ಪಠ್ಯಪುಸ್ತಕ ಪರಿಷ್ಕರಣೆ ಗೊಂದಲ ನಿವಾರಿಸಲು ಆಗ್ರಹ

ವಿದ್ಯಾರ್ಥಿಗಳಿಗೆ ಕೂಡಲೇ ಉಚಿತ ಬಸ್‌ಪಾಸ್‌ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು

Team Udayavani, Jul 11, 2022, 6:15 PM IST

ಪಠ್ಯಪುಸ್ತಕ ಪರಿಷ್ಕರಣೆ ಗೊಂದಲ ನಿವಾರಿಸಲು ಆಗ್ರಹ

ಚಿಕ್ಕಬಳ್ಳಾಪುರ: ಪಠ್ಯಪುಸ್ತಕ ಪರಿಷ್ಕರಣೆ ಗೊಂದಲ ನಿವಾರಣೆ, ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ನೀಡಬೇಕೆಂದು ಆಗ್ರಹಿಸಿ ಎನ್‌ಎಸ್‌ಯುಐ ಕಾರ್ಯಕರ್ತರು ನಗರದಲ್ಲಿ ಕನ್ನಡ ಬಾವುಟದೊಂದಿಗೆ ಪ್ರತಿಭಟನೆ ನಡೆಸಿದರು.

ನಗರದ ವಿದ್ಯಾರ್ಥಿನಿಲಯದಿಂದ ಶಿಡ್ಲಘಟ್ಟದ ವೃತ್ತದವರೆಗೆ ಕನ್ನಡ ಬಾವುಟದೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರು, ರಾಜ್ಯ ಸರ್ಕಾರ ಪಠ್ಯಪುಸ್ತಕ ಗೊಂದಲ ನಿವಾರಿಸಿ, ಹಳೇ ಪುಸ್ತಕಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಮತ್ತು ವಿದ್ಯಾರ್ಥಿಗಳಿಗೆ ಕೂಡಲೇ ಉಚಿತ ಬಸ್‌ಪಾಸ್‌ ನೀಡುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಎನ್‌.ಎಸ್‌ .ಯು.ಐ ಸಂಘಟನೆಯ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್‌ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ, ಮಾನವೀಯ ಸಂದೇಶವನ್ನು ಇಡೀ ಜಗತ್ತಿನಲ್ಲಿ ಪಸರಿಸಲು ಕಾರಣಕರ್ತರಾದವರನ್ನು ಮೂಲೆಗುಂಪು ಮಾಡಿ ಅವಹೇಳನಾ ಮಾಡುವ ಕೆಲಸವನ್ನು ಪಠ್ಯಪುಸಕ್ತ ಪರಿಷ್ಕರಣಾ ಸಮಿತಿ ಮಾಡುತ್ತಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಉಗ್ರ ಹೋರಾಟ: ಜೊತೆಗೆ, ಮಕ್ಕಳಲ್ಲಿ ದೇಶಭಕ್ತಿಯನ್ನು ಬೆಳೆಸುವ ಬದಲಿಗೆ ಕೋಮುವಾದದ ಬೀಜವನ್ನು ಬಿತ್ತನೆ ಮಾಡಿ, ಮನಸ್ಸುಗಳನ್ನು ಕೆಡಿಸಿ, ಕೇಸರಿಕರಣ ಮಾಡಲು ಹೊರಟಿದೆ. ವಿದ್ಯಾರ್ಥಿಗಳಿಗೆ ನೈಜ ಸಂಗತಿಯನ್ನು ಮನವರಿಕೆ ಮಾಡಿಕೊಡಲು ಹೋರಾಟವನ್ನು ಆರಂಭಿಸಿದ್ದೇವೆ. ಪಠ್ಯಪುಸ್ತಕದ ಗೊಂದಲವನ್ನು ನಿವಾರಿಸದಿದ್ದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಶಾಂತಿಯುತ ಪ್ರತಿಭಟನೆ ಸಹಿಸುತ್ತಿಲ್ಲ: ನಾವು ಚಡ್ಡಿ ಸುಡಲು ಹೋದರೇ, ಮನೆಗೆ ನುಗ್ಗಿದ್ದೇವೆ ಎಂದು ಅಪವಾದ ಹೂರಿಸುವ ಕೆಲಸವನ್ನು ಮಾಡಿ ದ್ದಾರೆ. ಸಂವಿಧಾನಾತ್ಮಕವಾಗಿ ಶಾಂತಿಯುತವಾಗಿ ಪ್ರತಿಭಟನೆ ಮಾಡಲು ಬಿಜೆಪಿ ನೇತೃತ್ವದ ಸರ್ಕಾರ ಸಹಿಸುತ್ತಿಲ್ಲ ಎಂದು ದೂರಿದರು.

ಮಾನವೀಯ ಸಂದೇಶ ನೀಡಿ: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಭಗತ್‌ಸಿಂಗ್‌, ಮಾನವೀಯ ಸಂದೇಶವನ್ನು ನೀಡಿದರು. ಸಮಾಜವನ್ನು ಸುಧಾರಣೆ ಮಾಡಿದ ಬಸವಣ್ಣ, ಡಾ.ಬಿ.ಆರ್‌.ಅಂಬೇಡ್ಕರ್‌ ಹಾಗೂ ರಾಷ್ಟ್ರಕವಿ ಕುವೆಂಪು ಅವರಿಗೆ ಅವಹೇಳನೆ ಮಾಡುವುದನ್ನು ನಾವು ಯಾವ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದರು.

ಜನಜಾಗೃತಿ ಅಭಿಯಾನ: ನಿಜಾಂಶವನ್ನು ಇಡೀ ವಿದ್ಯಾರ್ಥಿ ಸಮುದಾಯಕ್ಕೆ ತಿಳಿಸುವ ಕೆಲಸವನ್ನು ಮಾಡುವ ಸಲುವಾಗಿ ಜನಜಾಗೃತಿ ಅಭಿಯಾನ ವನ್ನು ನಡೆಸುತ್ತಿದ್ದೇವೆ. ಜೊತೆಗೆ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಎನ್‌ಎಸ್‌ಯುಐ ಸದಾ ಬೆಂಬಲ ವ್ಯಕ್ತಪಡಿಸಿ ಹೋರಾಟ ನಡೆಸುತ್ತದೆ ಎಂದು ವಿವರಿಸಿದರು. ಎನ್‌ಎಸ್‌ಯುಐ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಯ್‌ಕುಮಾರ್‌, ರಾಜ್ಯ ಕಾರ್ಯದರ್ಶಿ ಹಾಗೂ ಚಿಕ್ಕಬಳ್ಳಾಪುರ ಉಸ್ತುವಾರಿ ದಿನೇಯ್‌ ದೀಪಕ್‌, ಜಿಲ್ಲಾಧ್ಯಕ್ಷ ಚಂದ್ರಶೇಖರ್‌, ಉಪಾಧ್ಯಕ್ಷ ಪ್ರಸನ್ನಕುಮಾರ್‌, ಶಿವಾನಂದ, ಪ್ರಧಾನ ಕಾರ್ಯದರ್ಶಿ ಮದನ್‌ ಮೋಹನ್‌, ಮುರಳಿ, ಕಾಂಗ್ರೆಸ್‌ ಸಾಮಾಜಿಕ ಜಾಲಾತಾಣ ಜಿಲ್ಲಾಧ್ಯಕ್ಷ ಶಾಹಿದ್‌ ಅಬ್ಟಾಸ್‌, ಹಮೀಮ್‌, ನರಸಿಂಹಮೂರ್ತಿ, ಸಂತೋಷ, ಸಂಘಟನೆಯ ಜಿಲ್ಲಾ, ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.