Gudibanda: ಅಂಗನವಾಡಿ ಪೌಷ್ಟಿಕ ಆಹಾರ(ಬೆಲ್ಲ) ಪೊಟ್ಟಣದಲ್ಲಿ ಸತ್ತ ಇಲಿ!?
Team Udayavani, Aug 11, 2024, 12:04 PM IST
ಗುಡಿಬಂಡೆ: ಗರ್ಭಿಣಿ ಸ್ತ್ರೀಯರು, ಬಾಣಂತಿಯರಿಗೆ ಅಂಗನವಾಡಿ ಕೇಂದ್ರದಲ್ಲಿ ವಿತರಿಸಲಾದ ಪೌಷ್ಟಿಕ ಆಹಾರ ಬೆಲ್ಲ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾಗಿದೆ.
ಗುಡಿಬಂಡೆ ತಾಲ್ಲೂಕಿನ ಹಂಪಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರುಡಾಚಾರ್ಲಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ವಿತರಿಸಲಾದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾಗಿದೆ.
ಗ್ರಾಮದ ನಿವಾಸಿ ರತ್ನಮ್ಮ ಎಂಬುವರಿಗೆ ನೀಡಿದ ಎರಡು ಆಹಾರ ಪೊಟ್ಟಣಗಳ ಪೈಕಿ ಒಂದರಲ್ಲಿ ಈ ಸತ್ತ ಇಲಿ ಕಂಡುಬಂದಿವೆ. ಕೂಡಲೇ ಅವರು ಬೆಲ್ಲದ ಪೊಟ್ಟಣಗಳನ್ನು ಅಂಗನವಾಡಿ ಕಾರ್ಯಕರ್ತೆ ಗಮನಕ್ಕೆ ತಂದಿದ್ದಾರೆ. ಪೊಟ್ಟಣದಲ್ಲಿ ಇರುವ ಬೆಲ್ಲ ಹಾಲಿಗೆ ಬಳಸಲು, ಮಕ್ಕಳಿಗೆ ಕೊಡಲು ಭಯವಾಗುತ್ತದೆ ಎಂದು ರತ್ನಮ್ಮ ಆತಂಕ ವ್ಯಕ್ತಪಡಿಸಿದರು.
ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುವ ಪೊಟ್ಟಣಗಳನ್ನು ನಾವು ಇಲ್ಲಿ ತಯಾರು ಮಾಡುವುದಿಲ್ಲ. ನಮಗೆ ಮೂಟೆಗಳಲ್ಲಿ ಬಾಗೇಪಲ್ಲಿ ತಾಲ್ಲೂಕಿನ ಯಲ್ಲಂಪಲ್ಲಿ ಎಂ.ಎಸ್.ಪಿ.ಸಿ ಯವರು ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಾರೆ. ನಾವು ಅವನ್ನು ವಿತರಿಸಿದ್ದೇವೆ ಅಷ್ಟೇ. ಪ್ಯಾಕೆಟ್ ಒಳಗೆ ಇಲಿ ಸತ್ತಿರುವುದಕ್ಕೂ ನಮಗೂ ಸಂಬಂಧವಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆ ಭಾಗ್ಯಮ್ಮ ಪ್ರತಿಕ್ರಿಯಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಅಂಗನವಾಡಿಗಳಿಗೆ ಪೂರೈಸುವ ಈ ಪೌಷ್ಟಿಕ ಆಹಾರ ಪೊಟ್ಟಣಗಳು ಬಾಗೇಪಲ್ಲಿ ತಾಲ್ಲೂಕು ಯಲ್ಲಂಪಲ್ಲಿ ಎಂ.ಎಸ್.ಪಿ.ಎಸ್ ಸಂಸ್ಥೆಯಲ್ಲಿ ತಯಾರಾಗುತ್ತಿವೆ. ತಯಾರಾದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆ ಆಗಿದೆ.
ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಿರುವವರ ಮೇಲೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಲು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka ರಾಜ್ಯದಲ್ಲಿ ಆರ್ಟಿಇ ಸೀಟಿಗಿಲ್ಲ ಕಿಮ್ಮತ್ತು!
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!
Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!
Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.