ಕುಡಿವ ನೀರಿಗಾಗಿ ಪಕ್ಕದ ಊರಿಗೆ ದಂಡಯಾತ್ರೆ

ಚಂಚುರಾಯನಪಲ್ಲಿ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ

Team Udayavani, Nov 6, 2020, 5:59 PM IST

ಕುಡಿವ ನೀರಿಗಾಗಿ ಪಕ್ಕದ ಊರಿಗೆ ದಂಡಯಾತ್ರೆ

ಬಾಗೇಪಲ್ಲಿ ತಾ.ತಿಮ್ಮಂಪಲ್ಲಿ ಗ್ರಾಪಂನ ಚಂಚುರಾಯನಪಲ್ಲಿ ದಲಿತಕೇರಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿರುವುದು.

ಬಾಗೇಪಲ್ಲಿ: ತಾಲೂಕಿನ ತಿಮ್ಮಂಪಲ್ಲಿ ಗ್ರಾಪಂನ ಚಂಚುರಾಯನಪಲ್ಲಿ ದಲಿತ ಕೇರಿಯಲ್ಲಿ ಸುಮಾರು 110 ಕುಟುಂಬಗಳು ವಾಸವಿದ್ದು, ಈ ದಲಿತ ಕಾಲೋನಿಯಲ್ಲಿ 540 ಜನಸಂಖ್ಯೆ ಇದೆ. ಕಳೆದ 3-4 ವರ್ಷಗಳಿಂದ ಕುಡಿಯುವ ನೀರಿನ ಇವರನ್ನು ನಿತ್ಯ ಬೆಳಗಾದರೇ ಕಾಡುತ್ತಿದೆ.

ಕುಡಿಯುವ ನೀರಿಗಾಗಿ ಹಲವು ಬಾರಿ ಮನವಿ ಸಲ್ಲಿಸಿ ಹೋರಾಟ ಮಾಡುತ್ತಿದ್ದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಾಗಲೀ, ಜನಪ್ರತಿನಿಧಿಗಳಾಗಲೀ ಮನವಿಗೆ ಸ್ಪಂದಿಸದಿರುವುದು ದಲಿತ ಕೇರಿಯ ನಿವಾಸಿಗಳ ಆಕ್ರೋಶಕ್ಕೆಕಾರಣವಾಗಿದೆ.

ಪಕ್ಕದ ಗ್ರಾಮಗಳಿಗೆ ಅಲೆದಾಟ: ಗ್ರಾಮದ ಮಹಿಳೆಯರು, ಮಕ್ಕಳು, ವೃದ್ಧರು, ಬಿಂದಿಗೆ ಹಿಡಿದು ನೀರಿಗಾಗಿ ಅಕ್ಕಪಕ್ಕದಲ್ಲಿರುವ ಹತ್ತಿರದ ಬೊಮ್ಮಯ್ಯಗಾರಿಪಲ್ಲಿ, ಮರಸನಪಲ್ಲಿ, ಗುಂಡ್ಲಪಲ್ಲಿ ಗ್ರಾಮಗಳಿಗೆ ಹೋಗಿ ನೀರು ತರಬೇಕಾದ ದುಸ್ಥಿತಿ ಇದೆ.

ಪಿಡಿಒ ಸಿಗಲ್ಲ: ಚಂಚುರಾಯನಪಲ್ಲಿ ಕಾಲೋನಿಯಲ್ಲಿ ನೀರಿನ ಸಮಸ್ಯೆ ಜಟಿಲವಾಗಿದ್ದು, ಸಮಸ್ಯೆ ಬಗ್ಗೆ ಮನವಿ ಮಾಡಲು ಬರುವ ಸಾರ್ವಜನಿಕರಿಗೆ ತಿಮ್ಮಂಪಲ್ಲಿ ಗ್ರಾಪಂ ಪಿಡಿಒ ನಾರಾಯಣಸ್ವಾಮಿಯ ದರ್ಶನ ಭಾಗ್ಯ ಸಿಗುವುದಿಲ್ಲ ಎನ್ನಲಾಗಿದೆ.

ಅನುದಾನ ದುರ್ಬಳಕೆ: 2018-19 ನೇ ಸಾಲಿನ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಸುಮಾರು 70 ಲಕ್ಷಕ್ಕೂ ಹೆಚ್ಚು ಅನುದಾನ ಗ್ರಾಮದ ಅಭಿವೃದ್ಧಿಗೆ ಬಿಡುಗಡೆಯಾಗಿ ಹಣ ಖರ್ಚಾಗಿದ್ದರೂ, ಗ್ರಾಮದಲ್ಲಿ ಮಾತ್ರ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥವಾಗಿಲ್ಲ.ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೆ ಯಾರೊಬ್ಬರೂ ಮುಂದಾಗಿಲ್ಲ.

ಪಕ್ಕದ ಗ್ರಾಮಗಳಿಗೆ ತೆರಳಿ ನೀರು ತರಬೇಕಿದೆ’ :  ಕೂಲಿ ನಾಲಿ ಮಾಡಿ ಜೀವನ ನಡೆಸುತ್ತಿದ್ದೇವೆ. ಪ್ರತಿ ದಿನ ಕೂಲಿಗೆ ಹೋಗುವ ಮುನ್ನ ಅಕ್ಕಪಕ್ಕದ ಹಳ್ಳಿಗಳಿಂದ ನೀರು ತರಬೇಕಾಗಿದೆ. ನಮ್ಮ ಗ್ರಾಮಕ್ಕೆ ಅಧಿಕಾರಿಗಳು ಬರುತ್ತಾರೆ ಹೋಗುತ್ತಾರೆ ಆದರೂ ನೀರಿನ ಸಮಸ್ಯೆ ಹೇಳಿದರೆ ತಾತ್ಕಾಲಿಕವಾಗಿ ಇತ್ಯರ್ಥಗೊಳಿಸಿ ಹೋಗುತ್ತಾರೆ. ನಂತರ ಯಥಾಸ್ಥಿತಿ. ನಮ್ಮ ಪರಿಸ್ಥಿತಿ ಯಾರಿಗೆ ಹೇಳಬೇಕು, ನೀರು ಕೊಡಲಿಕ್ಕೆ ಆಗುತ್ತಿಲ್ಲವಾದರೆ ವಿಷವಾದರೂ ಕೊಡಿ ಎಂದು ಸ್ಥಳೀಯ ನಿವಾಸಿ ಮಂಜುಳಾ ಅಳಲು ತೋಡಿಕೊಂಡರು.

ಟ್ಯಾಂಕರ್‌ ನೀರು ಸರಬರಾಜು ಸ್ಥಗಿತ :  ನೀರಿನ ಸಮಸ್ಯೆ ನೀಗಿಸುವಂತೆ ಮನವಿ ಮಾಡಿದಾಗ ಅಧಿಕಾರಿಗಳು ನಾಮ್‌ಕಾವಸ್ಥೆಗೆ ಖಾಸಗಿ ಟ್ಯಾಂಕರ್‌ನಿಂದ ನೀರನ್ನು ಹಾಗಾಗ ಗ್ರಾಮಕ್ಕೆ ಸರಬರಾಜು ಮಾಡುತ್ತಿದ್ದರೂ, ಆದರೆ ನೀರು ಸರಬರಾಜು ಮಾಡುವ ಟ್ಯಾಂಕರ್‌ ಮಾಲೀಕನಿಗೆ ಹಣ ನೀಡಿಲ್ಲ ಎಂದು ಇತ್ತೀಚೆಗೆ ಟ್ಯಾಂಕರ್‌ನಿಂದ ನೀರು ಸರಬರಾಜು ಮಾಡುವುದನ್ನು ಸ್ಥಗಿತಗೊಳಿಸಿದ್ದಾರೆ.

ಚಂಚುರಾಯನಪಲ್ಲಿ ಗ್ರಾಮದಲ್ಲಿ ಸಿಆರ್‌ಎಫ್ ಅನುದಾನದಲ್ಲಿಖಾಸಗಿ ಟ್ಯಾಂಕರ್‌ ಮೂಲಕ ಜನರಿಗೆ ನೀರು ಸರಬರಾಜು ಮಾಡಲಾಗುತ್ತಿತ್ತು. ಸ್ಥಗಿತಗೊಂಡಿರುವುದು ಗಮನಕ್ಕೆ ಬಂದಿಲ್ಲ. ಇತ್ತೀಚೆಗೆ ಒಂದು ಕೊಳವೆ ಬಾಕೊರೆಯಲಾಗಿದೆ ಆದರೂ ನೀರು ಸಿಗಲಿಲ್ಲ.ಖಾಸಗಿ ಕೊಳವೆಬಾ ಮಾಲೀಕರೊಂದಿಗೆ ಪಿಡಿಒ ಒಮ್ಮೆ ಚರ್ಚಿಸಿ ಸಮಸ್ಯೆ ಇತ್ಯರ್ಥಗೊಳಿಸಬೇಕು. ರಾಮ ಲಿಂಗಾರೆಡ್ಡಿ, ಎಇಇ ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ. ಬಾಗೇಪಲ್ಲಿ

ತಾಲೂಕಿನ ಚಂಚಯರಾಯನಪಲ್ಲಿ ಗ್ರಾಮದಲ್ಲಿ ನೀರಿನ ಸಮಸ್ಯೆ ಬಗ್ಗೆನನಗೆ ಮಾಹಿತಿ ಇಲ್ಲ. ಪಿಡಿಒ ಅವರ ಬಳಿ ಚರ್ಚೆ ಮಾಡಿ ಕೂಡಲೇ ನೀರು ಸರಬರಾಜು ಮಾಡುವಂತೆ ಸೂಚಿಸುತ್ತೇನೆ. ಎಚ್‌.ಎನ್‌.ಮಂಜುನಾಥ ಸ್ವಾಮಿ, ಇಒ, ತಾಪಂ ಬಾಗೇಪಲ್ಲಿ

 

ಪಿ.ಮಂಜುನಾಥರೆಡ್ಡಿ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.