಕಟ್ಟೆಯಲ್ಲ ಅವ್ಯವಸ್ಥೆಯ ಆಗರವಾಗಿದೆ.

ಗಬ್ಬುನಾರುತ್ತಿರುವ ಶೌಚಾಲಯ: ಎಪಿಎಂಸಿ ಮಾರುಕಟ್ಟೆಯಲ್ಲಿರುವ ಶೌಚಾಲಯಗಳು ದುರ್ವಾಸನೆ ಬೀರುತ್ತಿವೆ. ಉಪಯೋಗಕ್ಕೆ ಯೋಗ್ಯವಿಲ್ಲದಿರುವುದರಿಂದ ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಮಾರುಕಟ್ಟೆಗೆ ಬರುವ ರೈತರು ಪರದಾಡುವಂತಾಗಿದ್ದು, ಶೌಚಾಲಯಗಳನ್ನು ಸ್ವಚ್ಛಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಿದರು.

ಪ್ರತ್ಯೇಕ ಸ್ಥಳ ನಿಗದಿಪಡಿಸಿ: ಎಪಿಎಂಸಿ ಯಾರ್ಡ್‌ನಲ್ಲಿ ಹೆಚ್ಚಿನ ವ್ಯಾಪಾರ ಮತ್ತು ವ್ಯವಹಾರ ನಡೆಯುವುದರಿಂದ ಹೆಚ್ಚಿನ ಪೊಲೀಸ್‌ ಬಂದೋಬಸ್ತ್ ನಿಯೋಜಿಸಿ ಟ್ರಾಫಿಕ್‌ಜಾಮ್‌ ನಿಯಂತ್ರಿಸಲು ಕ್ರಮ ಜರುಗಿಸುವುದು ಮತ್ತು ಲಾರಿ, ಟೆಂಪೋ ಹಾಗೂ ಆಟೋ, ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಪ್ರತ್ಯೇಕವಾದ ಸ್ಥಳ ನಿಗದಿಡಿಪಡಿಸಿ ವಾಹನ ಕಳ್ಳತನ ನಡೆಯದಂತೆ ಮುಂಜಾಗ್ರತೆ ವಹಿಸುವುದು ಅಗತ್ಯ ಎಂದರು.

ಜಾನುವಾರು ಸಂತೆಗೆ ಸ್ಥಳ ನೀಡಿ: ಪುರಾತನ ಕಾಲದಿಂದ ನಡೆಯುತ್ತಿದ್ದ ಜಾನುವಾರುಗಳ ಸಂತೆಯ ಜಾಗವನ್ನು ಖಾಲಿ ಮಾಡಿಸಿದ್ದು, ಅನೇಕ ವರ್ಷಗಳಿಂದ ಜಾನುವಾರುಗಳ ಸಂತೆ ನಡೆಸಲು ಜಾಗವಿಲ್ಲದೇ ಖಾಸಗಿ ಜಾಗದಲ್ಲಿ ಪ್ರತಿ ಭಾನುವಾರ ಸಂತೆ ನಡೆಯುತ್ತಿದೆ. ಕೂಡಲೇ ಜಾನುವಾರುಗಳ ಸಂತೆ ನಡೆಸಲು ಸರ್ಕಾರ ಜಾಗವನ್ನು ಗುರುತಿಸಿಕೊಡಬೇಕೆಂದು ಒತ್ತಾಯಿಸಿದರು. ಕರ್ನಾಟಕ ರೈತ ಸಂಘದ ಪದಾಧಿಕಾರಿಗಳಿಂದ ಮನವಿ ಸ್ವೀಕರಿಸಿದ ಎಪಿಎಂಸಿ ಮಾರುಕಟ್ಟೆಯ ಕಾರ್ಯದರ್ಶಿ ಉಮಾ ಮಾತನಾಡಿ, ಶೀಘ್ರವೇ ನಿಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ತಿಳಿಸಿದರು.

ಜೆ.ವಿ.ರಘುನಾಥರೆಡ್ಡಿ, ಕೆ.ವೆಂಕಟರಾಮಯ್ಯ, ಎಸ್‌.ವೆಂಕಟಸುಬ್ಬಾರೆಡ್ಡಿ, ತಿಮ್ಮರಾಯಪ್ಪ, ಬಿ.ವಿ.ಶ್ರೀರಾಮರೆಡ್ಡಿ, ಸತ್ಯನಾರಾಯಣ, ಜಯರಾಮರೆಡ್ಡಿ, ವೆಂಕಟೇಶಪ್ಪ, ನರಸಿಂಹಮೂರ್ತಿ, ಸೀಕಲ್‌ ವೆಂಕಟೇಶ್‌, ತ್ಯಾಗರಾಜು, ಅಶ್ವತ್ಥಗೌಡ.ವೈ.ಎಂ, ರಾಮನ್ನ, ಎಸ್‌.ವಿ.ಗಂಗುಲಪ್ಪ, ಕೃಷ್ಣ ಸಿ.ಎಂ, ಶ್ರೀ ನಿವಾಸಪ್ರಸಾದ್‌, ಬಚ್ಚಣ್ಣ, ಮಿಲ್‌ ನಾರಾಯಣಸ್ವಾಮಿ, ಅಂಕಾಲಮಡಗು ಶ್ರೀ ರಾಮರೆಡ್ಡಿ, ಸೀತಾರಾಮರೆಡ್ಡಿ, ವೆಂಕಟರೆಡ್ಡಿ, ರಾಮಚಂದ್ರಪ್ಪ, ಆನಂದ್‌, ಮುನಯಪ್ಪ, ಆಂಜನೇಯರೆಡ್ಡಿ, ಶ್ರೀರಾಮ್‌, ನರಸಪ್ಪ, ವನಜಾಕ್ಷಮ್ಮ, ನಾಗರಾಜ್‌, ರೆಡ್ಡೆಪ್ಪ ಕೆ.ವಿ, ಸುರೇಶ್‌, ಚೋಟೂಸಾಬ್‌, ನಾರಾಯಣಸ್ವಾಮಿ, ಮಂಜುನಾಥ್‌, ನಾಗೇಶ್‌, ಚಂದ್ರಶೇಖರ್‌ ಇದ್ದರು.

ಕ್ಯಾಂಟೀನ್‌, ಬ್ಯಾಂಕ್‌ ಸ್ಥಾಪಿಸಿ: ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಕೋಟ್ಯಂತರ ರೂ. ವ್ಯವಹಾರ ನಡೆಯುತ್ತದೆ. ಆದರೆ ಮಾರುಕಟ್ಟೆಯಲ್ಲಿ ಯಾವುದೇ ಒಂದು ಬ್ಯಾಂಕ್‌ ಕೇಂದ್ರ ಇಲ್ಲದಿರುವುದು ತೀವ್ರ ತೊಂದರೆಯಾಗಿದೆ. ರೈತರಿಗೆ ಮಾರುಕಟ್ಟೆಯಲ್ಲಿ ಬಂದ ಹಣವನ್ನು ಬ್ಯಾಂಕ್‌ಗೆ ಹಾಕಬೇಕಾದರೆ ಒಂದು ಕಿ.ಮೀ ದೂರ ಹೋಗಬೇಕು. ಇದರಿಂದ ಕಳ್ಳತನವಾಗುವ ಸಾಧ್ಯತೆ ಹೆಚ್ಚು. ಆದ್ದರಿಂದ ಮಾರುಕಟ್ಟೆಯಲ್ಲೇ ಬ್ಯಾಂಕ್‌ ಸ್ಥಾಪಿಸಿದರೆ ರೈತರಿಗೆ ಅನುಕೂಲವಾಗುತ್ತದೆ. ರೈತರಿಗೆ ಉಪಾಹಾರ ಮತ್ತು ಊಟಕ್ಕೆ ಕ್ಯಾಂಟೀನ್‌ ನಿರ್ಮಿಸಬೇಕೆಂದು ಆಗ್ರಹಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.