ಸರ್ಕಾರಿ ಕೆಲಸಕ್ಕೆ ವಿಳಂಬ, ಲಂಚ ಕೇಳಿದರೆ ದೂರು ಕೊಡಿ


Team Udayavani, Oct 16, 2019, 3:00 AM IST

sarkari

ಶಿಡ್ಲಘಟ್ಟ: ಸರ್ಕಾರಿ ಅಧಿಕಾರಿಗಳು ನಿಮ್ಮ ಕೆಲಸ ಮಾಡಿಕೊಡಲಿಕ್ಕೆ ವಿನಾಕಾರಣ ವಿಳಂಬ ಮಾಡಿದರೆ, ಹಾಗೂ ಲಂಚ ಕೇಳಿದರೆ ನೇರವಾಗಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಬಹುದು ಎಂದು ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್‌ಪಿ ಕೆ.ಎಸ್‌.ವೆಂಕಟೇಶ್‌ನಾಯ್ಡು ಹೇಳಿದರು. ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜನೆ ಮಾಡಲಾಗಿದ್ದ ಸಾರ್ವಜನಿಕ ಕುಂದುಕೊರತೆಗಳ ಸಭೆಯಲ್ಲಿ ಮಾತನಾಡಿದರು.

ಸರ್ಕಾರಿ ಅಧಿಕಾರಿಗಳು ಮಾತ್ರವಲ್ಲದೆ ಜನರಿಂದ ಆಯ್ಕೆಯಾಗಿರುವ ಗ್ರಾಪಂನಿಂದ ಹಿಡಿದು ಲೋಕಸಭೆವರೆಗೂ ಜನಪ್ರತಿನಿಧಿಗಳು ಕರ್ತವ್ಯ ಲೋಪವೆಸಗಿದರೆ, ಕೆಲಸ ಮಾಡಿಕೊಡಲು ಹಣ ಕೇಳಿದರೆ ಅವರ ವಿರುದ್ಧವೂ ದೂರು ನೀಡಬಹುದೆಂದರು.

ಮೌಖಿಕವಾಗಿ ದೂರು ಸಲ್ಲಿಸಬೇಡಿ: ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಕೆಲಸವಿಲ್ಲದೆ ವಿನಾಕಾರಣ ಯಾರಾದರೂ ಕಾಲಹರಣ ಮಾಡಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶವಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಂದ ಹಣ ಕೀಳುವ ಪ್ರವೃತ್ತಿ ಹೆಚ್ಚಾಗಿದೆ ಎಂದು ಕೆಲ ಸಾರ್ವಜನಿಕರು ಮೌಖಿಕವಾಗಿ ದೂರು ಸಲ್ಲಿಸಿದ್ದಾರೆ. ಆದರೆ, ಏನೇ ಇದ್ದರೂ ನೇರವಾಗಿ ಬರವಣಿಗೆಯಲ್ಲಿ ಕೊಡಿ ಎಂದು ಹೇಳಿದರು.

1 ಅರ್ಜಿಗೆ 25 ಸಾವಿರ ರೂ.ವರೆಗೂ ದಂಡ: “ನೀವು ನೀಡುವ ದೂರುಗಳು ನಿಮಗೆ ಸಂಬಂಧಿಸಿದ್ದಾಗಿರಬೇಕು, ಪೂರ್ಣ ಅಂಚೆ ವಿಳಾಸ, ಮೊಬೈಲ್‌ ಸಂಖ್ಯೆ ಕಡ್ಡಾಯವಾಗಿ ನಮೂದಿಸಿ, ಎಫ್ಐಆರ್‌ ಮಾಡುವಂತಹ ದೂರುಗಳನ್ನು ಎಸಿಬಿಗೆ ಕೊಡಿ, ತನಿಖೆಯಾಗಬೇಕಾಗಿರುವ ದೂರುಗಳನ್ನು ಲೋಕಾಯುಕ್ತರಿಗೆ ಕೊಡಿ. ಯಾವುದೇ ದೂರುಗಳನ್ನು ನೀಡುವ ಮುನ್ನಾ ಸಂಬಂಧಪಟ್ಟ ಮೇಲಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಿದ ನಂತರ ಅರ್ಜಿದಾರರ ಕೆಲಸವಾಗದಿದ್ದ ನಂತರ ಎಸಿಬಿಗೆ ದೂರು ಕೊಡಿ. ಮಾಹಿತಿ ಹಕ್ಕು ಕಾಯಿದೆಯಡಿ ದೂರು ಸಲ್ಲಿಸುವ ಮುನ್ನ ಮೇಲ್ಮನವಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದರೆ, ನಿಮ್ಮ ಅರ್ಜಿ ವಿಲೇವಾರಿಯಾಗದಿದ್ದರೆ, ಸಂಬಂಧಪಟ್ಟ ಅಧಿಕಾರಿಗೆ ಒಂದು ಅರ್ಜಿಗೆ 25 ಸಾವಿರದವರೆಗೂ ದಂಡ ವಿಧಿಸಲು ಅವಕಾಶವಿದೆ’ ಎಂದರು.

ಜಂಗಮಕೋಟೆ ನಿವಾಸಿ ರಜಿಯಾ ಎಂಬುವವರು, ನಮಗೆ ವಸತಿ ಯೋಜನೆಯಡಿ ಮನೆ ಮಂಜೂರಾಗಿದ್ದರೂ ಉದ್ದೇಶ ಪೂರ್ವಕವಾಗಿ ಹಣ ಬಿಡುಗಡೆ ಮಾಡದೇ ವಿನಾಕಾರಣ ಅಲೆದಾಡಿಸುತ್ತಿದ್ದಾರೆ ಎಂದು ದೂರು ಸಲ್ಲಿಸಿದರು. ಜೆ.ವೆಂಕಟಾಪುರ ನಿವಾಸಿ ಲಕ್ಷ್ಮೀನಾರಾಯಣಪ್ಪ, ನಮ್ಮ ಜಮೀನಿನ ವಿಚಾರದಲ್ಲಿ ನಮಗೆ ಮೋಸಮಾಡಲಾಗಿದೆ. ಈ ಬಗ್ಗೆ ಪೊಲೀಸ್‌ ಠಾಣೆಗೂ ದೂರು ಕೊಟ್ಟಿದ್ದೇನೆ. ತನಗೆ ನ್ಯಾಯಕೊಡಿ ಎಂದು ಮನವಿ ಸಲ್ಲಿಸಿದರು.

ವೈದ್ಯರ ಕೊರತೆ ನೀಗಿಸಿ: ಮುಸ್ಲಿಂ ಸಮಾಜದವರಿಗೆ ದರ್ವೇಶ್‌ ಪ್ರಮಾಣಪತ್ರ ನೀಡಲು ತಾಲೂಕು ಕಚೇರಿಯಲ್ಲಿ ಅವಕಾಶ ಕಲ್ಪಿಸುತ್ತಿಲ್ಲವೆಂದು ಮೊಹಮದ್‌ ನಿಜಾಮುದ್ದೀನ್‌ ದೂರು ಸಲ್ಲಿಸಿದರು. ಯೂನಿಟಿ ಸಿಲಸಿಲಾ ಫೌಂಡೇಶನ್‌ ಅಕ್ರಮ್‌ ಮಾತನಾಡಿ, ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ ನೀಗಿಸಬೇಕೆಂದು ಮನವಿ ಮಾಡಿದರು. ಸಭೆಯಲ್ಲಿ ತಹಶೀಲ್ದಾರ್‌ ಎಂ.ದಯಾನಂದ್‌, ತಾಲೂಕು ಆರೋಗ್ಯ ಅಧಿಕಾರಿ ವೆಂಕಟೇಶ್‌ಮೂರ್ತಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.