ಪಡಿತರದಾರರಿಗೆ ಲಸಿಕೆ ಅರಿವು ಮೂಡಿಸಿ
Team Udayavani, Apr 11, 2021, 4:47 PM IST
ಗೌರಿಬಿದನೂರು: ತಾಲೂಕಿನ 45 ವರ್ಷ ಮೇಲ್ಪಟ್ಟ ಪಡಿತರ ಚೀಟಿದಾರರು ತಮ್ಮ ಆರೋಗ್ಯದ ದೃಷ್ಟಿಯಿಂದ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಈ ಮೂಲಕ ಕೋವಿಡ್ ಸೋಂಕಿನ ಕಡಿವಾಣಕ್ಕೆ ಕೈಜೋಡಿಸಬೇಕು ಎಂದು ಶಾಸಕ ಎನ್. ಎಚ್.ಶಿವಶಂಕರ ರೆಡ್ಡಿ ಮನವಿ ಮಾಡಿದರು.
ನಗರದ ಹೊರ ವಲಯದ ಮಿನಿ ವಿಧಾನ ಸೌಧದಲ್ಲಿ ತಾಲೂಕು ಕಚೇರಿಸಭಾಂಗಣದಲ್ಲಿ ನಡೆದ ನ್ಯಾಯ ಬೆಲೆ ಅಂಗಡಿ ಕಾರ್ಯದರ್ಶಿಗಳು ಮತ್ತುಮಾಲೀಕರ ಸಭೆಯಲ್ಲಿ ಮಾತನಾಡಿ,ತಾಲೂಕಿನಲ್ಲಿ ಒಟ್ಟು 111 ನ್ಯಾಯಬೆಲೆಅಂಗಡಿಗಳಿದ್ದು, ಅದರಲ್ಲಿ ಸುಮಾರು 45ವರ್ಷ ಮೇಲ್ಟಟ್ಟ ಪಡಿತರ ಚೀಟಿ ದಾರರಿದ್ದಾರೆ. ಅವರಲ್ಲಿ ಕೋವಿಡ್ ಲಸಿಕೆ ಬಗ್ಗೆ ಅರಿವು ಮೂಡಿಸುವ ಜವಾಬ್ದಾರಿ ನಿಮ್ಮದಾಗಿದೆ ಎಂದರು.
ವೃದ್ಧರಿಗೆ ಉಚಿತ ವಾಹನ: ಇದೀಗ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡಿದ್ದು, ಸರ್ಕಾರದ ಸೂಚನೆ ನೀಡಿರುವ ಕೊರೊನಾ ಮಾರ್ಗಸೂಚಿ ಬಗ್ಗೆತಿಳಿಯಬೇಕು. ಗ್ರಾಮಾಂತರ ಪ್ರದೇಶ ದಲ್ಲಿರುವ ವೃದ್ದರಿಗೆ ಉಚಿತವಾಗಿ ವಾಹನಸೌಲಭ್ಯವನ್ನು ಆರೋಗ್ಯ ಇಲಾಖೆನೀಡಿದೆ. ಇದರ ಜವಾಬ್ದಾರಿಯನ್ನು ಆಶಾ ಕಾರ್ಯಕರ್ತರು ವಹಿ ಸಿದ್ದು, ಅವರುನಿಮ್ಮ ಸಹಾಯಕ್ಕೆ ಬರಲಿದ್ದಾರೆ ಎಂದು ತಿಳಿಸಿದರು.
ಲಸಿಕೆ ಹಾಕಿಸಿಕೊಳ್ಳಲು ಸೂಚಿಸಿ: ತಹಶೀಲ್ದಾರ್ ಎಚ್.ಶ್ರೀನಿವಾಸ್ ಮಾತನಾಡಿ, ಬಹುತೇಕ ಪಡಿತರ ಚೀಟಿದಾರರ ತಪ್ಪದೇ ನಿಮ್ಮಲ್ಲಿ ಬರಲಿದ್ದು, ಅವರಿಗೆ ಕೋವಿಡ್ ಬಗ್ಗೆ ಅರಿವು ಮೂಡಿಸಿ, ಲಸಿಕೆ ಹಾಕಿಸಿಕೊಳ್ಳಲು ಸೂಚನೆ ನೀಡ ಬೇಕು. ಅರೋಗ್ಯ ಕೇಂದ್ರದಲ್ಲಿ ಸಿಗಲಿರುವ ಉಚಿತ ಲಸಿಕೆ ಪಡೆಯಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸಾಮಾಜಿಕ ಅಂತರಕಾಪಾಡಿಕೊಳ್ಳಲು ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಆಹಾರ ಶಿರಸ್ತೇದಾರ ಎ.ಸುಧಾಕರ್ರೆಡ್ಡಿ, ಆಹಾರ ನಿರೀಕ್ಷಕ ಶಶಿಕಲಾ, ನ್ಯಾಯಬೆಲೆ ಅಂಗಡಿ ಮಾಲೀಕ ಮಾ.ಕ.ರಾಮಚಂದ್ರ ಜೀಲಾಕುಂಟೆ ಗಂಗಪ್ಪ, ವಿಜಯ್, ಜಾಲೇಂದ್ರ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!
Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!
Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!
Chikkaballapur ನಗರಸಭೆ ಚುನಾವಣೆ; ಇಬ್ಬರು ಸದಸ್ಯರು ಕಾಣುತ್ತಿಲ್ಲ: ಜೆಡಿಎಸ್ ಅಳಲು!
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.