ಸೊಳ್ಳೆ ನಿಯಂತ್ರಿಸಿದರೆ ಡೆಂಘೀ ಮುಕ್ತ


Team Udayavani, Jul 31, 2019, 3:00 AM IST

solle-dengue

ಚಿಕ್ಕಬಳ್ಳಾಪುರ: ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಉತ್ತಮ ಸ್ಥಿತಿಯಲ್ಲಿ ನಿರ್ವಹಣೆ ಮಾಡಿ ಸೊಳ್ಳೆಗಳನ್ನು ನಿಯಂತ್ರಿಸಿದಲ್ಲಿ ಡೆಂಘೀ ಜ್ವರದಿಂದ ಮುಕ್ತರಾಗಬಹುದು. ಡೆಂಘೀ ಜ್ವರ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಯಾವುದೇ ಜ್ವರ ಬಂದರೂ ಮೊದಲು ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯೋಗೇಶ್‌ಗೌಡ ತಿಳಿಸಿದರು.

ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಮರ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಡೆಂಘೀ ವಿರೋಧಿ ಮಾಸಾಚರಣೆ ಪ್ರಯುಕ್ತ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜನ ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರಿ ಅವರು ಮಾತನಾಡಿದರು.

ಡೆಂಘೀ ಪ್ರಕರಣಗಳ ಹೆಚ್ಚಳ: ಜಿಲ್ಲೆಯಲ್ಲಿ ಇತ್ತೀಚೆಗೆ ಡೆಂಘೀ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದೆ. ಹಾಗಾಗಿ ಈ ರೋಗವನ್ನು ನಿಯಂತ್ರಿಸಲು ನೀರಿನ ತೊಟ್ಟಿ, ಹಳೆಯ ಟೈರು, ಮಣ್ಣಿನ ಮಡಿಕೆ ಹಾಗೂ ನೀರು ನಿಲ್ಲುವ ಸ್ಥಳಗಳನ್ನು ಸ್ವತ್ಛವಾಗಿಟ್ಟುಕೊಳ್ಳಬೇಕು. ವಾರಕ್ಕೊಮ್ಮೆ ಮನೆಯಲ್ಲಿರುವ ಡ್ರಂ, ಬ್ಯಾರಲ್‌, ಬಿಂದಿಗೆ, ಸಿಮೆಂಟ್‌ ತೊಟ್ಟಿಗಳಲ್ಲಿರುವ ನೀರು ಖಾಲಿ ಮಾಡಿ ಒಣಗಿಸಿ ಮತ್ತೆ ನೀರು ಭರ್ತಿ ಮಾಡಿಕೊಳ್ಳಬೇಕು.

ಮಳೆ ನೀರು ಸಂಗ್ರಹಣೆಯಾಗುವಂತಹ ಬಿಸಾಡಿದ ಟೈರುಗಳು, ತೆಂಗಿನ ಚಿಪ್ಪುಗಳು, ಪ್ಲಾಸ್ಟಿಕ್‌ ಕಪ್ಪುಗಳು, ಒಡೆದ ಮಡಿಕೆಗಳನ್ನು ಸೂಕ್ತ ವಿಲೇವಾರಿ ಮಾಡಬೇಕು ಹಾಗೂ ಈಡೀಸ್‌ ಸೊಳ್ಳೆಗಳು ಉತ್ಪತ್ತಿಯಾಗದಂತೆ ಎಚ್ಚರ ವಹಿಸಿ ಸೊಳ್ಳೆಯ ಕಚ್ಚುವಿಕೆಯನ್ನು ತಪ್ಪಿಸಲು ಹಗಲು, ರಾತ್ರಿ ವೇಳೆಯಲ್ಲಿ ಸೊಳ್ಳೆಯ ಪರದೆ, ಸೊಳ್ಳೆಬತ್ತಿ ಹಾಗೂ ಪೂರ್ಣವಾದ ಉಡುಪುಗಳನ್ನು ಧರಿಸಬೇಕು ಎಂದರು.

ನೀರು ನಿಲ್ಲದಂತೆ ಎಚ್ಚರ ವಹಿಸಿ: ಈಡಿಸ್‌ ಈಜಿಪೈ ಸೊಳ್ಳೆ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ರೋಗ ಹರಡಲಿದ್ದು, ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವತ್ಛ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುತ್ತವೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತವೆ. ಆದ್ದರಿಂದ ಸೊಳ್ಳೆಗಳ ಸಂತತಿ ತಡೆಗಟ್ಟಲು ಸಾರ್ವಜನಿಕರು ತಮ್ಮ ಮನೆಯ ಪರಿಸರದಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದರು.

ನಿರ್ದಿಷ್ಟವಾದ ಚಿಕಿತ್ಸೆ ಇಲ್ಲ: ಡೆಂಘೀ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧ ಅಥವಾ ಲಸಿಕೆ ಇಲ್ಲ. ರೋಗ ಲಕ್ಷಣಗಳಿಗನುಸಾರವಾಗಿ ತಜ್ಞ ವೈದ್ಯರಿಂದ ಚಿಕಿತ್ಸೆ ಪಡೆಯಬಹುದು. ಜಿಲ್ಲೆಯಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆಯನ್ನು ಉಚಿತವಾಗಿ ಪಡೆಯಬಹುದು. ಜಿಲ್ಲಾ ಆಸ್ಪತ್ರೆ ಪ್ರಯೋಗಾಲಯದಲ್ಲಿ ಡೆಂಘೀ ಜ್ವರ ಪತ್ತೆ ಹಚ್ಚಲು ವಿಶೇಷ ರಕ್ತ ಪರೀಕ್ಷೆ ಉಚಿತವಾಗಿ ಲಭ್ಯವಿರುತ್ತದೆ. ರೋಗ ಪೀಡಿತರು ವೈದ್ಯರ ಚಿಕಿತ್ಸೆಯೊಂದಿಗೆ ಹೆಚ್ಚು ದ್ರವ ರೂಪದ ಆಹಾರಗಳನ್ನು ಗಂಜಿ, ಒಆರ್‌ಎಸ್‌, ಎಳನೀರು, ಹಣ್ಣಿನ ರಸಗಳನ್ನು ಸೇವಿಸಿ ವಿಶ್ರಾಂತಿ ಪಡೆದಲ್ಲಿ ರೋಗ ನಿಯಂತ್ರಣ ಸುಲಭ ಸಾಧ್ಯವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಕಾಶ್‌, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್‌.ಎಸ್‌ ಮಹೇಶ್‌, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಧಾ, ಆರೋಗ್ಯ ಸುರಕ್ಷಿತ ಅಧಿಕಾರಿ ಜಿ.ಹರೀಶ್‌ ಉಪಸ್ಥಿತರಿದ್ದರು.

ಕರಪತ್ರ ಹಂಚಿ ಜಾಗೃತಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಗರದ ಜಿಲ್ಲಾಸ್ಪತ್ರೆಯಿಂದ ನಗರದ ಮುಖ್ಯ ರಸ್ತೆಗಳಲ್ಲಿ ಜನ ಜಾಗೃತಿ ಜಾಥಾ ನಡೆಸಿ ಡೆಂಘೀ ಜ್ವರಕ್ಕೆ ಕಾರಣವಾಗಿರುವ ಅಂಶಗಳ ಬಗ್ಗೆ ಹಾಗೂ ಜ್ವರ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಕರಪತ್ರಗಳನ್ನು ಹಂಚಿ ಅರಿವು ಮೂಡಿಸಲಾಯಿತು. ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು, ನರ್ಸಿಂಗ್‌ ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.